<p><strong>ಹಾವೇರಿ:</strong> ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ. ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 20,269 ವಿದ್ಯಾರ್ಥಿಗಳು ಹಾಜರಾಗಿದ್ದರು.</p>.<p>ಜಿಲ್ಲೆಯಲ್ಲಿ 20,430 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 21 ವಿದ್ಯಾರ್ಥಿಗಳು ಅನಾರೋಗ್ಯದ ನಿಮಿತ್ತ ವಿಶೇಷ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆದರು.</p>.<p>19,725 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದರು. 459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ 388 ವಿದ್ಯಾರ್ಥಿಗಳು ಹಾಜರಾಗಿ, 71 ಮಕ್ಕಳು ಗೈರಾಗಿದ್ದರು. 77 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಲ್ಲಿ 62 ಮಕ್ಕಳು ಹಾಜರಾಗಿ, 15 ಮಕ್ಕಳು ಗೈರು ಹಾಜರಾಗಿದ್ದರು. ವಲಸೆ ಬಂದ 695 ವಿದ್ಯಾರ್ಥಿಗಳ ಪೈಕಿ, 692 ಮಕ್ಕಳು ಪರೀಕ್ಷೆ ಬರೆದರೆ, 3 ಮಕ್ಕಳು ಗೈರು ಹಾಜರಾಗಿದ್ದರು.ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ. ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 20,269 ವಿದ್ಯಾರ್ಥಿಗಳು ಹಾಜರಾಗಿದ್ದರು.</p>.<p>ಜಿಲ್ಲೆಯಲ್ಲಿ 20,430 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 21 ವಿದ್ಯಾರ್ಥಿಗಳು ಅನಾರೋಗ್ಯದ ನಿಮಿತ್ತ ವಿಶೇಷ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆದರು.</p>.<p>19,725 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದರು. 459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ 388 ವಿದ್ಯಾರ್ಥಿಗಳು ಹಾಜರಾಗಿ, 71 ಮಕ್ಕಳು ಗೈರಾಗಿದ್ದರು. 77 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಲ್ಲಿ 62 ಮಕ್ಕಳು ಹಾಜರಾಗಿ, 15 ಮಕ್ಕಳು ಗೈರು ಹಾಜರಾಗಿದ್ದರು. ವಲಸೆ ಬಂದ 695 ವಿದ್ಯಾರ್ಥಿಗಳ ಪೈಕಿ, 692 ಮಕ್ಕಳು ಪರೀಕ್ಷೆ ಬರೆದರೆ, 3 ಮಕ್ಕಳು ಗೈರು ಹಾಜರಾಗಿದ್ದರು.ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>