ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ,ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಈಗಾಗಲೇ 73 ಮಂದಿಯ ರಕ್ತಪರೀಕ್ಷೆ ಮಾಡಲಾಗಿದ್ದು, ಎಲ್ಲರದೂ ‘ನೆಗೆಟಿವ್‘ ಫಲಿತಾಂಶ ಬಂದಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಬಂದರು, ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಕೇರಳದಿಂದ ಬಂದವರ ಮೇಲೂ ನಿಗಾ ಇಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಮೀಸಲಿಟ್ಟಿದ್ದೇವೆ. ಜಿಲ್ಲೆಗೊಂದು ವಾಹನ ಬಿಟ್ಟಿದ್ದೇವೆ. ದಿನಕ್ಕೆ ನಾಲ್ಕು ಹಳ್ಳಿಗಳಿಗೆ ವಾಹನ ಹೋಗಲಿದೆ. ಶೀಘ್ರದಲ್ಲೇ ಹಾವೇರಿಗೂ ವಾಹನ ಬರಲಿದೆ ಎಂದು ಮಾಹಿತಿ ನೀಡಿದರು.