<p><strong>ಹಾವೇರಿ</strong>: ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅದಕ್ಕಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.</p>.<p>ಜಿಲ್ಲಾ ಕೇಂದ್ರ ಹಾವೇರಿಯ ಗುತ್ತಲ ರಸ್ತೆಯಲ್ಲಿರುವ ಹಳೇ ಎಪಿಎಂಸಿ ಆವರಣದಲ್ಲಿ ಕೇಂದ್ರ ನಿರ್ಮಿಸಲಾಗಿದ್ದು, ಶುಕ್ರವಾರದಿಂದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಶುರುವಾಗಲಿದೆ. ಇದಕ್ಕಾಗಿ ನುರಿತ ತಜ್ಞರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಹಾನಗಲ್, ರಾಣೆಬೆನ್ನೂರು, ಬ್ಯಾಡಗಿ ತಾಲ್ಲೂಕಿನಲ್ಲಿ ಈಗಾಗಲೇ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ನಗರ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳನ್ನು ಹಿಡಿದು ಕೇಂದ್ರಕ್ಕೆ ಕೊಂಡೊಯ್ದು, ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಇದೀಗ ಹಾವೇರಿಯಲ್ಲಿಯೂ ಈ ಪ್ರಕ್ರಿಯೆ ಶುರುವಾಗುತ್ತಿದೆ.</p>.<p>ಶಿಗ್ಗಾವಿ, ಸವಣೂರು ಹಾಗೂ ಬಂಕಾಪುರ ಒಳಗೊಂಡು ಕೇಂದ್ರವೊಂದನ್ನು ತೆರೆಯಲಾಗುತ್ತಿದೆ. ಅದು ಪೂರ್ಣಗೊಂಡ ಬಳಿಕ, ಮೂರು ಕಡೆಯ ಬೀದಿನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ಮಾಡುವ ಕೆಲಸವಾಗಲಿದೆ.</p>.<p>‘ಸುಪ್ರೀಂಕೋರ್ಟ್ ಆದೇಶದಂತೆ ‘ಬೀದಿನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸಾ ಕೇಂದ್ರ ಹಾಗೂ ಆಶ್ರಯ ತಾಣ’ ತೆರೆಯಲಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಹಂತದಲ್ಲಿ ಸುಮಾರು 5000 ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಪ್ಪ ತಿಳಿಸಿದರು.</p>.<p>‘ಹಾವೇರಿಯಲ್ಲಿಯೂ ಸುಮಾರು 1000 ಬೀದಿನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಶುಕ್ರವಾರ (ಡಿ. 19) ಶಸ್ತ್ರಚಿಕಿತ್ಸೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿಯವರು ಚಾಲನೆ ನೀಡಲಿದ್ದಾರೆ’ ಎಂದರು.</p>.<p>ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ ಹಾವೇರಿ ನಗರಸಭೆ ಪೌರಾಯುಕ್ತ ಎಚ್. ಕಾಂತರಾಜು, ‘ನಗರಸಭೆಯಿಂದ ಬೀದಿನಾಯಿ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಪಶು ವೈದ್ಯರಿಂದ ಶಸ್ತ್ರಚಿಕಿತ್ಸೆ ಮಾಡಿಸಿ, ರೇಬಿಸ್ ಲಸಿಕೆ ನೀಡಿ ಮೂರು ದಿನ ಆರೈಕೆ ಮಾಡಲಾಗುವುದು’ ಎಂದರು.</p>.<p>‘ಶಿಕ್ಷಣ ಸಂಸ್ಥೆಗಳ ಆವರಣ, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರೆಡೆ ಇರುವ ಬೀದಿನಾಯಿಗಳನ್ನು ಹಿಡಿಯಲಾಗುವುದು. ಜೊತೆಗೆ, ಬೀದಿನಾಯಿಗಳ ಬಗ್ಗೆ ಮಾಹಿತಿ ತಿಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅದಕ್ಕಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.