<p><strong>ಹಾವೇರಿ:</strong> ರಾಜ್ಯ ಸರ್ಕಾರ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬದವರಿಗೆ ₹1 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಎಪಿಎಲ್ ಕುಟುಂಬಗಳನ್ನು ದೂರವಿಟ್ಟಿದ್ದು ಸರಿಯಲ್ಲ. ಈ ತಾರತಮ್ಯ ನಿವಾರಿಸಿ, ಎಪಿಎಲ್ ಮತ್ತು ಬಿಪಿಎಲ್ ಎರಡೂ ಕುಟುಂಗಳಿಗೂ ಪರಿಹಾರ ನೀಡಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕ ಬುಧವಾರ ಒತ್ತಾಯಿಸಿದೆ.</p>.<p>ಜೆಡಿಎಸ್ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ಸುಂಕದ ನೇತೃತ್ವದಲ್ಲಿ ಹಾವೇರಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಕೆ.ಎಂ.ಸುಂಕದ ಮಾತನಾಡಿ, ‘ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚಿನ ಮಂದಿ ಮೃತಪಟ್ಟಿದ್ದರೆ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ₹1 ಲಕ್ಷದ ಬದಲಾಗಿ ₹5 ಲಕ್ಷ ಪರಿಹಾರ ನೀಡಬೇಕು’ ಎಂದರು.</p>.<p>‘ಕೊರೊನಾ ಪೀಡಿತರಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಕುಟುಂಬಸ್ಥರು ಸಹ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಚಿಕಿತ್ಸೆಗಾಗಿಮನೆ, ಬಂಗಾರ, ಆಸ್ತಿ-ಪಾಸ್ತಿ ಮಾರಿಕೊಂಡು ಸಾಲಕ್ಕೆ ಸಿಲುಕಿದ್ದಾರೆ. ಇಂಥ ಕುಟುಂಬಗಳಿಗೆ ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ಚಿಕಿತ್ಸೆಯ ಶೇ 50ರಷ್ಟು ವೆಚ್ಚವನ್ನು ಭರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ರಾಜ್ಯ ಸರ್ಕಾರ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬದವರಿಗೆ ₹1 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಎಪಿಎಲ್ ಕುಟುಂಬಗಳನ್ನು ದೂರವಿಟ್ಟಿದ್ದು ಸರಿಯಲ್ಲ. ಈ ತಾರತಮ್ಯ ನಿವಾರಿಸಿ, ಎಪಿಎಲ್ ಮತ್ತು ಬಿಪಿಎಲ್ ಎರಡೂ ಕುಟುಂಗಳಿಗೂ ಪರಿಹಾರ ನೀಡಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕ ಬುಧವಾರ ಒತ್ತಾಯಿಸಿದೆ.</p>.<p>ಜೆಡಿಎಸ್ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ಸುಂಕದ ನೇತೃತ್ವದಲ್ಲಿ ಹಾವೇರಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಕೆ.ಎಂ.ಸುಂಕದ ಮಾತನಾಡಿ, ‘ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚಿನ ಮಂದಿ ಮೃತಪಟ್ಟಿದ್ದರೆ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ₹1 ಲಕ್ಷದ ಬದಲಾಗಿ ₹5 ಲಕ್ಷ ಪರಿಹಾರ ನೀಡಬೇಕು’ ಎಂದರು.</p>.<p>‘ಕೊರೊನಾ ಪೀಡಿತರಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಕುಟುಂಬಸ್ಥರು ಸಹ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಚಿಕಿತ್ಸೆಗಾಗಿಮನೆ, ಬಂಗಾರ, ಆಸ್ತಿ-ಪಾಸ್ತಿ ಮಾರಿಕೊಂಡು ಸಾಲಕ್ಕೆ ಸಿಲುಕಿದ್ದಾರೆ. ಇಂಥ ಕುಟುಂಬಗಳಿಗೆ ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ಚಿಕಿತ್ಸೆಯ ಶೇ 50ರಷ್ಟು ವೆಚ್ಚವನ್ನು ಭರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>