<p><strong>ಹಾವೇರಿ:</strong> ರೈತರಿಗೆ ಸ್ಥಳೀಯವಾಗಿ ಬೆಳೆವಿಮೆ ನೋಂದಣಿ, ವಿಮಾ ಪರಿಹಾರ ಮಾಹಿತಿ ನೀಡಲು ಜಿಲ್ಲೆಗೆ ಸೂಚಿತ ವಿಮಾ ಕಂಪನಿಗಳು ತಾಲ್ಲೂಕುವಾರುತಮ್ಮ ಶಾಖಾ ಕಚೇರಿಗಳನ್ನು ಆರಂಭಿಸಲು ವಿಮಾ ಕಂಪನಿಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿ, ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕಾದ ಬೇಡಿಕೆಗಳ ವಿವರವನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ರೈತ ಮುಖಂಡರಿಗೆ ತಿಳಿಸಿದರು. 2015-16ನೇ ಸಾಲಿನಿಂದ 2020-21ನೇ ಸಾಲಿನವರೆಗೆ ಬೆಳೆ ವಿಮೆ ಸಮಸ್ಯೆ ಕುರಿತಂತೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಮಾತನಾಡಿ, ‘2015-16ನೇ ಸಾಲಿನಿಂದ 2020-21ನೇ ಸಾಲಿನವರೆಗೆ ಬೆಳೆವಿಮೆ ನೋಂದಣಿ, ಮಂಜೂರಾತಿ, ವಿಮಾ ಪರಿಹಾರ ಪಾವತಿ, ತಂತ್ರಾಂಶದಲ್ಲಿ ತೊಡಕುಗಳು, ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಕುರಿತಂತೆ ವಿವರವಾಗಿ ಸಭೆಗೆ ಮಾಹಿತಿ ನೀಡಿದರು.</p>.<p><strong>ವಿದ್ಯುತ್ ಸಂಪರ್ಕ: </strong>ರೈತರ ಕೊಳವೆಬಾವಿಗೆ ವಿದ್ಯುತ್ ಪರಿವರ್ತಕ ಕೂರಿಸಲು ಸೀನಿಯಾರಿಟಿ ಕಡೆಗಣಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಹೆಸ್ಕಾಂ ಕಚೇರಿವಾರು ಆಯಾ ವ್ಯಾಪ್ತಿಯ ರೈತರು ವಿದ್ಯುತ್ ಸಂಪರ್ಕ ಕೋರಿ ಬಂದಿರುವ ಅರ್ಜಿಗಳ ಹಿರಿತನದ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಹೆಸ್ಕಾಂ ಎಂಜಿನಿಯರ್ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.</p>.<p>ವಿದ್ಯುತ್ ಸಂಪರ್ಕ ಕಲ್ಪಿಸಲು ಅಕ್ರಮ-ಸಕ್ರಮ ಯೋಜನೆಯಡಿ ಜಿಲ್ಲೆಯಲ್ಲಿ 2262 ಕೊಳವೆಬಾವಿಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ 1948 ಪ್ರವರ್ತಕಗಳನ್ನು ಅಳವಡಿಸಲಾಗಿದೆ. ಬಾಕಿ 814 ವಿದ್ಯುತ್ ಪ್ರವರ್ತಕಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p><strong>ರಸಗೊಬ್ಬರ ಕೊರತೆ: </strong>ಮುಂದಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಬೇಕು. ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮವಹಿಸಬೇಕು, ಎಂ.ಆರ್.ಪಿ. ದರದಲ್ಲಿ ಗೊಬ್ಬರ ದೊರಕಬೇಕೆಂಬ ರೈತರ ಬೇಡಿಕೆಗೆ ಜಿಲ್ಲಾಧಿಕಾರಿ ವಿವರ ನೀಡಿ, ಮುಂದಿನ ಹಂಗಾಮಿನಲ್ಲಿ ಕೃತಕ ಅಭಾವ ಉಂಟಾಗದಂತೆ ಅಧಿಕಾರಿಗಳ ತಂಡ ರಚಿಸಿ ನಿಗಾವಹಿಸಲಾಗುವುದು ಎಂದರು.</p>.<p><strong>ಮೆಕ್ಕೆಜೋಳ ಖರೀದಿ ಕೇಂದ್ರ: </strong>ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ರೈತರು ಬೇಡಿಕೆ ಸಲ್ಲಿಸಿದರು. ವಾರದಲ್ಲಿ ಕೇಂದ್ರ ಆರಂಭಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಜಿಲ್ಲೆಯ ರೈತರು ಮೆಕ್ಕೆಜೋಳ ಸಂಸ್ಕರಣ ಘಟಕ ಸ್ಥಾಪಿಸಿದರೆ ಜಿಲ್ಲಾಡಳಿತದಿಂದ ಎಲ್ಲ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.</p>.