ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಟ್ಟೀಹಳ್ಳಿ: ಅಂಗಡಿಯಿಂದ ಅಭರಣ ಕಸಿದು ಪರಾರಿ

Published 12 ಫೆಬ್ರುವರಿ 2024, 16:23 IST
Last Updated 12 ಫೆಬ್ರುವರಿ 2024, 16:23 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಕ್ರಾಸ್ ಹತ್ತಿರ ನಂದಿ ಜ್ಯೂವೇಲರಿ ಅಂಗಡಿಯಲ್ಲಿ ಫೆ.7 ರಂದು ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತರು ಬಂಗಾರ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದು ಆಭರಣಗಳನ್ನು ಮಾಲಿಕ ತೋರಿಸುತ್ತಿರುವ ಸಂದರ್ಭದಲ್ಲಿ ಆಭರಣಗಳನ್ನು ಕಸಿದುಕೊಂಡು ಓಡಿ ಹೋಗಿ ಬೈಕ್ ಹತ್ತಿ ಪರಾರಿಯಾಗಿದ್ದಾರೆ.

ಸುಮಾರು ₹55 ಸಾವಿರ ಮೌಲ್ಯದ ಅಭರಣ ಕಳ್ಳತನವಾಗಿದೆ ಎಂದು ಅಂಗಡಿ ಮಾಲೀಕ ನಾಗರಾಜ ಜಾಧವ್ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT