<p><strong>ಶಿಗ್ಗಾವಿ:</strong> ‘ಸಮಾಜ ಸುಧಾರಣೆಯಲ್ಲಿ ಮಹಿಳಾ ಪ್ರಾಧಾನ್ಯತೆ ಬಹಳ್ಟು ಮುಂಚೂಣಿಯಲ್ಲಿದ್ದು, ಮಹಿಳಾ ಸಮುದಾಯದಲ್ಲಿ ತಾಯಿ ಮಮಕಾರ, ಪ್ರೀತಿ, ವಾತ್ಸಲ್ಯ ಕಾಣುತ್ತೇವೆ. ಆದ್ದರಿಂದ ಮನುಷ್ಯ ಸಂಬಂಧಗಳು ಗಟ್ಟಿಗೊಳ್ಳಲು ಸಾಧ್ಯವಾಗಿದೆ’ ಎಂದು ಶಿಗ್ಗಾವಿ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ವಿನೋಧಾ ಪಾಟೀಲ ಹೇಳಿದರು.</p>.<p>ಪಟ್ಟಣದ ಪತ್ರಿ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ವಿಶ್ವ ಶಾಂತಿ ಮಹಿಳಾ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಇಂದಿನ ಕಾಲಘಟ್ಟದಲ್ಲಿ ಜಾತೀಯ ಸಂಘಟನೆಗಳ ಅವಶ್ಯಕತೆ ಎದ್ದು ಕಾಣುತ್ತಿದೆ. ಮಹಿಳೆಯರು ಜಾಗೃತರಾಗಿ ಸರ್ವ ಸಮುದಾಯದ ಮಹಿಳಾ ಸಂಘಗಳ ಮೂಲಕ ಮುಂದೆ ಬಂದಾಗ ಪ್ರಗತಿ ಕಾಣಲು ಸಾಧ್ಯವಿದೆ’ ಎಂದರು.</p>.<p>‘ಮಹಿಳಾ ಸಂಘಗಳು ಮಹಿಳೆಯರ ಸಬಲೀಕರಣ, ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಯ ಗುರಿಯೊಂದಿಗೆ ನಡೆಯುತ್ತಿವೆ. ಅಂತೆಯೇ ವಿಶ್ವಶಾಂತಿ ಮಹಿಳಾ ಸಂಘವೂ ಕೌಟುಂಬಿಕ ನಿರ್ವಹಣೆ ಜೊತೆಗೆ ಸದಾ ಮಹಿಳೆಯರ ಶ್ರೇಯೋಭಿವೃದ್ದಿಗೆ ಪೂರಕವಾಗಿ ಯಶಸ್ಸು ಕಾಣಲಿ’ ಎಂದು ಹಾರೈಸಿದರು.</p>.<p>ವಿಶ್ವ ಶಾಂತಿ ಮಹಿಳಾ ಸಂಘದ ಅಧ್ಯಕ್ಷೆ ನೇತ್ರಾವತಿ ಶಿರೋಳ ಮಾತನಾಡಿ, ‘ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು, ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವುದು, ಸಹಕಾರಿ ಚಟುವಟಿಕೆಗಳ ಮೂಲಕ ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು. ಸಂಘದ ಮುಖ್ಯ ಉದ್ದೇಶವಾಗಿದ್ದು ಸದಸ್ಯರ ಒಗ್ಗಟ್ಟಿನಿಂದ ಎಲ್ಲವೂ ಸಾಧ್ಯವಿದೆ’ ಎಂದರು.</p>.<p>ವಿಶ್ವ ಶಾಂತಿ ಮಹಿಳಾ ಸಂಘದ ಕಾರ್ಯದರ್ಶಿ ಚಂದ್ರಕಲಾ ತೆಂಬದಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು,</p>.<p>ಪತ್ರಿ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕಾಳಿಂಗಪ್ಪ ಕೋಣಪ್ಪನವರ, ಕಾರ್ಯದರ್ಶಿ ವಿ.