ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೋಡೆತ್ತುಗಳ ಜೊತೆಗೆ ಕಳ್ಳೆತ್ತುಗಳಿವೆ. ಕಳ್ಳೆತ್ತುಗಳು (ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್) ಏನು ಮಾಡುತ್ತಿವೆ, ಅವರ ನಿಜವಾದ ಬಣ್ಣ ಏನು ಎಂಬುದು ರಾಜ್ಯದ ಜನತೆಗೆ ಗೊತ್ತಾಗುತ್ತಿದೆ ಎಂದು ಕುಟುಕಿದರು.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ. ಅಭಿವೃದ್ಧಿ ನಿಂತ ನೀರಾಗಿದೆ. ಮೋಸ ಮಾಡಿ ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿ ಕೊಡಲು ಕಳ್ಳೆತ್ತುಗಳು ಕೆಲಸ ಮಾಡುತ್ತಿವೆ. ಹೋರಾಟದ ಮೂಲಕ ಜನರಿಗೆ ನ್ಯಾಯ ಕೊಡಿಸಲು ಜೋಡೆತ್ತುಗಳು ಕೆಲಸ ಮಾಡುತ್ತವೆ. ತೆರೆಮರೆಯಲ್ಲಿ ಸಿಎಂ ಮತ್ತು ಡಿಸಿಎಂ ಮಧ್ಯೆ ಜಗಳವಾಗುತ್ತಿದೆ. ನಾಲ್ಕೈದು ತಿಂಗಳಲ್ಲೇ ಸರ್ಕಾರದ ಬಂಡವಾಳ ಬಯಲಾಗಿದೆ ಎಂದು ಹೇಳಿದರು.