ಹೊಸಮತದಾರರ ನೋಂದಣಿ, ಪರಿಷ್ಕರಣೆ ಕುರಿತಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ, ತಹಶೀಲ್ದಾರ್ಗಳಾದ ಜಿ.ಎಸ್.ಶಂಕರ, ರವಿ ಕೊರವರ, ಬಸವನಗೌಡ ಕೋಟೂರ, ಮಲ್ಲಿಕಾರ್ಜುನ ಹೆಗ್ಗಣ್ಣನವರ, ಪಿ.ಎಸ್. ಎರಿಸ್ವಾಮಿ, ಪ್ರಕಾಶ ಕುದರಿ, ಉಮಾ ಕೆ.ಎ. ಇದ್ದರು.