<p><strong>ತಡಸ:</strong> ಸಹ್ಯಾದ್ರಿ ಪರ್ವತ ಶ್ರೇಣಿಯ ಸುಂದರವಾದ ದಟ್ಟ ಅರಣ್ಯದ ಮಧ್ಯೆ ತಾಯಮ್ಮ ದೇವಿಯ ಜಾತ್ರಾ ರಥೋತ್ಸವ ಸಾವಿರಾರು ಭಕ್ತರ ನಡುವೆ ಮಂಗಳವಾರ ಜರುಗಿತು. ಪ್ರತಿ ವರ್ಷ ದೀಪಾವಳಿಯ ನಂತರ ರಥೋತ್ಸವ ಜರಗುತ್ತದೆ.</p>.<p>ತಾಯಮ್ಮ ದೇವಿಯ ದೇವಿಯ ದೇವಸ್ಥಾನದ ಮುಂಭಾಗದಿಂದ ಹೊರಟ ರಥೋತ್ಸವವು ಸಾವಿರಾರು ಭಕ್ತರ ಡೊಳ್ಳು ಕುಣಿತ ಝಾಂಜ ಮೇಳ ಮುಂತಾದ ವಾದ್ಯಗಳ ಮೂಲಕ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯ ತನಕ ತೇರನ್ನು ತದನಂತರ ಮರಳಿ ಅದೇ ಮಾರ್ಗವಾಗಿ ತಂದು ದೇವಸ್ಥಾನದ ಹತ್ತಿರ ತಲುಪಿತು.</p>.<h2>ಜೋಡೆತ್ತು ಚಕ್ಕಡಿ ಮೂಲಕ ಬಂದ ಭಕ್ತರು: </h2><h2></h2><p>ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಜೋಡೆತ್ತು ಚಕ್ಕಡಿ ಕಟ್ಟಿಕೊಂಡು ಎತ್ತುಗಳನ್ನು ಶೃಂಗರಿಸಿ ಬೆಳಗ್ಗೆಯಿಂದ ಬರತೊಡಗಿದರು ವಿಶೇಷವಾಗಿ ಒಂದು ಕುದುರೆ ಒಂದು ಎತ್ತು ಚಕ್ಕಡಿಯನ್ನು ಹೂಡಿಕೊಂಡು ಬಂದಿರುವುದು ಈ ಒಂದು ಜಾತ್ರೆ ಮೆರುಗನ್ನು ಹೆಚ್ಚಿಸಿತು.</p>.<h2>ಸಹ ಪಂಕ್ತಿ ಭೋಜನ ಸವಿದ ಭಕ್ತರು : </h2><h2></h2><p>ಮನೆಯಲ್ಲಿ ವಿವಿಧ ಬಗ್ಗೆ ಅಡುಗೆಯನ್ನು ತಯಾರಿಸಿಕೊಂಡು ಬಂದು ತಮ್ಮ ಕುಟುಂಬ ಹಾಗೂ ಸಂಬಂಧಿಕರೊಡನೆ ಸಮೃದ್ಧವಾಗಿ ಬೆಳೆದಿರುವ ಉತ್ತರ ಕನ್ನಡ ದಟ್ಟ ಅರಣ್ಯದಲ್ಲಿ ಪರಿಸರದ ಮಧ್ಯೆ ಊಟವನ್ನು ಸವಿದ ಭಕ್ತರು.</p>.<p>ದೇವಸ್ಥಾನದಲ್ಲಿ ತೊಟ್ಟಿಲನ್ನು ಕಟ್ಟಿ ಹರಕೆ ತೀರಿಸಲು ಭಕ್ತಿ ಸಮರ್ಪಣೆ ಜೊತೆಗೆ ಹರೇಕೆಗಾಗಿ ಬೀಗ ಹಾಕಿ ಉಡಿ ತುಂಬುವ ದೀರ್ಘ ದಂಡ ನಮಸ್ಕಾರ ಹಲವಾರು ಭಕ್ತರು ಕಾಲ್ನಡಿಗೆ ಮುಖಾಂತರ ಬಂದು ತಾಯಿಯ ದರ್ಶನಕ್ಕೆ ಪಾತ್ರರಾದರು.