‘ಸರ್ಕಾರಿ ಆಸ್ಪತ್ರೆಗಳೆಂದರೆ ಸಾರ್ವಜನಿಕರಲ್ಲಿ ಕೀಳರಿಮೆ ಇತ್ತು. ಅದನ್ನು ತಪ್ಪಿಸುವ ಸಲುವಾಗಿ ಸ್ಥಳೀಯ ಶಾಸಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ನುರಿತ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿಯನ್ನು ಸಮರ್ಪಕವಾಗಿ ನಿಯೋಜನೆ ಮಾಡಿ, ವೈದ್ಯಕೀಯ ಸೌಲಭ್ಯ ಹೆಚ್ಚಿಸಿರುವುದರಿಂದ ಶಸ್ತ್ರ ಚಿಕಿತ್ಸೆ ಮಾಡಲು ಸಹಕಾರಿಯಾಗಿದೆ. ಸವಣೂರ-ಶಿಗ್ಗಾವಿ ಸೇರಿದಂತೆ ಹಾನಗಲ್, ಕುಂದಗೋಳ, ಲಕ್ಷ್ಮೇಶ್ವರ, ಹಾವೇರಿ, ಶಿರಹಟ್ಟಿ ಸೇರಿದಂತೆ ವಿವಿಧ ಭಾಗಗಳಿಂದ ರೋಗಿಗಳು ಬಂದು ಈಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಎಸ್.ವೈ.ಹಿರೇಗೌಡ್ರ ತಿಳಿಸಿದರು.