<p><strong>ಹಾವೇರಿ</strong>: ‘ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ಟನ್ ಕಬ್ಬಿಗೆ ₹ 3,300 ನೀಡಬೇಕು’ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಗರದಲ್ಲಿ ಸೋಮವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸಿದ್ದ ಹೋರಾಟದಿಂದ ಎಚ್ಚೆತ್ತ ರಾಜ್ಯ ಸರ್ಕಾರ, ₹ 3,300 ದರ ನಿಗದಿ ಮಾಡಿದೆ. ಈ ದರವನ್ನು ಹಾವೇರಿ ಜಿಲ್ಲೆ ರೈತರಿಗೂ ನೀಡುವಂತೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ.</p>.<p>ಧರಣಿಗೂ ಮುನ್ನವೇ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ರೈತರು ಹಾಗೂ ಕಾರ್ಖಾನೆ ಪ್ರತಿನಿಧಿಗಳ ಜೊತೆ ಭಾನುವಾರ ಸಭೆ ನಡೆಸಿದ್ದರು. ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ರೈತರು ಸೋಮವಾರದಿಂದ ಧರಣಿ ಆರಂಭಿಸಿದ್ದಾರೆ.</p>.<p>ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ ನಿರ್ಮಿಸಿರುವ ರೈತರು, ಅದೇ ಸ್ಥಳದಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಈ ಧರಣಿ ಹಮ್ಮಿಕೊಳ್ಳಲಾಗಿದೆ.</p>.<p>‘ಕಬ್ಬು ಬೆಲೆ ನಿಗದಿಗೆ ಸಂಬಂಧಪಟ್ಟಂತೆ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ವರ್ಷ ಬೆಳಗಾವಿಯಲ್ಲಿ ಹೋರಾಟವೂ ತೀವ್ರ ಸ್ವರೂಪ ಪಡೆದಿತ್ತು. ಇದರಿಂದ ಎಚ್ಚೆತ್ತ ಸರ್ಕಾರ, ಬೆಳಗಾಗಿ ಹಾಗೂ ಬಾಗಲಕೋಟೆ ಜಿಲ್ಲೆಯ ಕಬ್ಬಿಗೆ ಟನ್ಗೆ ₹3,300 ಕೊಡಿಸಲು ಮುಂದಾಗಿದೆ. ಆದರೆ, ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಮಾತ್ರ ಈ ದರ ಅನ್ವಯವಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ, ಹಾವೇರಿ ಜಿಲ್ಲೆಗೂ ₹ 3,300 ಬೆಲೆ ನೀಡುವಂತೆ ಒತ್ತಾಯಿಸಿ ಈ ಧರಣಿ ಆರಂಭಿಸಲಾಗಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>‘ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಶೇ 11.25ರಷ್ಟಿದೆ. ಅದೇ ಇಳುವರಿ ಆಧರಿಸಿ ₹3,300 ಬೆಲೆ ನಿಗದಿಪಡಿಸಲಾಗಿದೆ. ಆದರೆ, ಹಾವೇರಿಯಲ್ಲಿರುವ ಜಿ.ಎಂ. ಶುಗರ್ ಆ್ಯಂಡ್ ಎನರ್ಜಿ ಕಂಪನಿ ಮತ್ತು ವಿ.ಐ.ಎನ್.ಪಿ ಡಿಸ್ಟಿಲರೀಸ್ ಮತ್ತು ಶುಗರ್ಸ್ ಕಂಪನಿಯ ಮೂರು ಕಾರ್ಖಾನೆಗಳ ಇಳುವರಿ ಕಡಿಮೆಯಿದೆ. ಇದೇ ಕಾರಣ ಮುಂದಿಟ್ಟುಕೊಂಡು ಕಡಿಮೆ ಬೆಲೆ ನೀಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಖಾನೆಗೆ ಬೀಗ: ‘ಇಳುವರಿ ನಿರ್ಧಾರದಲ್ಲೂ ರೈತರಿಗೆ ಅನ್ಯಾಯವಾಗುತ್ತಿದೆ. ತೂಕದಲ್ಲಿ ಮೋಸವಾಗುತ್ತಿದೆ. ಈಗ ಬೆಲೆಯಲ್ಲೂ ಮೋಸವಾದರೆ, ರೈತರು