ಹಾನಗಲ್: ಹಾನಗಲ್ ಎನ್ಸಿಜೆ ಕಾಲೇಜಿನ ಪಿಯು ವಿದ್ಯಾರ್ಥಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದೆ ಅವರು ಮೃತಪಟ್ಟಿದ್ದಾರೆ.
ಡೊಳ್ಳೇಶ್ವರ ಗ್ರಾಮದ ಅಜ್ಜಿಯ ಮನೆಯಲ್ಲಿ ವಾಸವಿದ್ದ ಈ ವಿದ್ಯಾರ್ಥಿಯ ಮೂಲ ಹಾವೇರಿ ಎಂದು ತಿಳಿದುಬಂದಿದೆ.
‘ಕಾಲೇಜಿನ ಪ್ರಾಚಾರ್ಯರು ನಿಂದಿಸಿ ಅವಮಾನಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‘ ಎಂದು ವಿದ್ಯಾರ್ಥಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.