<p>ಹಾನಗಲ್ (ಹಾವೇರಿ ಜಿಲ್ಲೆ): ಹೊಸದಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆಮಾಡುವ ಉದ್ದೇಶದಿಂದ ಹಾನಗಲ್ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸಿದ್ಧಪ್ಪ ಹಿರಗಪ್ಪನವರ ಮತ್ತು ಉಪಾಧ್ಯಕ್ಷೆ ಸರಳಾ ಜಾಧವ ಅವರ ವಿರುದ್ಧ ಶುಕ್ರವಾರ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಿ ಪದಚ್ಯುತಗೊಳಿಸಲಾಯಿತು.</p>.<p>24 ಸದಸ್ಯ ಬಲದ ತಾಲ್ಲೂಕು ಪಂಚಾಯ್ತಿಯಲ್ಲಿ 20 ಮಂದಿ ಕಾಂಗ್ರೆಸ್ ಸದಸ್ಯರಿದ್ದು ಅವಿಶ್ವಾಸ ನಿರ್ಣಯಕ್ಕೆ ಅವರೇ ಮುಂದಾದರು. ತಮ್ಮ ಮತ್ತು ಅಧ್ಯಕ್ಷ ಸ್ಥಾನದ ವಿರುದ್ಧವಾಗಿ<br />ಉಪಾಧ್ಯಕ್ಷೆ ಕೂಡ ಕೈ ಎತ್ತಿದ್ದು ವಿಶೇಷವಾಗಿತ್ತು. ಬಿಜೆಪಿ ಸದಸ್ಯರು ಸಭೆಗೆ ಗೈರಾಗಿದ್ದರು.</p>.<p>ಅವಿಶ್ವಾಸ ಗೊತ್ತುವಳಿ ನಿರ್ಣಯದ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ನಡೆಸಿಕೊಟ್ಟರು. ‘ತೆರವುಗೊಂಡ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆಗೆ ದಿನ ನಿಗದಿ ಮಾಡಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>‘ನವೆಂಬರ್ 2ರಂದೇ ನಾನು ರಾಜೀನಾಮೆ ನೀಡಿದ್ದೇನೆ. ಆದರೆ ಕಾರಣಾಂತರಗಳಿಂದ ರಾಜೀನಾಮೆ ಅಂಗೀಕಾರ ಆಗಿರಲಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡು ಕೈ ಎತ್ತಿದ್ದೇನೆ’ ಎಂದು ಪದಚ್ಯುತ ಉಪಾಧ್ಯಕ್ಷೆ ಸರಳಾ ಜಾಧವ ಸ್ಪಷ್ಟಪಡಿಸಿದರು.</p>.<p>ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್ (ಹಾವೇರಿ ಜಿಲ್ಲೆ): ಹೊಸದಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆಮಾಡುವ ಉದ್ದೇಶದಿಂದ ಹಾನಗಲ್ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸಿದ್ಧಪ್ಪ ಹಿರಗಪ್ಪನವರ ಮತ್ತು ಉಪಾಧ್ಯಕ್ಷೆ ಸರಳಾ ಜಾಧವ ಅವರ ವಿರುದ್ಧ ಶುಕ್ರವಾರ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಿ ಪದಚ್ಯುತಗೊಳಿಸಲಾಯಿತು.</p>.<p>24 ಸದಸ್ಯ ಬಲದ ತಾಲ್ಲೂಕು ಪಂಚಾಯ್ತಿಯಲ್ಲಿ 20 ಮಂದಿ ಕಾಂಗ್ರೆಸ್ ಸದಸ್ಯರಿದ್ದು ಅವಿಶ್ವಾಸ ನಿರ್ಣಯಕ್ಕೆ ಅವರೇ ಮುಂದಾದರು. ತಮ್ಮ ಮತ್ತು ಅಧ್ಯಕ್ಷ ಸ್ಥಾನದ ವಿರುದ್ಧವಾಗಿ<br />ಉಪಾಧ್ಯಕ್ಷೆ ಕೂಡ ಕೈ ಎತ್ತಿದ್ದು ವಿಶೇಷವಾಗಿತ್ತು. ಬಿಜೆಪಿ ಸದಸ್ಯರು ಸಭೆಗೆ ಗೈರಾಗಿದ್ದರು.</p>.<p>ಅವಿಶ್ವಾಸ ಗೊತ್ತುವಳಿ ನಿರ್ಣಯದ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ನಡೆಸಿಕೊಟ್ಟರು. ‘ತೆರವುಗೊಂಡ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆಗೆ ದಿನ ನಿಗದಿ ಮಾಡಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>‘ನವೆಂಬರ್ 2ರಂದೇ ನಾನು ರಾಜೀನಾಮೆ ನೀಡಿದ್ದೇನೆ. ಆದರೆ ಕಾರಣಾಂತರಗಳಿಂದ ರಾಜೀನಾಮೆ ಅಂಗೀಕಾರ ಆಗಿರಲಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡು ಕೈ ಎತ್ತಿದ್ದೇನೆ’ ಎಂದು ಪದಚ್ಯುತ ಉಪಾಧ್ಯಕ್ಷೆ ಸರಳಾ ಜಾಧವ ಸ್ಪಷ್ಟಪಡಿಸಿದರು.</p>.<p>ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>