</p>.<p>ಜಿಲ್ಲಾ ಕೇಂದ್ರ ಹಾವೇರಿಯ ಗುತ್ತಲ ರಸ್ತೆಯಲ್ಲಿರುವ ಹಳೇ ಎಪಿಎಂಸಿ ಆವರಣದಲ್ಲಿ ಕೇಂದ್ರ ನಿರ್ಮಿಸಲಾಗಿದ್ದು, ಶುಕ್ರವಾರದಿಂದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಶುರುವಾಗಲಿದೆ. ಇದಕ್ಕಾಗಿ ನುರಿತ ತಜ್ಞರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಹಾನಗಲ್, ರಾಣೆಬೆನ್ನೂರು, ಬ್ಯಾಡಗಿ ತಾಲ್ಲೂಕಿನಲ್ಲಿ ಈಗಾಗಲೇ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ನಗರ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳನ್ನು ಹಿಡಿದು ಕೇಂದ್ರಕ್ಕೆ ಕೊಂಡೊಯ್ದು, ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಇದೀಗ ಹಾವೇರಿಯಲ್ಲಿಯೂ ಈ ಪ್ರಕ್ರಿಯೆ ಶುರುವಾಗುತ್ತಿದೆ.</p>.<p>ಶಿಗ್ಗಾವಿ, ಸವಣೂರು ಹಾಗೂ ಬಂಕಾಪುರ ಒಳಗೊಂಡು ಕೇಂದ್ರವೊಂದನ್ನು ತೆರೆಯಲಾಗುತ್ತಿದೆ. ಅದು ಪೂರ್ಣಗೊಂಡ ಬಳಿಕ, ಮೂರು ಕಡೆಯ ಬೀದಿನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ಮಾಡುವ ಕೆಲಸವಾಗಲಿದೆ.</p>.<p>‘ಸುಪ್ರೀಂಕೋರ್ಟ್ ಆದೇಶದಂತೆ ‘ಬೀದಿನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸಾ ಕೇಂದ್ರ ಹಾಗೂ ಆಶ್ರಯ ತಾಣ’ ತೆರೆಯಲಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಹಂತದಲ್ಲಿ ಸುಮಾರು 5000 ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಪ್ಪ ತಿಳಿಸಿದರು.</p>.<p>‘ಹಾವೇರಿಯಲ್ಲಿಯೂ ಸುಮಾರು 1000 ಬೀದಿನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು. ಶುಕ್ರವಾರ (ಡಿ. 19) ಶಸ್ತ್ರಚಿಕಿತ್ಸೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿಯವರು ಚಾಲನೆ ನೀಡಲಿದ್ದಾರೆ’ ಎಂದರು.</p>.<p>ಶಸ್ತ್ರಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ ಹಾವೇರಿ ನಗರಸಭೆ ಪೌರಾಯುಕ್ತ ಎಚ್. ಕಾಂತರಾಜು, ‘ನಗರಸಭೆಯಿಂದ ಬೀದಿನಾಯಿ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಪಶು ವೈದ್ಯರಿಂದ ಶಸ್ತ್ರಚಿಕಿತ್ಸೆ ಮಾಡಿಸಿ, ರೇಬಿಸ್ ಲಸಿಕೆ ನೀಡಿ ಮೂರು ದಿನ ಆರೈಕೆ ಮಾಡಲಾಗುವುದು’ ಎಂದರು.</p>.<p>‘ಶಿಕ್ಷಣ ಸಂಸ್ಥೆಗಳ ಆವರಣ, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಇತರೆಡೆ ಇರುವ ಬೀದಿನಾಯಿಗಳನ್ನು ಹಿಡಿಯಲಾಗುವುದು. ಜೊತೆಗೆ, ಬೀದಿನಾಯಿಗಳ ಬಗ್ಗೆ ಮಾಹಿತಿ ತಿಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>