ಎಫ್. ಹೊಸಮಣಿ, ಖಜಾಂಚಿ ಲಲಿತಾ ಕುಲಕರ್ಣಿ, ರೇಣುಕಾ ಗುಡ್ಡದಅನ್ವೇರಿ, ಶಕುಂತಲಾ ಪತ್ತಾರ,ಶಕುಂತಲಾ ಪತ್ತಾರ, ಕಾವ್ಯಾ ಬಸರೀಕಟ್ಟಿ, ಶೋಭಾ ಸಂಶಿ ಸೇರಿದಂತೆ ಸಂಘದ ಮಹಿಳಾ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ‘ಸಮಾಜ ಸುಧಾರಣೆಯಲ್ಲಿ ಮಹಿಳಾ ಪ್ರಾಧಾನ್ಯತೆ ಬಹಳ್ಟು ಮುಂಚೂಣಿಯಲ್ಲಿದ್ದು, ಮಹಿಳಾ ಸಮುದಾಯದಲ್ಲಿ ತಾಯಿ ಮಮಕಾರ, ಪ್ರೀತಿ, ವಾತ್ಸಲ್ಯ ಕಾಣುತ್ತೇವೆ. ಆದ್ದರಿಂದ ಮನುಷ್ಯ ಸಂಬಂಧಗಳು ಗಟ್ಟಿಗೊಳ್ಳಲು ಸಾಧ್ಯವಾಗಿದೆ’ ಎಂದು ಶಿಗ್ಗಾವಿ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ವಿನೋಧಾ ಪಾಟೀಲ ಹೇಳಿದರು.</p>.<p>ಪಟ್ಟಣದ ಪತ್ರಿ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ವಿಶ್ವ ಶಾಂತಿ ಮಹಿಳಾ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಇಂದಿನ ಕಾಲಘಟ್ಟದಲ್ಲಿ ಜಾತೀಯ ಸಂಘಟನೆಗಳ ಅವಶ್ಯಕತೆ ಎದ್ದು ಕಾಣುತ್ತಿದೆ. ಮಹಿಳೆಯರು ಜಾಗೃತರಾಗಿ ಸರ್ವ ಸಮುದಾಯದ ಮಹಿಳಾ ಸಂಘಗಳ ಮೂಲಕ ಮುಂದೆ ಬಂದಾಗ ಪ್ರಗತಿ ಕಾಣಲು ಸಾಧ್ಯವಿದೆ’ ಎಂದರು.</p>.<p>‘ಮಹಿಳಾ ಸಂಘಗಳು ಮಹಿಳೆಯರ ಸಬಲೀಕರಣ, ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಯ ಗುರಿಯೊಂದಿಗೆ ನಡೆಯುತ್ತಿವೆ. ಅಂತೆಯೇ ವಿಶ್ವಶಾಂತಿ ಮಹಿಳಾ ಸಂಘವೂ ಕೌಟುಂಬಿಕ ನಿರ್ವಹಣೆ ಜೊತೆಗೆ ಸದಾ ಮಹಿಳೆಯರ ಶ್ರೇಯೋಭಿವೃದ್ದಿಗೆ ಪೂರಕವಾಗಿ ಯಶಸ್ಸು ಕಾಣಲಿ’ ಎಂದು ಹಾರೈಸಿದರು.</p>.<p>ವಿಶ್ವ ಶಾಂತಿ ಮಹಿಳಾ ಸಂಘದ ಅಧ್ಯಕ್ಷೆ ನೇತ್ರಾವತಿ ಶಿರೋಳ ಮಾತನಾಡಿ, ‘ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು, ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವುದು, ಸಹಕಾರಿ ಚಟುವಟಿಕೆಗಳ ಮೂಲಕ ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು. ಸಂಘದ ಮುಖ್ಯ ಉದ್ದೇಶವಾಗಿದ್ದು ಸದಸ್ಯರ ಒಗ್ಗಟ್ಟಿನಿಂದ ಎಲ್ಲವೂ ಸಾಧ್ಯವಿದೆ’ ಎಂದರು.</p>.<p>ವಿಶ್ವ ಶಾಂತಿ ಮಹಿಳಾ ಸಂಘದ ಕಾರ್ಯದರ್ಶಿ ಚಂದ್ರಕಲಾ ತೆಂಬದಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು,</p>.<p>ಪತ್ರಿ ಬಸವೇಶ್ವರ ದೇವಸ್ಥಾನ ಸಮೀತಿ ಅಧ್ಯಕ್ಷ ಕಾಳಿಂಗಪ್ಪ ಕೋಣಪ್ಪನವರ, ಕಾರ್ಯದರ್ಶಿ ವಿ.ಎಫ್. ಹೊಸಮಣಿ, ಖಜಾಂಚಿ ಲಲಿತಾ ಕುಲಕರ್ಣಿ, ರೇಣುಕಾ ಗುಡ್ಡದಅನ್ವೇರಿ, ಶಕುಂತಲಾ ಪತ್ತಾರ,ಶಕುಂತಲಾ ಪತ್ತಾರ, ಕಾವ್ಯಾ ಬಸರೀಕಟ್ಟಿ, ಶೋಭಾ ಸಂಶಿ ಸೇರಿದಂತೆ ಸಂಘದ ಮಹಿಳಾ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>