ಸುಮ್ಮನಿರುವುದಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ರೈತರಿಗೂ ₹ 3,300 ಕೊಡಿಸಬೇಕು. ₹ 3,200 ಕೊಟ್ಟರೂ ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಇದಕ್ಕಾಗಿ ಈಗ ಧರಣಿ ಮಾಡುತ್ತಿದ್ದೇವೆ. ಕೇಳಿದಷ್ಟು ಬೆಲೆ ನೀಡದಿದ್ದರೆ, ಮೂರು ಕಾರ್ಖಾನೆಗಳಿಗೆ ಬೀಗ ಹಾಕುತ್ತೇನೆ. ಕಬ್ಬು ಕಟಾವು ನಿಲ್ಲಿಸುತ್ತೇವೆ’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p>.<p><strong>ಜಿಲ್ಲಾಧಿಕಾರಿ ಭೇಟಿ:</strong> ಧರಣಿ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಭೇಟಿ ನೀಡಿ, ರೈತರ ಜೊತೆ ಮಾತುಕತೆ ನಡೆಸಿದರು.</p>.<p>‘ನಿಮ್ಮ ಬೇಡಿಕೆಗಳು ಗಮನದಲ್ಲಿವೆ. ಅವುಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸುತ್ತೇನೆ. ಮಾತುಕತೆ ಮೂಲಕ ಎಲ್ಲವನ್ನೂ ಬಗೆಹರಿಸಿಕೊಳ್ಳೋಣ. ಈಗ ಧರಣಿ ಕೈಬಿಡಿ’ ಎಂದು ಜಿಲ್ಲಾಧಿಕಾರಿ ಕೋರಿದರು. ಅದಕ್ಕೆ ಒಪ್ಪದ ಪ್ರತಿಭಟನಕಾರರು, ಧರಣಿ ಮುಂದುವರಿಸಿದ್ದಾರೆ. ಸೋಮವಾರ ರಾತ್ರಿಯೂ ಧರಣಿ ಸ್ಥಳದಲ್ಲಿಯೇ ಮಲಗಿ ಆಕ್ರೋಶ ಹೊರಹಾಕಿದರು.</p>.<p>ಜಿಲ್ಲೆಯ ರಾಣೆಬೆನ್ನೂರು, ಹಾವೇರಿ, ಬ್ಯಾಡಗಿ, ರಟ್ಟೀಹಳ್ಳಿ, ಹಾನಗಲ್, ಹಿರೇಕೆರೂರ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕಿನ ಕಬ್ಬು ಬೆಳೆಗಾರರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>‘ಸಿ.ಎಂ. ಸಚಿವರಿಂದ ದ್ರೋಹ’ </strong></p><p>‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ದ್ರೋಹ ಮಾಡುತ್ತಿದ್ದಾರೆ’ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ ದೂರಿದರು. ಧರಣಿ ಸ್ಥಳದಲ್ಲಿ ಮಾತನಾಡಿದ ಅವರು ‘ಬೆಳಗಾವಿ ಬಾಗಲಕೋಟೆಯಲ್ಲಿ ₹ 3300 ಬೆಲೆ ಘೋಷಣೆ ಮಾಡಿದ್ದಾರೆ. ಆದರೆ ಹಾವೇರಿ ಜಿಲ್ಲೆಯಲ್ಲಿರುವ ಕಾರ್ಖಾನೆಗಳು ಶೇ 9.42 ಇಳುವರಿ ತೋರಿಸುತ್ತಿವೆ. ಹೀಗಾಗಿ ಕಡಿಮೆ ಬೆಲೆ ನೀಡುವುದಾಗಿ ಕಾರ್ಖಾನೆಗಳು ಹೇಳುತ್ತಿವೆ’ ಎಂದರು.</p>.<p><strong>ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳು </strong></p><p>* ಬೆಳಗಾವಿ ಬಾಗಲಕೋಟೆ ಜಿಲ್ಲೆಯಂತೆ ಹಾವೇರಿ ಜಿಲ್ಲೆಯ ಕಬ್ಬಿಗೂ ₹ 3300 ನೀಡಬೇಕು.</p><p>* ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಯವರು ಭರಿಸಬೇಕು.