ಸಭೆ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಶಿವಾಚಾರ್ಯ ಸ್ವಾಮೀಜಿ, ‘ಹೌದು, ತಾವರೆಕೆರೆ ಮಠದಲ್ಲಿ ಚರ್ಚೆ ನಡೆಯಿತು. ರಾಜ್ಯದ ಅಭಿವೃದ್ಧಿ ಹೇಗೆ ಆಗಬೇಕು? ಯಾವ ರೀತಿ ಅನುದಾನ ಹಂಚಿಕೆ ಆಗಬೇಕು? ಯಾವ್ಯಾವ ಕ್ಷೇತ್ರಗಳಿಗೆ ಆದ್ಯತೆ ಕೊಡಬೇಕು ಎಂಬ ಅಂಶಗಳನ್ನು ಆಧರಿಸಿ ನಾನೊಂದು ಕಾರ್ಯಸೂಚಿ (ಅಜೆಂಡಾ) ಮಾಡಿಕೊಂಡಿದ್ದೆ. ಆ ಕಾರ್ಯಸೂಚಿಗೆ ಅನುಗುಣವಾಗಿ ಕೆಲಸ ಮಾಡಿಸುವುದಾಗಿ ಸಂಸದರು ಭರವಸೆ ನೀಡಿದ್ದರಿಂದ ನಾಮಪತ್ರ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡೆ’ ಎಂದರು.