<p><strong>ಸಿಬಿಲ್ ದರ ಅನ್ವಯಿಸದಂತೆ ಬೇಡಿಕೆ: </strong>ರೈತರಿಗೆ ಬೆಳೆಸಾಲ ನೀಡುವಾಗ ಬ್ಯಾಂಕ್ಗಳು ಸಿಬಿಲ್ ಮಾನದಂಡವನ್ನು ಅನುಸರಿಸುತ್ತವೆ. ಕೃಷಿ ಸಾಲಕ್ಕೆ ಈ ಮಾನದಂಡ ಅನುಸರಿಸದೇ ಸಾಲ ನೀಡಬೇಕು ಎಂದು ರೈತರು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ರೈತರಿಗೆ ಸ್ಥಳೀಯವಾಗಿ ಬೆಳೆವಿಮೆ ನೋಂದಣಿ, ವಿಮಾ ಪರಿಹಾರ ಮಾಹಿತಿ ನೀಡಲು ಜಿಲ್ಲೆಗೆ ಸೂಚಿತ ವಿಮಾ ಕಂಪನಿಗಳು ತಾಲ್ಲೂಕುವಾರುತಮ್ಮ ಶಾಖಾ ಕಚೇರಿಗಳನ್ನು ಆರಂಭಿಸಲು ವಿಮಾ ಕಂಪನಿಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿ, ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕಾದ ಬೇಡಿಕೆಗಳ ವಿವರವನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ರೈತ ಮುಖಂಡರಿಗೆ ತಿಳಿಸಿದರು. 2015-16ನೇ ಸಾಲಿನಿಂದ 2020-21ನೇ ಸಾಲಿನವರೆಗೆ ಬೆಳೆ ವಿಮೆ ಸಮಸ್ಯೆ ಕುರಿತಂತೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಮಾತನಾಡಿ, ‘2015-16ನೇ ಸಾಲಿನಿಂದ 2020-21ನೇ ಸಾಲಿನವರೆಗೆ ಬೆಳೆವಿಮೆ ನೋಂದಣಿ, ಮಂಜೂರಾತಿ, ವಿಮಾ ಪರಿಹಾರ ಪಾವತಿ, ತಂತ್ರಾಂಶದಲ್ಲಿ ತೊಡಕುಗಳು, ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಕುರಿತಂತೆ ವಿವರವಾಗಿ ಸಭೆಗೆ ಮಾಹಿತಿ ನೀಡಿದರು.</p>.<p><strong>ವಿದ್ಯುತ್ ಸಂಪರ್ಕ: </strong>ರೈತರ ಕೊಳವೆಬಾವಿಗೆ ವಿದ್ಯುತ್ ಪರಿವರ್ತಕ ಕೂರಿಸಲು ಸೀನಿಯಾರಿಟಿ ಕಡೆಗಣಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಹೆಸ್ಕಾಂ ಕಚೇರಿವಾರು ಆಯಾ ವ್ಯಾಪ್ತಿಯ ರೈತರು ವಿದ್ಯುತ್ ಸಂಪರ್ಕ ಕೋರಿ ಬಂದಿರುವ ಅರ್ಜಿಗಳ ಹಿರಿತನದ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಹೆಸ್ಕಾಂ ಎಂಜಿನಿಯರ್ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.</p>.<p>ವಿದ್ಯುತ್ ಸಂಪರ್ಕ ಕಲ್ಪಿಸಲು ಅಕ್ರಮ-ಸಕ್ರಮ ಯೋಜನೆಯಡಿ ಜಿಲ್ಲೆಯಲ್ಲಿ 2262 ಕೊಳವೆಬಾವಿಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ 1948 ಪ್ರವರ್ತಕಗಳನ್ನು ಅಳವಡಿಸಲಾಗಿದೆ. ಬಾಕಿ 814 ವಿದ್ಯುತ್ ಪ್ರವರ್ತಕಗಳನ್ನು ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p><strong>ರಸಗೊಬ್ಬರ ಕೊರತೆ: </strong>ಮುಂದಿನ ಮುಂಗಾರು ಹಂಗಾಮಿಗೆ ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಬೇಕು. ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮವಹಿಸಬೇಕು, ಎಂ.ಆರ್.ಪಿ. ದರದಲ್ಲಿ ಗೊಬ್ಬರ ದೊರಕಬೇಕೆಂಬ ರೈತರ ಬೇಡಿಕೆಗೆ ಜಿಲ್ಲಾಧಿಕಾರಿ ವಿವರ ನೀಡಿ, ಮುಂದಿನ ಹಂಗಾಮಿನಲ್ಲಿ ಕೃತಕ ಅಭಾವ ಉಂಟಾಗದಂತೆ ಅಧಿಕಾರಿಗಳ ತಂಡ ರಚಿಸಿ ನಿಗಾವಹಿಸಲಾಗುವುದು ಎಂದರು.</p>.<p><strong>ಮೆಕ್ಕೆಜೋಳ ಖರೀದಿ ಕೇಂದ್ರ: </strong>ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ರೈತರು ಬೇಡಿಕೆ ಸಲ್ಲಿಸಿದರು. ವಾರದಲ್ಲಿ ಕೇಂದ್ರ ಆರಂಭಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.ಜಿಲ್ಲೆಯ ರೈತರು ಮೆಕ್ಕೆಜೋಳ ಸಂಸ್ಕರಣ ಘಟಕ ಸ್ಥಾಪಿಸಿದರೆ ಜಿಲ್ಲಾಡಳಿತದಿಂದ ಎಲ್ಲ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.</p>.<p><strong>ಸಿಬಿಲ್ ದರ ಅನ್ವಯಿಸದಂತೆ ಬೇಡಿಕೆ: </strong>ರೈತರಿಗೆ ಬೆಳೆಸಾಲ ನೀಡುವಾಗ ಬ್ಯಾಂಕ್ಗಳು ಸಿಬಿಲ್ ಮಾನದಂಡವನ್ನು ಅನುಸರಿಸುತ್ತವೆ. ಕೃಷಿ ಸಾಲಕ್ಕೆ ಈ ಮಾನದಂಡ ಅನುಸರಿಸದೇ ಸಾಲ ನೀಡಬೇಕು ಎಂದು ರೈತರು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>