ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ಈ ನೂತನ ಮಸೂದೆ ಅನ್ವಯ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರ್ಯವನ್ನು ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗದಿಪಡಿಸಲು ನೆರವು ನೀಡಲಾಗಿದೆ. ಕೃಷಿ ಉತ್ಪನ್ನಗಳ ಪಾರದರ್ಶಕ, ತಡೆರಹಿತ ಅಂತರರಾಜ್ಯ ಹಾಗೂ ರಾಜ್ಯದೊಳಗಿನ ವ್ಯಾಪಾರಕ್ಕೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.