<p><strong>ರಾಣೆಬೆನ್ನೂರು</strong>: ‘21ನೇ ಶತಮಾನ ವಿಜ್ಞಾನ, ತಂತ್ರಜ್ಞಾನದ ಯುಗವಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಯಲು ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಶಿಕ್ಷಕರು ಉತ್ತೇಜಿಸಬೇಕಿದೆ. ಮಕ್ಕಳಲ್ಲಿ ಚಿಂತನಾಶೀಲ ಮನೋಭಾವ ಬೆಳೆಯಬೇಕಿದೆ’ ಎಂದು ಡ್ರೀಮ್ ಸ್ಕೂಲ್ ಫೌಂಡೇಶನ್ ಸಂಸ್ಥಾಪಕ ಮೈತ್ರೇಯಿ ಕುಮಾರ ಹೇಳಿದರು.</p>.<p>ನಗರದ ಆರ್ಟಿಇಎಸ್ ಕಾಲೇಜು ಸಭಾಂಗಣದಲ್ಲಿ ಈಚೆಗೆ ನಡೆದ ಬೆಂಗಳೂರಿನ ಡ್ರೀಮ್ ಸ್ಕೂಲ್ ಫೌಂಡೇಶನ್ ವತಿಯಿಂದ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜು ನಾಯಕ್ ಮಾತನಾಡಿ, ‘ಸ್ವಸ್ಥ, ಸುಸ್ಥಿರ ಸಮಾಜ ನಿರ್ಮಾಣಕ್ಕೆ ವಿಜ್ಞಾನ ಪ್ರೇರಣೆಯಾಗಿದೆ. ವಿಜ್ಞಾನದ ಮಾದರಿಗಳ ತಯಾರಿಕೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸಹಕರಿಸಿ ಕಲಿಕೆಯನ್ನು ಉತ್ತೇಜಿಸಬೇಕು’ ಎಂದರು.</p>.<p>ತಾಲ್ಲೂಕಿನ ಆಯ್ದ 10 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳ ಪ್ರದರ್ಶನ ನೀಡಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸತ್ಯ ನಾರಾಯಣಕುಮಾರ, ಆದಿತ್ಯ ಹೊಸಂಗಡಿ, ಪ್ರೊ.ಲಿಂಗರಾಜ ಹೆಬ್ಬಾಳದ, ಪ್ರೊ.ಪರಶುರಾಮ ಪವಾರ, ಪ್ರಾಚಾರ್ಯ ಸಿ.ಎ ಹರಿಹರ ಅಧ್ಯಕ್ಷತೆ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ‘21ನೇ ಶತಮಾನ ವಿಜ್ಞಾನ, ತಂತ್ರಜ್ಞಾನದ ಯುಗವಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಯಲು ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಶಿಕ್ಷಕರು ಉತ್ತೇಜಿಸಬೇಕಿದೆ. ಮಕ್ಕಳಲ್ಲಿ ಚಿಂತನಾಶೀಲ ಮನೋಭಾವ ಬೆಳೆಯಬೇಕಿದೆ’ ಎಂದು ಡ್ರೀಮ್ ಸ್ಕೂಲ್ ಫೌಂಡೇಶನ್ ಸಂಸ್ಥಾಪಕ ಮೈತ್ರೇಯಿ ಕುಮಾರ ಹೇಳಿದರು.</p>.<p>ನಗರದ ಆರ್ಟಿಇಎಸ್ ಕಾಲೇಜು ಸಭಾಂಗಣದಲ್ಲಿ ಈಚೆಗೆ ನಡೆದ ಬೆಂಗಳೂರಿನ ಡ್ರೀಮ್ ಸ್ಕೂಲ್ ಫೌಂಡೇಶನ್ ವತಿಯಿಂದ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜು ನಾಯಕ್ ಮಾತನಾಡಿ, ‘ಸ್ವಸ್ಥ, ಸುಸ್ಥಿರ ಸಮಾಜ ನಿರ್ಮಾಣಕ್ಕೆ ವಿಜ್ಞಾನ ಪ್ರೇರಣೆಯಾಗಿದೆ. ವಿಜ್ಞಾನದ ಮಾದರಿಗಳ ತಯಾರಿಕೆಯಲ್ಲಿ ಶಿಕ್ಷಕರು ಮಕ್ಕಳಿಗೆ ಸಹಕರಿಸಿ ಕಲಿಕೆಯನ್ನು ಉತ್ತೇಜಿಸಬೇಕು’ ಎಂದರು.</p>.<p>ತಾಲ್ಲೂಕಿನ ಆಯ್ದ 10 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳ ಪ್ರದರ್ಶನ ನೀಡಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸತ್ಯ ನಾರಾಯಣಕುಮಾರ, ಆದಿತ್ಯ ಹೊಸಂಗಡಿ, ಪ್ರೊ.ಲಿಂಗರಾಜ ಹೆಬ್ಬಾಳದ, ಪ್ರೊ.ಪರಶುರಾಮ ಪವಾರ, ಪ್ರಾಚಾರ್ಯ ಸಿ.ಎ ಹರಿಹರ ಅಧ್ಯಕ್ಷತೆ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>