<p><strong>ಹಾವೇರಿ</strong>: ಜಿಲ್ಲೆಯ ಬಸನಕಟ್ಟಿ ಗ್ರಾಮದಲ್ಲಿ ಕೀಟನಾಶಕ ಸಿಂಪರಣೆ ಮಾಡಿದ್ದ ಸೊಪ್ಪು ತಿಂದು ರೇಷ್ಮೆ ಹುಳುಗಳು ಮೃತಪಟ್ಟಿದ್ದು, ‘ಇದೊಂದು ವೈಷಮ್ಯದ ದುಷ್ಕೃತ್ಯ’ ಎಂದು ರೈತ ಮಹಿಳೆ ಹನುಮವ್ವ ಪಾಟೀಲ ಆರೋಪಿಸಿದ್ದಾರೆ.</p>.<p>ಗ್ರಾಮದ ನಿವಾಸಿ ಹನುಮವ್ವ ಅವರು ಮಗನ ಜೊತೆ ಸೇರಿ ರೇಷ್ಮೆ ಹುಳು ಸಾಕುತ್ತಿದ್ದರು. ಉತ್ತಮ ರೀತಿಯಲ್ಲಿ ರೇಷ್ಮೆ ಹುಳುಗಳು ಬೆಳೆಯುತ್ತಿದ್ದವು. ಅವರ ಏಳಿಗೆ ಸಹಿಸದ ಕೆಲವರು, ಸೊಪ್ಪಿಗೆ ಕೀಟನಾಶಕ ಸಿಂಪರಣೆ ಮಾಡಿ ಹುಳುಗಳನ್ನು ಸಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ರೇಷ್ಮೆ ಹುಳುಗಳು ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ರೇಷ್ಮೆ ಇಲಾಖೆಯ ಉಪನಿರ್ದೇಶಕ ಮಾಲತೇಶ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಗೂ ದೂರು ನೀಡುವಂತೆ ರೈತ ಮಹಿಳೆಗೆ ಸೂಚಿಸಿದ್ದಾರೆ.</p>.<p>‘ರೇಷ್ಮೆ ಹುಳು ಸಾಕಲು ಸೊಪ್ಪು ಬೆಳೆದಿದ್ದೆವು. ಇದೇ ಸೊಪ್ಪಿಗೆ ಯಾರೋ ಕೀಟನಾಶಕ ಸಿಂಪರಣೆ ಮಾಡಿದ್ದಾರೆ. ನಾವು ಎಂದಿನಂತೆ ಹುಳುಗಳಿಗೆ ಸೊಪ್ಪು ಹಾಕಿದ್ದೆವು. ಇದಾದ ಕೆಲ ಹೊತ್ತಿನಲ್ಲಿಯೇ ಎಲ್ಲ ರೇಷ್ಮೆ ಹುಳುಗಳು ಸತ್ತು ಬಿದ್ದಿವೆ. ಇದರಿಂದ ನಮಗೆ ₹ 3 ಲಕ್ಷ ನಷ್ಟವಾಗಿದೆ’ ಎಂದು ರೈತ ಮಹಿಳೆ ಹನುಮವ್ವ ಅಳಲು ತೋಡಿಕೊಂಡರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉಪನಿರ್ದೇಶಕ ಮಾಲತೇಶ ಪಾಟೀಲ, ‘ವಿಷಯ ಗಮನಕ್ಕೆ ಬಂದಿದೆ. ತಾಲ್ಲೂಕು ಅಧಿಕಾರಿಗಳನ್ನು ರೈತರ ಬಳಿ ಕಳುಹಿಸಿ ಪರಿಶೀಲನೆ ಮಾಡಿಸಿದ್ದೇನೆ. ಅವರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ದೂರು ನೀಡಲು ಅವಕಾಶವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ಬಸನಕಟ್ಟಿ ಗ್ರಾಮದಲ್ಲಿ ಕೀಟನಾಶಕ ಸಿಂಪರಣೆ ಮಾಡಿದ್ದ ಸೊಪ್ಪು ತಿಂದು ರೇಷ್ಮೆ ಹುಳುಗಳು ಮೃತಪಟ್ಟಿದ್ದು, ‘ಇದೊಂದು ವೈಷಮ್ಯದ ದುಷ್ಕೃತ್ಯ’ ಎಂದು ರೈತ ಮಹಿಳೆ ಹನುಮವ್ವ ಪಾಟೀಲ ಆರೋಪಿಸಿದ್ದಾರೆ.</p>.<p>ಗ್ರಾಮದ ನಿವಾಸಿ ಹನುಮವ್ವ ಅವರು ಮಗನ ಜೊತೆ ಸೇರಿ ರೇಷ್ಮೆ ಹುಳು ಸಾಕುತ್ತಿದ್ದರು. ಉತ್ತಮ ರೀತಿಯಲ್ಲಿ ರೇಷ್ಮೆ ಹುಳುಗಳು ಬೆಳೆಯುತ್ತಿದ್ದವು. ಅವರ ಏಳಿಗೆ ಸಹಿಸದ ಕೆಲವರು, ಸೊಪ್ಪಿಗೆ ಕೀಟನಾಶಕ ಸಿಂಪರಣೆ ಮಾಡಿ ಹುಳುಗಳನ್ನು ಸಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>ರೇಷ್ಮೆ ಹುಳುಗಳು ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ರೇಷ್ಮೆ ಇಲಾಖೆಯ ಉಪನಿರ್ದೇಶಕ ಮಾಲತೇಶ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಗೂ ದೂರು ನೀಡುವಂತೆ ರೈತ ಮಹಿಳೆಗೆ ಸೂಚಿಸಿದ್ದಾರೆ.</p>.<p>‘ರೇಷ್ಮೆ ಹುಳು ಸಾಕಲು ಸೊಪ್ಪು ಬೆಳೆದಿದ್ದೆವು. ಇದೇ ಸೊಪ್ಪಿಗೆ ಯಾರೋ ಕೀಟನಾಶಕ ಸಿಂಪರಣೆ ಮಾಡಿದ್ದಾರೆ. ನಾವು ಎಂದಿನಂತೆ ಹುಳುಗಳಿಗೆ ಸೊಪ್ಪು ಹಾಕಿದ್ದೆವು. ಇದಾದ ಕೆಲ ಹೊತ್ತಿನಲ್ಲಿಯೇ ಎಲ್ಲ ರೇಷ್ಮೆ ಹುಳುಗಳು ಸತ್ತು ಬಿದ್ದಿವೆ. ಇದರಿಂದ ನಮಗೆ ₹ 3 ಲಕ್ಷ ನಷ್ಟವಾಗಿದೆ’ ಎಂದು ರೈತ ಮಹಿಳೆ ಹನುಮವ್ವ ಅಳಲು ತೋಡಿಕೊಂಡರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉಪನಿರ್ದೇಶಕ ಮಾಲತೇಶ ಪಾಟೀಲ, ‘ವಿಷಯ ಗಮನಕ್ಕೆ ಬಂದಿದೆ. ತಾಲ್ಲೂಕು ಅಧಿಕಾರಿಗಳನ್ನು ರೈತರ ಬಳಿ ಕಳುಹಿಸಿ ಪರಿಶೀಲನೆ ಮಾಡಿಸಿದ್ದೇನೆ. ಅವರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ದೂರು ನೀಡಲು ಅವಕಾಶವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>