</p><p> * ಸಕ್ಕರೆ ಇಳುವರಿ ಪರೀಕ್ಷೆಯಲ್ಲಿ ಆಗುತ್ತಿರುವ ಮೋಸವನ್ನು ತಪ್ಪಿಸಲು ಸರ್ಕಾರವೇ ಪರೀಕ್ಷೆ ಜವಾಬ್ದಾರಿ ವಹಿಸಿಕೊಳ್ಳಬೇಕು</p><p>* ಕಾರ್ಖಾನೆ ಆವರಣದಲ್ಲಿ ಸರ್ಕಾರದಿಂದಲೇ ಪ್ರತ್ಯೇಕ ತೂಕದ ಯಂತ್ರ ಅಳವಡಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ಟನ್ ಕಬ್ಬಿಗೆ ₹ 3,300 ನೀಡಬೇಕು’ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಗರದಲ್ಲಿ ಸೋಮವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸಿದ್ದ ಹೋರಾಟದಿಂದ ಎಚ್ಚೆತ್ತ ರಾಜ್ಯ ಸರ್ಕಾರ, ₹ 3,300 ದರ ನಿಗದಿ ಮಾಡಿದೆ. ಈ ದರವನ್ನು ಹಾವೇರಿ ಜಿಲ್ಲೆ ರೈತರಿಗೂ ನೀಡುವಂತೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ.</p>.<p>ಧರಣಿಗೂ ಮುನ್ನವೇ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ರೈತರು ಹಾಗೂ ಕಾರ್ಖಾನೆ ಪ್ರತಿನಿಧಿಗಳ ಜೊತೆ ಭಾನುವಾರ ಸಭೆ ನಡೆಸಿದ್ದರು. ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ರೈತರು ಸೋಮವಾರದಿಂದ ಧರಣಿ ಆರಂಭಿಸಿದ್ದಾರೆ.</p>.<p>ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ ನಿರ್ಮಿಸಿರುವ ರೈತರು, ಅದೇ ಸ್ಥಳದಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಈ ಧರಣಿ ಹಮ್ಮಿಕೊಳ್ಳಲಾಗಿದೆ.</p>.<p>‘ಕಬ್ಬು ಬೆಲೆ ನಿಗದಿಗೆ ಸಂಬಂಧಪಟ್ಟಂತೆ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ವರ್ಷ ಬೆಳಗಾವಿಯಲ್ಲಿ ಹೋರಾಟವೂ ತೀವ್ರ ಸ್ವರೂಪ ಪಡೆದಿತ್ತು. ಇದರಿಂದ ಎಚ್ಚೆತ್ತ ಸರ್ಕಾರ, ಬೆಳಗಾಗಿ ಹಾಗೂ ಬಾಗಲಕೋಟೆ ಜಿಲ್ಲೆಯ ಕಬ್ಬಿಗೆ ಟನ್ಗೆ ₹3,300 ಕೊಡಿಸಲು ಮುಂದಾಗಿದೆ. ಆದರೆ, ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಮಾತ್ರ ಈ ದರ ಅನ್ವಯವಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ, ಹಾವೇರಿ ಜಿಲ್ಲೆಗೂ ₹ 3,300 ಬೆಲೆ ನೀಡುವಂತೆ ಒತ್ತಾಯಿಸಿ ಈ ಧರಣಿ ಆರಂಭಿಸಲಾಗಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>‘ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಶೇ 11.25ರಷ್ಟಿದೆ. ಅದೇ ಇಳುವರಿ ಆಧರಿಸಿ ₹3,300 ಬೆಲೆ ನಿಗದಿಪಡಿಸಲಾಗಿದೆ. ಆದರೆ, ಹಾವೇರಿಯಲ್ಲಿರುವ ಜಿ.ಎಂ. ಶುಗರ್ ಆ್ಯಂಡ್ ಎನರ್ಜಿ ಕಂಪನಿ ಮತ್ತು ವಿ.ಐ.ಎನ್.ಪಿ ಡಿಸ್ಟಿಲರೀಸ್ ಮತ್ತು ಶುಗರ್ಸ್ ಕಂಪನಿಯ ಮೂರು ಕಾರ್ಖಾನೆಗಳ ಇಳುವರಿ ಕಡಿಮೆಯಿದೆ. ಇದೇ ಕಾರಣ ಮುಂದಿಟ್ಟುಕೊಂಡು ಕಡಿಮೆ ಬೆಲೆ ನೀಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾರ್ಖಾನೆಗೆ ಬೀಗ: ‘ಇಳುವರಿ ನಿರ್ಧಾರದಲ್ಲೂ ರೈತರಿಗೆ ಅನ್ಯಾಯವಾಗುತ್ತಿದೆ. ತೂಕದಲ್ಲಿ ಮೋಸವಾಗುತ್ತಿದೆ. ಈಗ ಬೆಲೆಯಲ್ಲೂ ಮೋಸವಾದರೆ, ರೈತರು ಸುಮ್ಮನಿರುವುದಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ಹಾವೇರಿ ಜಿಲ್ಲೆ ರೈತರಿಗೂ ₹ 3,300 ಕೊಡಿಸಬೇಕು. ₹ 3,200 ಕೊಟ್ಟರೂ ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಇದಕ್ಕಾಗಿ ಈಗ ಧರಣಿ ಮಾಡುತ್ತಿದ್ದೇವೆ. ಕೇಳಿದಷ್ಟು ಬೆಲೆ ನೀಡದಿದ್ದರೆ, ಮೂರು ಕಾರ್ಖಾನೆಗಳಿಗೆ ಬೀಗ ಹಾಕುತ್ತೇನೆ. ಕಬ್ಬು ಕಟಾವು ನಿಲ್ಲಿಸುತ್ತೇವೆ’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.