ರಟ್ಟೀಹಳ್ಳಿ: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಕ್ರಾಸ್ ಹತ್ತಿರ ನಂದಿ ಜ್ಯೂವೇಲರಿ ಅಂಗಡಿಯಲ್ಲಿ ಫೆ.7 ರಂದು ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಅಪರಿಚಿತರು ಬಂಗಾರ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದು ಆಭರಣಗಳನ್ನು ಮಾಲಿಕ ತೋರಿಸುತ್ತಿರುವ ಸಂದರ್ಭದಲ್ಲಿ ಆಭರಣಗಳನ್ನು ಕಸಿದುಕೊಂಡು ಓಡಿ ಹೋಗಿ ಬೈಕ್ ಹತ್ತಿ ಪರಾರಿಯಾಗಿದ್ದಾರೆ.