ಕಟ್ಟಡ ಕಾಮಗಾರಿಯ ಕೆಲವು ಹಂತಗಳನ್ನು ಪರಿಶೀಲಿಸಿದ ಸಚಿವ ಶ್ರೀಮಂತ ಪಾಟೀಲ, ಶಾಸಕ ನೆಹರು ಓಲೇಕಾರ ಅವರು, ಬಾಲಕರ ವಸತಿ ನಿಲಯ, ಬಾಲಕಿಯರ ವಸತಿ ನಿಲಯ, ಭೋಜನಾಲಯದ ಸಂಕೀರ್ಣದ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಕಿಟಿಕಿ, ಬಾಗಿಲುಗಳಿಗೆ ಗುಣಮಟ್ಟದ ಕಬ್ಬಿಣ ಹಾಗೂ ಅಲ್ಯೂಮಿನಿಯಂ ಬಳಸಲು ಸೂಚಿಸಿದರು.