ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾ.ನಾಗಮೋಹನ ದಾಸ ಸಮಿತಿಯು ಸರ್ಕಾರಕ್ಕೆ ವರದಿ ನೀಡಿ ಮೀಸಲಾತಿಯನ್ನು ಹೆಚ್ಚಿಸಬಹುದು ಎಂದು ಶಿಫಾರಸು ಮಾಡಿದೆ. ಸರ್ಕಾರಗಳು ಪರಿಶಿಷ್ಟ ಪಂಗಡಕ್ಕೆ ಸಮರ್ಪಕ ಮೀಸಲಾತಿ ನೀಡದ ಕಾರಣ ಶಿಕ್ಷಣ, ಉದ್ಯೋಗ, ಸಾಮಾಜಿಕ ಮತ್ತು ಆರ್ಥಿಕವಾಗಿ ಅನ್ಯಾಯವಾಗುತ್ತಿದೆ. ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.