<p><strong>ಹಾವೇರಿ:</strong>ನಗರದ ರೈಲ್ವೆ ನಿಲ್ದಾಣದ ಹತ್ತಿರದ ಹಕ್ಕಲಮರಿಯಮ್ಮ ಮತ್ತು ನವದುರ್ಗಾ ದೇವಸ್ಥಾನದಲ್ಲಿ ದಸರಾ ಅಂಗವಾಗಿ ನವದುರ್ಗೆಯರಿಗೆ ನಿತ್ಯವೂ ವಿಶೇಷ ಅಲಂಕಾರ ಮಾಡಲಾಗುತ್ತಿದೆ.</p>.<p>ಶೈಲ ಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ, ಸಿದ್ಧಿದಾತ್ರಿ ದೇವಿಯರಿಗೆ ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿ ದಿನ ವಿಶೇಷ ಪೂಜೆ ಮಾಡಲಾಗುತ್ತಿದೆ.</p>.<p>ನಿತ್ಯ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ಕುಂಕುಮಾರ್ಚನೆ, ಅಭಿಷೇಕ, ದೇವಿ ಪಾರಾಯಣ, ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.ದೇವಿಯರ ಆರಾಧನೆ ಜತೆಗೆ ಇಲ್ಲಿರುವ 37 ದೇವರ ವಿಗ್ರಹಗಳಿಗೂ ವಿಶೇಷ ಪೂಜೆ ಸಲ್ಲುತ್ತಿದೆ.</p>.<p>‘ಪ್ರತಿ ವರ್ಷ ದಸರಾ ಹಬ್ಬದಲ್ಲಿ ನಿತ್ಯ ಚಂಡಿ ಹೋಮ, ದುರ್ಗಾದೇವಿ ಹೋಮಗಳನ್ನು ನೆರವೇರಿಸಿದ್ದೇವೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಈ ಹೋಮಗಳನ್ನು ರದ್ದುಪಡಿಸಲಾಗಿದೆ. ಸರಳ ಪೂಜೆ ಮತ್ತು ವಿಶೇಷ ಅಲಂಕಾರ ನೋಡಲು ಭಕ್ತರು ಬರುತ್ತಿದ್ದಾರೆ’ ಎಂದು ದೇವಸ್ಥಾನದ ಮುಖ್ಯಸ್ಥ ವಾಮನ ಕೃಷ್ಣರಾವ್ ಕೇಳಕರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ನಗರದ ರೈಲ್ವೆ ನಿಲ್ದಾಣದ ಹತ್ತಿರದ ಹಕ್ಕಲಮರಿಯಮ್ಮ ಮತ್ತು ನವದುರ್ಗಾ ದೇವಸ್ಥಾನದಲ್ಲಿ ದಸರಾ ಅಂಗವಾಗಿ ನವದುರ್ಗೆಯರಿಗೆ ನಿತ್ಯವೂ ವಿಶೇಷ ಅಲಂಕಾರ ಮಾಡಲಾಗುತ್ತಿದೆ.</p>.<p>ಶೈಲ ಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಾ, ಸ್ಕಂದಮಾತಾ, ಕಾತ್ಯಾಯಿನಿ, ಕಾಲರಾತ್ರಿ, ಮಹಾಗೌರಿ, ಸಿದ್ಧಿದಾತ್ರಿ ದೇವಿಯರಿಗೆ ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿ ದಿನ ವಿಶೇಷ ಪೂಜೆ ಮಾಡಲಾಗುತ್ತಿದೆ.</p>.<p>ನಿತ್ಯ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ಕುಂಕುಮಾರ್ಚನೆ, ಅಭಿಷೇಕ, ದೇವಿ ಪಾರಾಯಣ, ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.ದೇವಿಯರ ಆರಾಧನೆ ಜತೆಗೆ ಇಲ್ಲಿರುವ 37 ದೇವರ ವಿಗ್ರಹಗಳಿಗೂ ವಿಶೇಷ ಪೂಜೆ ಸಲ್ಲುತ್ತಿದೆ.</p>.<p>‘ಪ್ರತಿ ವರ್ಷ ದಸರಾ ಹಬ್ಬದಲ್ಲಿ ನಿತ್ಯ ಚಂಡಿ ಹೋಮ, ದುರ್ಗಾದೇವಿ ಹೋಮಗಳನ್ನು ನೆರವೇರಿಸಿದ್ದೇವೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಈ ಹೋಮಗಳನ್ನು ರದ್ದುಪಡಿಸಲಾಗಿದೆ. ಸರಳ ಪೂಜೆ ಮತ್ತು ವಿಶೇಷ ಅಲಂಕಾರ ನೋಡಲು ಭಕ್ತರು ಬರುತ್ತಿದ್ದಾರೆ’ ಎಂದು ದೇವಸ್ಥಾನದ ಮುಖ್ಯಸ್ಥ ವಾಮನ ಕೃಷ್ಣರಾವ್ ಕೇಳಕರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>