ಮಂಗಳವಾರ, ಮಾರ್ಚ್ 21, 2023
30 °C

ಗ್ರಾಮೀಣ ಸಾಕ್ಷರತೆಗೆ ಶ್ರಮಿಸಿ: ಸಿಇಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಗ್ರಾಮೀಣ ಭಾಗದಲ್ಲಿ ಸಾಕ್ಷರತಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡೋಣ. ಜಿಲ್ಲೆಯಲ್ಲೂ ನೂರರಷ್ಟು ಸಾಕ್ಷರತಾ ಸಾಧನೆಗೆ ಶ್ರಮಿಸೋಣ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಡೆದ 54ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರದ ಪ್ರಯತ್ನದಿಂದ ದೇಶದಲ್ಲಿ ಅನಕ್ಷರತೆಯ ಪ್ರಮಾಣ ಇಳಿಮುಖವಾಗಿ ಸಾಕ್ಷರತೆಯ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ ಎಂದರು.

‘ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿವಾರು ಸಾಕ್ಷರತಾ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಅಕ್ಷರ ಕಲಿಕೆಗೆ ಮನೆ– ಮನೆಗೆ ಭೇಟಿ ನೀಡಿ ನವ ಸಾಕ್ಷರರನ್ನಾಗಿಸಿ ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ನಿರಂತರವಾಗಿ ಮಾಡಿಕೊಳ್ಳುತ್ತಾ ಬರಲಾಗಿದೆ’ ಎಂದು ಹೇಳಿದರು.

ಸಾಂಕೇತಿಕವಾಗಿ ಐದು ಜನ ನವ ಸಾಕ್ಷರರಿಗೆ ಕಲಿಕಾ ಪ್ರಮಾಣ ಪತ್ರ ವಿತರಿಸಿದರು. ಡಿವೈಎಸ್ಪಿ ವಿಜಯಕುಮಾರ ಸಂತೋಷ, ಡಿ.ಡಿ.ಪಿ.ಐ ಅಂದಾನೆಪ್ಪ ವಡಗೇರಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಸನಗೌಡ ಪಾಟೀಲ, ಸರ್ವ ಶಿಕ್ಷಣ ಅಭಿಯಾನದ ಎಸ್.ಎಸ್ ಅಡಿಗ, ವಿಷಯ ಪರಿವೀಕ್ಷಕರಾದ ದೇವೆಂದ್ರಪ್ಪ ಬಸಮ್ಮನವರ, ಮಂಜಪ್ಪ ಆರ್, ಈರಪ್ಪ ಲಮಾಣಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.