<p><strong>ಹಾವೇರಿ: ‘</strong>ಪುಸ್ತಕ ಓದುವ ಅಭಿರುಚಿಯು ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಮತ್ತು ಜ್ಞಾನವನ್ನು ಹುಟ್ಟು ಹಾಕುತ್ತದೆ’ ಎಂದು ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗ್ರಂಥಪಾಲಕ ಡಾ.ಆತ್ಮಾನಂದ ಹೊಳೆಯಣ್ಣನವರ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಡಾ.ಎಸ್.ಆರ್. ರಂಗನಾಥನ್ ಅವರ 130ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈಚೆಗೆ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ಎಸ್.ಆರ್. ರಂಗನಾಥನ್ಅವರು ಭಾರತೀಯ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ನೀಡಿದಷ್ಟೇ ಅಲ್ಲದೇ ಗ್ರಂಥಾಲಯಗಳಲ್ಲಿ ಅಳವಡಿಸಿಕೊಳ್ಳಬೇಕಾದ ಪಂಚ ಸೂತ್ರಗಳನ್ನು ರೂಪಿಸುವ ಮೂಲಕ ಭಾರತೀಯ ಗ್ರಂಥಾಲಯಗಳ ಪಿತಾಮಹ ಎನಿಸಿದ್ದಾರೆ ಎಂದರು.</p>.<p>ಕ.ವಿ.ವಿ. ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ.ಪ್ರಶಾಂತ ಎಚ್.ವೈ. ಮಾತನಾಡಿ, ಗ್ರಂಥಾಲಯಗಳು ಶೈಕ್ಷಣಿಕ ಸಂಸ್ಥೆಗಳ ಗರ್ಭಗುಡಿಯಿದ್ದಂತೆ, ಪ್ರತಿಯೊಬ್ಬ ವಿದ್ಯಾರ್ಥಿ ಕೂಡಾ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪುಸ್ತಕಗಳ ಸಾಂಗತ್ಯ ನಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯತ್ತದೆ ಎಂದರು.</p>.<p>ಅತಿಥಿ ಸಹಾಯಕ ಗ್ರಂಥಪಾಲಕ ಪ್ರಕಾಶ ಮುಕಮ್ಮನವರ ನಿರೂಪಿಸಿದರು. ಅನಿತಾ ಹಾಲಮತ, ಡಾ.ಚಿದಾನಂದ ಕಮ್ಮಾರ್, ಪ್ರೊ.ನೀಲಕಂಠ ಗುಡಗೂರ, ಕಚೇರಿ ಅಧೀಕ್ಷಕ ಮಲ್ಲಿಕಾರ್ಜುನ ಚಿಕ್ಕುಂಬಿ ಇದ್ದರು. ಪ್ರೊ.ನೂರುಲ್ಲಾ ಖಾದ್ರಿ ಮುತವಳ್ಳಿ ಸ್ವಾಗತಿಸಿದರು. ಡಾ.ಕವಿತಾ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: ‘</strong>ಪುಸ್ತಕ ಓದುವ ಅಭಿರುಚಿಯು ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಮತ್ತು ಜ್ಞಾನವನ್ನು ಹುಟ್ಟು ಹಾಕುತ್ತದೆ’ ಎಂದು ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಗ್ರಂಥಪಾಲಕ ಡಾ.ಆತ್ಮಾನಂದ ಹೊಳೆಯಣ್ಣನವರ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಡಾ.ಎಸ್.ಆರ್. ರಂಗನಾಥನ್ ಅವರ 130ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈಚೆಗೆ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ಎಸ್.ಆರ್. ರಂಗನಾಥನ್ಅವರು ಭಾರತೀಯ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಶ ನೀಡಿದಷ್ಟೇ ಅಲ್ಲದೇ ಗ್ರಂಥಾಲಯಗಳಲ್ಲಿ ಅಳವಡಿಸಿಕೊಳ್ಳಬೇಕಾದ ಪಂಚ ಸೂತ್ರಗಳನ್ನು ರೂಪಿಸುವ ಮೂಲಕ ಭಾರತೀಯ ಗ್ರಂಥಾಲಯಗಳ ಪಿತಾಮಹ ಎನಿಸಿದ್ದಾರೆ ಎಂದರು.</p>.<p>ಕ.ವಿ.ವಿ. ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಡಾ.ಪ್ರಶಾಂತ ಎಚ್.ವೈ. ಮಾತನಾಡಿ, ಗ್ರಂಥಾಲಯಗಳು ಶೈಕ್ಷಣಿಕ ಸಂಸ್ಥೆಗಳ ಗರ್ಭಗುಡಿಯಿದ್ದಂತೆ, ಪ್ರತಿಯೊಬ್ಬ ವಿದ್ಯಾರ್ಥಿ ಕೂಡಾ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪುಸ್ತಕಗಳ ಸಾಂಗತ್ಯ ನಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯತ್ತದೆ ಎಂದರು.</p>.<p>ಅತಿಥಿ ಸಹಾಯಕ ಗ್ರಂಥಪಾಲಕ ಪ್ರಕಾಶ ಮುಕಮ್ಮನವರ ನಿರೂಪಿಸಿದರು. ಅನಿತಾ ಹಾಲಮತ, ಡಾ.ಚಿದಾನಂದ ಕಮ್ಮಾರ್, ಪ್ರೊ.ನೀಲಕಂಠ ಗುಡಗೂರ, ಕಚೇರಿ ಅಧೀಕ್ಷಕ ಮಲ್ಲಿಕಾರ್ಜುನ ಚಿಕ್ಕುಂಬಿ ಇದ್ದರು. ಪ್ರೊ.ನೂರುಲ್ಲಾ ಖಾದ್ರಿ ಮುತವಳ್ಳಿ ಸ್ವಾಗತಿಸಿದರು. ಡಾ.ಕವಿತಾ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>