ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸಿಂದಗಿ ಮಠದ ವಿದ್ಯಾರ್ಥಿ ಆತ್ಮಹತ್ಯೆ

Last Updated 4 ಫೆಬ್ರುವರಿ 2020, 9:33 IST
ಅಕ್ಷರ ಗಾತ್ರ

ಹಾವೇರಿ: ಇಲ್ಲಿನ ಸಿಂದಗಿಮಠದ ಸಂಸ್ಕೃತ ವಿದ್ಯಾರ್ಥಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕು ಮಮ್ಮಿಗಟ್ಟಿ ಗ್ರಾಮದ ಕುಮಾರಸ್ವಾಮಿ ಗಂಗಯ್ಯ ಸುರಗಿಮಠ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

‘ಅಪ್ಪನ ಕುಡಿತದ ಬಗ್ಗೆ ಬೇಸರ ಮಾಡಿಕೊಂಡಿದ್ದ ಕುಮಾರಸ್ವಾಮಿ, ತನ್ನ ಸಹಪಾಠಿ ಮತ್ತು ಸ್ನೇಹಿತರೊಂದಿಗೆ ಈ ಬಗ್ಗೆ ಹೇಳಿಕೊಂಡಿದ್ದ. ತೀವ್ರ ಮನನೊಂದು ಸೋಮವಾರ ಮಧ್ಯಾಹ್ನ ತನ್ನ ಸಹಪಾಠಿಗಳು ಊಟಕ್ಕೆ ಹೋದ ಸಮಯದಲ್ಲಿ ಮಠದ ಆವರಣದಲ್ಲಿರುವಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT