<p><strong>ಶಿಗ್ಗಾವಿ:</strong> ಕಾಯಕದ ಮೌಲ್ಯ ಹೆಚ್ಚಳಕ್ಕೆ ಜನ ಸೇವೆ ಮುಖ್ಯ. ಮಾಡುವ ಕಾಯಕ ಯಾವುದೇ ಇರಲಿ, ಅದರಲ್ಲಿ ನಂಬಿಕೆ, ವಿಶ್ವಾಸವಿಟ್ಟು ದುಡಿದಾಗ ಪ್ರತಿಫಲ, ಯಶಸ್ಸು ಸಿಗುವುದು, ಇದಕ್ಕೆ ನಿವೃತ್ತ ಡಾ.ಹನುಮಂತಪ್ಪ ಸಾಕ್ಷಿಯಾಗಿದ್ದಾರೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಭಾರತ ಸೇವಾ ಸಂಸ್ಥೆ ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯ ನಿವೃತ್ತ ಮುಖ್ಯವೈದ್ಯ ಡಾ.ಹನುಮಂತಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಪರೋಪಕಾರ, ಪ್ರಾಮಾಣಿಕ ಸೇವೆ ಜನಮನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಹೀಗಾಗಿ ಅಧಿಕಾರ, ಅಂತಸ್ತು ಶಾಶ್ವತವಲ್ಲ ಎಂಬುದನ್ನು ತಿಳಿದು, ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಮುಖಂಡರಾದ ನವೀನ್ ಸಾಸನೂರ, ರವಿ ಮಡಿವಾಳರ, ಪ್ರತೀಕ್ ಕೊಳೆಕರ, ವಿಶ್ವನಾಥ ಗಾಣಿಗೇರ, ಶಿವರಾಜ ಪಾಣಿಗಟ್ಟಿ ಸೇರಿದಂತೆ ಭಾರತ ಸೇವಾ ಸಂಸ್ಥೆ ಸದಸ್ಯರು, ವಿವಿಧ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಕಾಯಕದ ಮೌಲ್ಯ ಹೆಚ್ಚಳಕ್ಕೆ ಜನ ಸೇವೆ ಮುಖ್ಯ. ಮಾಡುವ ಕಾಯಕ ಯಾವುದೇ ಇರಲಿ, ಅದರಲ್ಲಿ ನಂಬಿಕೆ, ವಿಶ್ವಾಸವಿಟ್ಟು ದುಡಿದಾಗ ಪ್ರತಿಫಲ, ಯಶಸ್ಸು ಸಿಗುವುದು, ಇದಕ್ಕೆ ನಿವೃತ್ತ ಡಾ.ಹನುಮಂತಪ್ಪ ಸಾಕ್ಷಿಯಾಗಿದ್ದಾರೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಭಾರತ ಸೇವಾ ಸಂಸ್ಥೆ ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯ ನಿವೃತ್ತ ಮುಖ್ಯವೈದ್ಯ ಡಾ.ಹನುಮಂತಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಪರೋಪಕಾರ, ಪ್ರಾಮಾಣಿಕ ಸೇವೆ ಜನಮನದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಹೀಗಾಗಿ ಅಧಿಕಾರ, ಅಂತಸ್ತು ಶಾಶ್ವತವಲ್ಲ ಎಂಬುದನ್ನು ತಿಳಿದು, ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಮುಖಂಡರಾದ ನವೀನ್ ಸಾಸನೂರ, ರವಿ ಮಡಿವಾಳರ, ಪ್ರತೀಕ್ ಕೊಳೆಕರ, ವಿಶ್ವನಾಥ ಗಾಣಿಗೇರ, ಶಿವರಾಜ ಪಾಣಿಗಟ್ಟಿ ಸೇರಿದಂತೆ ಭಾರತ ಸೇವಾ ಸಂಸ್ಥೆ ಸದಸ್ಯರು, ವಿವಿಧ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>