<p>ಹಾವೇರಿ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯ ಬಗ್ಗೆ ತಪ್ಪು ವರದಿ ಕೊಟ್ಟರೆ, ರೈತರಿಗೆ ಅನ್ಯಾಯ ಮಾಡಿದರೆ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರವಾಹ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಾನವೀಯತೆ, ಹೃದಯವಿಶಾಲತೆಯಿಂದ ನಿಖರವಾಗಿ ಬೆಳೆಹಾನಿ ಸಮೀಕ್ಷೆ ಕೈಗೊಳ್ಳಬೇಕು. ರೈತರ ಹೊಲಗಳಿಗೆ ತೆರಳಿ ಹಾನಿಯನ್ನು ಪರಿಶೀಲಿಸಬೇಕು. ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳ್ಳುವವರೆಗೂ ಯಾವೊಬ್ಬ ಕೃಷಿ ಅಧಿಕಾರಿಗಳು ರಜೆ ಮೇಲೆ ತೆರಳಬಾರದು ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯ ಬಹುಪಾಲು ಗ್ರಾಮಗಳಿಗೆ ಮಳೆಯಿಂದ ಕುಡಿಯುವ ನೀರಿನ ಪೈಪ್ಗಳು ಹಾಳಾಗಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಕುಡಿಯುವ ನೀರು ಪೂರೈಕೆ ಪಂಪ್ಗಳು ಹಾಳಾಗಿವೆ. ಈ ಕುರಿತಂತೆ ತ್ವರಿತ ಕ್ರಮಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಅವರಿಗೆ ಸೂಚನೆ ನೀಡಿದರು.</p>.<p class="Subhead">144 ಲೈಸೆನ್ಸ್ ರದ್ದು:</p>.<p>ಕೃತಕ ಅಭಾವ ಸೃಷ್ಟಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಕೃಷಿ ಜಾಗೃತ ದಳದಿಂದ ಕಳಪೆ ಬೀಜ-ಗೊಬ್ಬರ, ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ. 144 ಪರವಾನಗಿಗಳನ್ನು ರದ್ದುಪಡಿಸಿದ್ದೇವೆ. 15 ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ಹಾಕಲಾಗಿದೆ. ₹28 ಕೋಟಿ ಮೊತ್ತದ ಕಳಪೆ ಬೀಜ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರು ಮಳೆಯಿಂದ ಬೆಳೆಹಾನಿ ಮಾಹಿತಿಯನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಇದ್ದರು.</p>.<p>***</p>.<p class="Briefhead">‘ರಸಗೊಬ್ಬರ ಕೊರತೆ ಇಲ್ಲ’</p>.<p>ಮುಂಗಾರು ಹಂಗಾಮಿಗೆ ಹಳೆಯ ದಾಸ್ತಾನು ಸೇರಿ 1,16,827 ಮೆಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಗೆ ಪೂರೈಕೆಯಾಗಿದೆ. 1,08,495 ಮೆಟ್ರಿಕ್ ಟನ್ ವಿತರಿಸಲಾಗಿದೆ. 9,732 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನಿದೆ. ಯೂರಿಯಾ ಗೊಬ್ಬರದ ಬದಲು ನ್ಯಾನೋ ಗೊಬ್ಬರ ಬಳಸಬೇಕು. ಈ ಕುರಿತಂತೆ ರೈತರಿಗೆ ಜಾಗೃತಿ ಮೂಡಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>***</p>.<p class="Briefhead">‘40 ಸಾವಿರ ಹೆಕ್ಟೇರ್ ಬೆಳೆಹಾನಿ’</p>.<p>ಜಿಲ್ಲೆಯಲ್ಲಿ 450 ಮಿ.ಮೀ ವಾಡಿಕೆ ಮಳೆ ಎದುರು 632 ಮಿ.ಮೀ. ಮಳೆಯಾಗಿದೆ. ಶೇ 40ರಷ್ಟು ಹೆಚ್ಚಿನ ಮಳೆಯಾಗಿದೆ. 3.8 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದ್ದು, ಅತಿವೃಷ್ಟಿಯಿಂದ ಜುಲೈನಿಂದ ಆಗಸ್ಟ್ 5ರವರೆಗೆ ಅಂದಾಜು 27,353 ಹೆಕ್ಟೇರ್, ಆಗಸ್ಟ್ 8ರವರೆಗೆ 40,027 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಸಮೀಕ್ಷೆ ನನಗೆ ತೃಪ್ತಿ ತಂದಿಲ್ಲ. ಹಾನಗಲ್ನಂತಹ ಮಲೆನಾಡು ಪ್ರದೇಶದಲ್ಲಿ ಕೇವಲ ಎರಡು ಸಾವಿರ ಹೆಕ್ಟೇರ್ ಬೆಳೆಹಾನಿಯಾಗಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಹೇಳಿದರು.</p>.<p>***</p>.<p>ವಿಮಾ ಕಂಪನಿಗಳು ಸೂಚಿಸಿದಂತೆ ಕೃಷಿ ಅಧಿಕಾರಿಗಳು ವರದಿ ನೀಡಬಾರದು. ಸ್ಥಳ ಪರಿಶೀಲನೆ ನಡೆಸಿ ವಿಮೆ ಸೌಲಭ್ಯ ಕಲ್ಪಿಸಬೇಕು<br />– ಬಿ.ಸಿ.ಪಾಟೀಲ, ಕೃಷಿ ಸಚಿವ</p>.