<p><strong>ರಾಣೆಬೆನ್ನೂರು:</strong> ‘ಎಸ್ಎಸ್ಎಲ್ಸಿ ಪರೀಕ್ಷೆಯು ಮಕ್ಕಳ ಜೀವನದ ಒಂದು ತಿರುವು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಸಮಯ ಸದುಪಯೋಗ ಪಡಿಸಿಕೊಂಡು ಕಠಿಣ ಪರಿಶ್ರಮದಿಂದ ಅಧ್ಯಯನ ಕೈಗೊಳ್ಳಬೇಕು’ ಎಂದು ಮುಖ್ಯ ಶಿಕ್ಷಕಿ ಜಯಲಲಿತಾ ಹೊಸಮನಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಜೆಸಿಐ ರಾಣೆಬೆನ್ನೂರು, ಜೆಎಸಿ ಅಲ್ಯೂಮಿನಿ ಸಂಸ್ಥೆಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಭಯ ನಿವಾರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.</p>.<p>‘ಪರೀಕ್ಷಾ ಭಯವನ್ನು ಬಿಟ್ಟು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಮುಂದಾಗಬೇಕು. ಪಾಠ ಪ್ರವಚನಗಳನ್ನು ಮನನ ಮಾಡಿಕೊಳ್ಳಬೇಕು. ಉತ್ತಮ ಫಲಿತಾಂಶದೊಂದಿಗೆ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕಾಗಿದೆ’ ಎಂದರು.</p>.<p>ಜೆಸಿಐ ವಲಯ ತರಬೇತುದಾರ ಪ್ರಭುಲಿಂಗಪ್ಪ ಹಲಗೇರಿ ಅವರು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ, ಏಕಾಗ್ರತೆ, ಗ್ರಹಣಶಕ್ತಿ ಮತ್ತು ಆಸಕ್ತಿ ಹುಟ್ಟಿಸುವ ಕುರಿತು ಚಟುವಟಿಕೆ ಆಧಾರಿತ ತರಬೇತಿ ನೀಡಿದರು.</p>.<p>ಜೆಎಸಿ ಅಲುಮ್ನಿ ಸಂಸ್ಥೆ ವಲಯ ಚೇರಮನ್ ರುದ್ರಪ್ಪ ಬಾಳಿಕಾಯಿ ಅವರು ಮಕ್ಕಳಿಗೆ ಅಪರಾಧ ತಡೆಯುವಿಕೆ ಮತ್ತು ಮೊಬೈಲ್ ಬಳಕೆ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಶಿಕ್ಷಕರಾದ ಎಂ.ಬಿ. ಶಿವಾನಂದ, ಎಸ್.ಆರ್. ತೆವರಿ, ದೊಡ್ಡಮನಿ, ಎಚ್. ಶಾಂತರಾಜ್, ಜ್ಯೋತಿ, ನಿವೇದಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ‘ಎಸ್ಎಸ್ಎಲ್ಸಿ ಪರೀಕ್ಷೆಯು ಮಕ್ಕಳ ಜೀವನದ ಒಂದು ತಿರುವು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಸಮಯ ಸದುಪಯೋಗ ಪಡಿಸಿಕೊಂಡು ಕಠಿಣ ಪರಿಶ್ರಮದಿಂದ ಅಧ್ಯಯನ ಕೈಗೊಳ್ಳಬೇಕು’ ಎಂದು ಮುಖ್ಯ ಶಿಕ್ಷಕಿ ಜಯಲಲಿತಾ ಹೊಸಮನಿ ಹೇಳಿದರು.</p>.<p>ಇಲ್ಲಿನ ವಿದ್ಯಾನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಜೆಸಿಐ ರಾಣೆಬೆನ್ನೂರು, ಜೆಎಸಿ ಅಲ್ಯೂಮಿನಿ ಸಂಸ್ಥೆಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಭಯ ನಿವಾರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.</p>.<p>‘ಪರೀಕ್ಷಾ ಭಯವನ್ನು ಬಿಟ್ಟು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಮುಂದಾಗಬೇಕು. ಪಾಠ ಪ್ರವಚನಗಳನ್ನು ಮನನ ಮಾಡಿಕೊಳ್ಳಬೇಕು. ಉತ್ತಮ ಫಲಿತಾಂಶದೊಂದಿಗೆ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕಾಗಿದೆ’ ಎಂದರು.</p>.<p>ಜೆಸಿಐ ವಲಯ ತರಬೇತುದಾರ ಪ್ರಭುಲಿಂಗಪ್ಪ ಹಲಗೇರಿ ಅವರು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ, ಏಕಾಗ್ರತೆ, ಗ್ರಹಣಶಕ್ತಿ ಮತ್ತು ಆಸಕ್ತಿ ಹುಟ್ಟಿಸುವ ಕುರಿತು ಚಟುವಟಿಕೆ ಆಧಾರಿತ ತರಬೇತಿ ನೀಡಿದರು.</p>.<p>ಜೆಎಸಿ ಅಲುಮ್ನಿ ಸಂಸ್ಥೆ ವಲಯ ಚೇರಮನ್ ರುದ್ರಪ್ಪ ಬಾಳಿಕಾಯಿ ಅವರು ಮಕ್ಕಳಿಗೆ ಅಪರಾಧ ತಡೆಯುವಿಕೆ ಮತ್ತು ಮೊಬೈಲ್ ಬಳಕೆ ಬಗ್ಗೆ ಜಾಗೃತಿ ಮೂಡಿಸಿದರು.</p>.<p>ಶಿಕ್ಷಕರಾದ ಎಂ.ಬಿ. ಶಿವಾನಂದ, ಎಸ್.ಆರ್. ತೆವರಿ, ದೊಡ್ಡಮನಿ, ಎಚ್. ಶಾಂತರಾಜ್, ಜ್ಯೋತಿ, ನಿವೇದಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>