</p>.<p><strong>ಜಿಲ್ಲಾಧಿಕಾರಿ ಭೇಟಿ:</strong> ಧರಣಿ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಭೇಟಿ ನೀಡಿ, ರೈತರ ಜೊತೆ ಮಾತುಕತೆ ನಡೆಸಿದರು.</p>.<p>‘ನಿಮ್ಮ ಬೇಡಿಕೆಗಳು ಗಮನದಲ್ಲಿವೆ. ಅವುಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸುತ್ತೇನೆ. ಮಾತುಕತೆ ಮೂಲಕ ಎಲ್ಲವನ್ನೂ ಬಗೆಹರಿಸಿಕೊಳ್ಳೋಣ. ಈಗ ಧರಣಿ ಕೈಬಿಡಿ’ ಎಂದು ಜಿಲ್ಲಾಧಿಕಾರಿ ಕೋರಿದರು. ಅದಕ್ಕೆ ಒಪ್ಪದ ಪ್ರತಿಭಟನಕಾರರು, ಧರಣಿ ಮುಂದುವರಿಸಿದ್ದಾರೆ. ಸೋಮವಾರ ರಾತ್ರಿಯೂ ಧರಣಿ ಸ್ಥಳದಲ್ಲಿಯೇ ಮಲಗಿ ಆಕ್ರೋಶ ಹೊರಹಾಕಿದರು.</p>.<p>ಜಿಲ್ಲೆಯ ರಾಣೆಬೆನ್ನೂರು, ಹಾವೇರಿ, ಬ್ಯಾಡಗಿ, ರಟ್ಟೀಹಳ್ಳಿ, ಹಾನಗಲ್, ಹಿರೇಕೆರೂರ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕಿನ ಕಬ್ಬು ಬೆಳೆಗಾರರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>‘ಸಿ.ಎಂ. ಸಚಿವರಿಂದ ದ್ರೋಹ’ </strong></p><p>‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ದ್ರೋಹ ಮಾಡುತ್ತಿದ್ದಾರೆ’ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭುವನೇಶ್ವರ ಶಿಡ್ಲಾಪುರ ದೂರಿದರು. ಧರಣಿ ಸ್ಥಳದಲ್ಲಿ ಮಾತನಾಡಿದ ಅವರು ‘ಬೆಳಗಾವಿ ಬಾಗಲಕೋಟೆಯಲ್ಲಿ ₹ 3300 ಬೆಲೆ ಘೋಷಣೆ ಮಾಡಿದ್ದಾರೆ. ಆದರೆ ಹಾವೇರಿ ಜಿಲ್ಲೆಯಲ್ಲಿರುವ ಕಾರ್ಖಾನೆಗಳು ಶೇ 9.42 ಇಳುವರಿ ತೋರಿಸುತ್ತಿವೆ. ಹೀಗಾಗಿ ಕಡಿಮೆ ಬೆಲೆ ನೀಡುವುದಾಗಿ ಕಾರ್ಖಾನೆಗಳು ಹೇಳುತ್ತಿವೆ’ ಎಂದರು.</p>.<p><strong>ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳು </strong></p><p>* ಬೆಳಗಾವಿ ಬಾಗಲಕೋಟೆ ಜಿಲ್ಲೆಯಂತೆ ಹಾವೇರಿ ಜಿಲ್ಲೆಯ ಕಬ್ಬಿಗೂ ₹ 3300 ನೀಡಬೇಕು.</p><p>* ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಯವರು ಭರಿಸಬೇಕು.</p><p> * ಸಕ್ಕರೆ ಇಳುವರಿ ಪರೀಕ್ಷೆಯಲ್ಲಿ ಆಗುತ್ತಿರುವ ಮೋಸವನ್ನು ತಪ್ಪಿಸಲು ಸರ್ಕಾರವೇ ಪರೀಕ್ಷೆ ಜವಾಬ್ದಾರಿ ವಹಿಸಿಕೊಳ್ಳಬೇಕು</p><p>* ಕಾರ್ಖಾನೆ ಆವರಣದಲ್ಲಿ ಸರ್ಕಾರದಿಂದಲೇ ಪ್ರತ್ಯೇಕ ತೂಕದ ಯಂತ್ರ ಅಳವಡಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>