<p>***</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯ ಬಗ್ಗೆ ತಪ್ಪು ವರದಿ ಕೊಟ್ಟರೆ, ರೈತರಿಗೆ ಅನ್ಯಾಯ ಮಾಡಿದರೆ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರವಾಹ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.</p>.<p>ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಾನವೀಯತೆ, ಹೃದಯವಿಶಾಲತೆಯಿಂದ ನಿಖರವಾಗಿ ಬೆಳೆಹಾನಿ ಸಮೀಕ್ಷೆ ಕೈಗೊಳ್ಳಬೇಕು. ರೈತರ ಹೊಲಗಳಿಗೆ ತೆರಳಿ ಹಾನಿಯನ್ನು ಪರಿಶೀಲಿಸಬೇಕು. ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳ್ಳುವವರೆಗೂ ಯಾವೊಬ್ಬ ಕೃಷಿ ಅಧಿಕಾರಿಗಳು ರಜೆ ಮೇಲೆ ತೆರಳಬಾರದು ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯ ಬಹುಪಾಲು ಗ್ರಾಮಗಳಿಗೆ ಮಳೆಯಿಂದ ಕುಡಿಯುವ ನೀರಿನ ಪೈಪ್ಗಳು ಹಾಳಾಗಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಕುಡಿಯುವ ನೀರು ಪೂರೈಕೆ ಪಂಪ್ಗಳು ಹಾಳಾಗಿವೆ. ಈ ಕುರಿತಂತೆ ತ್ವರಿತ ಕ್ರಮಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಅವರಿಗೆ ಸೂಚನೆ ನೀಡಿದರು.</p>.<p class="Subhead">144 ಲೈಸೆನ್ಸ್ ರದ್ದು:</p>.<p>ಕೃತಕ ಅಭಾವ ಸೃಷ್ಟಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಕೃಷಿ ಜಾಗೃತ ದಳದಿಂದ ಕಳಪೆ ಬೀಜ-ಗೊಬ್ಬರ, ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ. 144 ಪರವಾನಗಿಗಳನ್ನು ರದ್ದುಪಡಿಸಿದ್ದೇವೆ. 15 ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ಹಾಕಲಾಗಿದೆ. ₹28 ಕೋಟಿ ಮೊತ್ತದ ಕಳಪೆ ಬೀಜ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರು ಮಳೆಯಿಂದ ಬೆಳೆಹಾನಿ ಮಾಹಿತಿಯನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಇದ್ದರು.</p>.<p>***</p>.<p class="Briefhead">‘ರಸಗೊಬ್ಬರ ಕೊರತೆ ಇಲ್ಲ’</p>.<p>ಮುಂಗಾರು ಹಂಗಾಮಿಗೆ ಹಳೆಯ ದಾಸ್ತಾನು ಸೇರಿ 1,16,827 ಮೆಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಗೆ ಪೂರೈಕೆಯಾಗಿದೆ. 1,08,495 ಮೆಟ್ರಿಕ್ ಟನ್ ವಿತರಿಸಲಾಗಿದೆ. 9,732 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನಿದೆ. ಯೂರಿಯಾ ಗೊಬ್ಬರದ ಬದಲು ನ್ಯಾನೋ ಗೊಬ್ಬರ ಬಳಸಬೇಕು. ಈ ಕುರಿತಂತೆ ರೈತರಿಗೆ ಜಾಗೃತಿ ಮೂಡಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>***</p>.<p class="Briefhead">‘40 ಸಾವಿರ ಹೆಕ್ಟೇರ್ ಬೆಳೆಹಾನಿ’</p>.<p>ಜಿಲ್ಲೆಯಲ್ಲಿ 450 ಮಿ.ಮೀ ವಾಡಿಕೆ ಮಳೆ ಎದುರು 632 ಮಿ.ಮೀ. ಮಳೆಯಾಗಿದೆ. ಶೇ 40ರಷ್ಟು ಹೆಚ್ಚಿನ ಮಳೆಯಾಗಿದೆ. 3.8 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದ್ದು, ಅತಿವೃಷ್ಟಿಯಿಂದ ಜುಲೈನಿಂದ ಆಗಸ್ಟ್ 5ರವರೆಗೆ ಅಂದಾಜು 27,353 ಹೆಕ್ಟೇರ್, ಆಗಸ್ಟ್ 8ರವರೆಗೆ 40,027 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಸಮೀಕ್ಷೆ ನನಗೆ ತೃಪ್ತಿ ತಂದಿಲ್ಲ. ಹಾನಗಲ್ನಂತಹ ಮಲೆನಾಡು ಪ್ರದೇಶದಲ್ಲಿ ಕೇವಲ ಎರಡು ಸಾವಿರ ಹೆಕ್ಟೇರ್ ಬೆಳೆಹಾನಿಯಾಗಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಹೇಳಿದರು.</p>.<p>***</p>.<p>ವಿಮಾ ಕಂಪನಿಗಳು ಸೂಚಿಸಿದಂತೆ ಕೃಷಿ ಅಧಿಕಾರಿಗಳು ವರದಿ ನೀಡಬಾರದು. ಸ್ಥಳ ಪರಿಶೀಲನೆ ನಡೆಸಿ ವಿಮೆ ಸೌಲಭ್ಯ ಕಲ್ಪಿಸಬೇಕು<br />– ಬಿ.ಸಿ.ಪಾಟೀಲ, ಕೃಷಿ ಸಚಿವ</p>.<p>***</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>