<p><strong>ಹಾವೇರಿ</strong>: ಶಿವಮೊಗ್ಗ ಜಿಲ್ಲೆಯ ಸಿಗಂದೂರಿನ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ಹಾವೇರಿ ಜಿಲ್ಲೆಯ ಜನರಿಗಾಗಿ ವಾಕರಸಾಸಂ (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ವತಿಯಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.</p>.<p>‘ಜುಲೈ 20ರಿಂದ ಹಾವೇರಿ ಮತ್ತು ರಾಣೆಬೆನ್ನೂರು ಬಸ್ ನಿಲ್ದಾಣಗಳಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ವಿಶೇಷ ಬಸ್ಗಳು ಕಾರ್ಯಾಚರಣೆ ಪ್ರಾರಂಭಿಸಲಿವೆ’ ಎಂದು ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ತಿಳಿಸಿದ್ದಾರೆ.</p>.<p>‘ಹಾವೇರಿಯಿಂದ ಬೆಳಿಗ್ಗೆ 7.30 ಗಂಟೆಗೆ ಬಸ್ ಹೊರಡಲಿದ್ದು, ಬೆಳಿಗ್ಗೆ 11.30 ಗಂಟೆಗೆ ಸಿಗಂದೂರು ದೇವಸ್ಥಾನ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3.30 ಗಂಟೆಗೆ ಹೊರಡಲಿರುವ ಬಸ್, ಸಂಜೆ 7.30 ಗಂಟೆಗೆ ಹಾವೇರಿ ತಲುಪಲಿದೆ’ ಎಂದು ಹೇಳಿದ್ದಾರೆ.</p>.<p>‘ರಾಣೆಬೆನ್ನೂರಿನಿಂದ ಬೆಳಿಗ್ಗೆ 7.30 ಗಂಟೆಗೆ ಬಸ್ ಹೊರಡಲಿದ್ದು, ಬೆಳಿಗ್ಗೆ 11 ಗಂಟೆಗೆ ದೇವಸ್ಥಾನ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಹೊರಡಲಿರುವ ಬಸ್, ಸಂಜೆ 6.30 ಗಂಟೆಗೆ ರಾಣೆಬೆನ್ನೂರು ತಲುಪಲಿದೆ’ ಎಂದಿದ್ದಾರೆ.</p>.<p>‘ಸಂಸ್ಥೆಯ ಜಾಲತಾಣದ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಹಾವೇರಿಯಿಂದ ಸಿಗಂದೂರು ದೇವಸ್ಥಾನಕ್ಕೆ ₹ 455 ಹಾಗೂ ರಾಣೆಬೆನ್ನೂರಿನಿಂದ ಸಿಗಂದೂರಿಗೆ ₹ 430 (ಹೋಗಿ ಬರುವ) ಪ್ರಯಾಣ ದರವಿದೆ. ಈ ಬಸ್ಗಳಿಗೆ ಶಕ್ತಿ ಯೋಜನೆ ಅನ್ವಯವಾಗುವುದಿಲ್ಲ. ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಶಿವಮೊಗ್ಗ ಜಿಲ್ಲೆಯ ಸಿಗಂದೂರಿನ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ಹಾವೇರಿ ಜಿಲ್ಲೆಯ ಜನರಿಗಾಗಿ ವಾಕರಸಾಸಂ (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ವತಿಯಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.</p>.<p>‘ಜುಲೈ 20ರಿಂದ ಹಾವೇರಿ ಮತ್ತು ರಾಣೆಬೆನ್ನೂರು ಬಸ್ ನಿಲ್ದಾಣಗಳಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ವಿಶೇಷ ಬಸ್ಗಳು ಕಾರ್ಯಾಚರಣೆ ಪ್ರಾರಂಭಿಸಲಿವೆ’ ಎಂದು ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ತಿಳಿಸಿದ್ದಾರೆ.</p>.<p>‘ಹಾವೇರಿಯಿಂದ ಬೆಳಿಗ್ಗೆ 7.30 ಗಂಟೆಗೆ ಬಸ್ ಹೊರಡಲಿದ್ದು, ಬೆಳಿಗ್ಗೆ 11.30 ಗಂಟೆಗೆ ಸಿಗಂದೂರು ದೇವಸ್ಥಾನ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3.30 ಗಂಟೆಗೆ ಹೊರಡಲಿರುವ ಬಸ್, ಸಂಜೆ 7.30 ಗಂಟೆಗೆ ಹಾವೇರಿ ತಲುಪಲಿದೆ’ ಎಂದು ಹೇಳಿದ್ದಾರೆ.</p>.<p>‘ರಾಣೆಬೆನ್ನೂರಿನಿಂದ ಬೆಳಿಗ್ಗೆ 7.30 ಗಂಟೆಗೆ ಬಸ್ ಹೊರಡಲಿದ್ದು, ಬೆಳಿಗ್ಗೆ 11 ಗಂಟೆಗೆ ದೇವಸ್ಥಾನ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಹೊರಡಲಿರುವ ಬಸ್, ಸಂಜೆ 6.30 ಗಂಟೆಗೆ ರಾಣೆಬೆನ್ನೂರು ತಲುಪಲಿದೆ’ ಎಂದಿದ್ದಾರೆ.</p>.<p>‘ಸಂಸ್ಥೆಯ ಜಾಲತಾಣದ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಹಾವೇರಿಯಿಂದ ಸಿಗಂದೂರು ದೇವಸ್ಥಾನಕ್ಕೆ ₹ 455 ಹಾಗೂ ರಾಣೆಬೆನ್ನೂರಿನಿಂದ ಸಿಗಂದೂರಿಗೆ ₹ 430 (ಹೋಗಿ ಬರುವ) ಪ್ರಯಾಣ ದರವಿದೆ. ಈ ಬಸ್ಗಳಿಗೆ ಶಕ್ತಿ ಯೋಜನೆ ಅನ್ವಯವಾಗುವುದಿಲ್ಲ. ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>