‘ಅಪ್ಪನ ಕುಡಿತದ ಬಗ್ಗೆ ಬೇಸರ ಮಾಡಿಕೊಂಡಿದ್ದ ಕುಮಾರಸ್ವಾಮಿ, ತನ್ನ ಸಹಪಾಠಿ ಮತ್ತು ಸ್ನೇಹಿತರೊಂದಿಗೆ ಈ ಬಗ್ಗೆ ಹೇಳಿಕೊಂಡಿದ್ದ. ತೀವ್ರ ಮನನೊಂದು ಸೋಮವಾರ ಮಧ್ಯಾಹ್ನ ತನ್ನ ಸಹಪಾಠಿಗಳು ಊಟಕ್ಕೆ ಹೋದ ಸಮಯದಲ್ಲಿ ಮಠದ ಆವರಣದಲ್ಲಿರುವಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.