<p><strong>ಹಾವೇರಿ: </strong>ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ಭೌತಿಕ ಪರಿಶೀಲನೆ ಕಾರ್ಯವನ್ನು ನಾಳೆಯೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ತಹಶೀಲ್ದಾರ್ಗಳಿಗೆಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದ್ದಾರೆ.</p>.<p>ವಿವಿಧ ತಾಲ್ಲೂಕುತಹಶೀಲ್ದಾರ್ಗಳೊಂದಿಗೆ ಸೋಮವಾರ ಸಂಜೆ ವಿಡಿಯೊ ಸಂವಾದ ನಡೆಸಿದ ಅವರು ಮನೆ ಹಾನಿ ಕುರಿತಂತೆ ತಾಲ್ಲೂಕುಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವ ಪೂರ್ವದಲ್ಲಿ ನಿಖರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಕೆಗೆ ಸೂಚನೆ ನೀಡಿದರು.</p>.<p>ಮನೆಹಾನಿ ಪರಿಹಾರ ಕುರಿತಂತೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿ ಅನುಸಾರ ಸಮೀಕ್ಷೆ ನಡೆಸಬೇಕು. ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಎಂಜಿನಿಯರ್ಗಳು ಸ್ಥಳಕ್ಕೆ ಕಡ್ಡಾಯವಾಗಿ ಭೇಟಿ ನೀಡಿ ಫೋಟೋ ಸಹಿತ ವರದಿ ಸಲ್ಲಿಸಬೇಕು. ಈ ವರದಿ ಆಧರಿಸಿ ತಹಶೀಲ್ದಾರ್ ಪರಿಶೀಲನೆ ಮಾಡಿ ದೃಢೀಕರಿಸಿ ಕಳುಹಿಸಬೇಕು. ವಾಸ ಇಲ್ಲದ ಮನೆ ಬಿದ್ದರೆ ಪರಿಹಾರಕ್ಕೆ ಅವಕಾಶವಿರುವುದಿಲ್ಲ. ದನದ ಕೊಟ್ಟಿಗೆ ಬಿದ್ದರೆ ನಿಯಮಾವಳಿ ಅನುಸಾರ ಅದಕ್ಕೆ ಪ್ರತ್ಯೇಕ ಪರಿಹಾರಕ್ಕೆ ಅವಕಾಶವಿದೆ. ಯಾವುದೇ ಗೊಂದವಿಲ್ಲದಂತೆ ನಿಖರವಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.</p>.<p>ರಾಜೀವಗಾಂಧಿ ವಸತಿ ನಿಗಮದ ಫೋರ್ಟೆಲ್ನಲ್ಲಿ ಮನೆ ಹಾನಿಯ ವಿವರವನ್ನು ಅಪ್ಲೋಡ್ ಮಾಡುವ ಮುನ್ನ ತಹಶೀಲ್ದಾರ್ ಹಂತದಲ್ಲಿ ಸರಿಯಾಗಿ ಪರಿಶೀಲನೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹಾನಿಯಾದ ಮೂಲಸೌಕರ್ಯಗಳ ವಿವರವನ್ನು ಸಲ್ಲಿಸುವಂತೆ ಸೂಚನೆ ನೀಡಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಮಳೆಹಾನಿ ತಾಲ್ಲೂಕು ನೋಡಲ್ ಅಧಿಕಾರಿಗಳು ಹಾಗೂ ವಿಡಿಯೊ ಸಂವಾದದ ಮೂಲಕ ವಿವಿಧ ತಹಶೀಲ್ದಾರಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ಭೌತಿಕ ಪರಿಶೀಲನೆ ಕಾರ್ಯವನ್ನು ನಾಳೆಯೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ತಹಶೀಲ್ದಾರ್ಗಳಿಗೆಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದ್ದಾರೆ.</p>.<p>ವಿವಿಧ ತಾಲ್ಲೂಕುತಹಶೀಲ್ದಾರ್ಗಳೊಂದಿಗೆ ಸೋಮವಾರ ಸಂಜೆ ವಿಡಿಯೊ ಸಂವಾದ ನಡೆಸಿದ ಅವರು ಮನೆ ಹಾನಿ ಕುರಿತಂತೆ ತಾಲ್ಲೂಕುಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವ ಪೂರ್ವದಲ್ಲಿ ನಿಖರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಕೆಗೆ ಸೂಚನೆ ನೀಡಿದರು.</p>.<p>ಮನೆಹಾನಿ ಪರಿಹಾರ ಕುರಿತಂತೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿ ಅನುಸಾರ ಸಮೀಕ್ಷೆ ನಡೆಸಬೇಕು. ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಎಂಜಿನಿಯರ್ಗಳು ಸ್ಥಳಕ್ಕೆ ಕಡ್ಡಾಯವಾಗಿ ಭೇಟಿ ನೀಡಿ ಫೋಟೋ ಸಹಿತ ವರದಿ ಸಲ್ಲಿಸಬೇಕು. ಈ ವರದಿ ಆಧರಿಸಿ ತಹಶೀಲ್ದಾರ್ ಪರಿಶೀಲನೆ ಮಾಡಿ ದೃಢೀಕರಿಸಿ ಕಳುಹಿಸಬೇಕು. ವಾಸ ಇಲ್ಲದ ಮನೆ ಬಿದ್ದರೆ ಪರಿಹಾರಕ್ಕೆ ಅವಕಾಶವಿರುವುದಿಲ್ಲ. ದನದ ಕೊಟ್ಟಿಗೆ ಬಿದ್ದರೆ ನಿಯಮಾವಳಿ ಅನುಸಾರ ಅದಕ್ಕೆ ಪ್ರತ್ಯೇಕ ಪರಿಹಾರಕ್ಕೆ ಅವಕಾಶವಿದೆ. ಯಾವುದೇ ಗೊಂದವಿಲ್ಲದಂತೆ ನಿಖರವಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.</p>.<p>ರಾಜೀವಗಾಂಧಿ ವಸತಿ ನಿಗಮದ ಫೋರ್ಟೆಲ್ನಲ್ಲಿ ಮನೆ ಹಾನಿಯ ವಿವರವನ್ನು ಅಪ್ಲೋಡ್ ಮಾಡುವ ಮುನ್ನ ತಹಶೀಲ್ದಾರ್ ಹಂತದಲ್ಲಿ ಸರಿಯಾಗಿ ಪರಿಶೀಲನೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹಾನಿಯಾದ ಮೂಲಸೌಕರ್ಯಗಳ ವಿವರವನ್ನು ಸಲ್ಲಿಸುವಂತೆ ಸೂಚನೆ ನೀಡಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಮಳೆಹಾನಿ ತಾಲ್ಲೂಕು ನೋಡಲ್ ಅಧಿಕಾರಿಗಳು ಹಾಗೂ ವಿಡಿಯೊ ಸಂವಾದದ ಮೂಲಕ ವಿವಿಧ ತಹಶೀಲ್ದಾರಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>