</p>.<p>ಹುಬ್ಬಳ್ಳಿ ಶಿರಿಸಿ ಮಾರ್ಗ ಬದಲಾಯಿಸಿ ಸಂಚರಿಸಿದ ವಾಹನಗಳು: ಹುಬ್ಬಳ್ಳಿ–ಶಿರಸಿ ಮಾರ್ಗವಾಗಿ ರಾಜ್ಯ ಹೆದ್ದಾರಿಗೆ ಓಡಾಡುವ ವಾಹನಗಳು ಇಂದು ಮಾರ್ಗ ಬದಲಾಯಿಸಿ ತಡಸ ಗ್ರಾಮದಿಂದ ಅಡವಿಸೋಮಪುರ, ಕುನ್ನೂರು ಮಮದಾಪುರ, ತರ್ಲಗಟ್ಟ , ಜೇನಮುರಿ ಮಾರ್ಗವಾಗಿ ಮುಂಡಗೋಡ ಸುಮಾರು 3 ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಡಸ:</strong> ಸಹ್ಯಾದ್ರಿ ಪರ್ವತ ಶ್ರೇಣಿಯ ಸುಂದರವಾದ ದಟ್ಟ ಅರಣ್ಯದ ಮಧ್ಯೆ ತಾಯಮ್ಮ ದೇವಿಯ ಜಾತ್ರಾ ರಥೋತ್ಸವ ಸಾವಿರಾರು ಭಕ್ತರ ನಡುವೆ ಮಂಗಳವಾರ ಜರುಗಿತು. ಪ್ರತಿ ವರ್ಷ ದೀಪಾವಳಿಯ ನಂತರ ರಥೋತ್ಸವ ಜರಗುತ್ತದೆ.</p>.<p>ತಾಯಮ್ಮ ದೇವಿಯ ದೇವಿಯ ದೇವಸ್ಥಾನದ ಮುಂಭಾಗದಿಂದ ಹೊರಟ ರಥೋತ್ಸವವು ಸಾವಿರಾರು ಭಕ್ತರ ಡೊಳ್ಳು ಕುಣಿತ ಝಾಂಜ ಮೇಳ ಮುಂತಾದ ವಾದ್ಯಗಳ ಮೂಲಕ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯ ತನಕ ತೇರನ್ನು ತದನಂತರ ಮರಳಿ ಅದೇ ಮಾರ್ಗವಾಗಿ ತಂದು ದೇವಸ್ಥಾನದ ಹತ್ತಿರ ತಲುಪಿತು.</p>.<h2>ಜೋಡೆತ್ತು ಚಕ್ಕಡಿ ಮೂಲಕ ಬಂದ ಭಕ್ತರು: </h2><h2></h2><p>ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಜೋಡೆತ್ತು ಚಕ್ಕಡಿ ಕಟ್ಟಿಕೊಂಡು ಎತ್ತುಗಳನ್ನು ಶೃಂಗರಿಸಿ ಬೆಳಗ್ಗೆಯಿಂದ ಬರತೊಡಗಿದರು ವಿಶೇಷವಾಗಿ ಒಂದು ಕುದುರೆ ಒಂದು ಎತ್ತು ಚಕ್ಕಡಿಯನ್ನು ಹೂಡಿಕೊಂಡು ಬಂದಿರುವುದು ಈ ಒಂದು ಜಾತ್ರೆ ಮೆರುಗನ್ನು ಹೆಚ್ಚಿಸಿತು.</p>.<h2>ಸಹ ಪಂಕ್ತಿ ಭೋಜನ ಸವಿದ ಭಕ್ತರು : </h2><h2></h2><p>ಮನೆಯಲ್ಲಿ ವಿವಿಧ ಬಗ್ಗೆ ಅಡುಗೆಯನ್ನು ತಯಾರಿಸಿಕೊಂಡು ಬಂದು ತಮ್ಮ ಕುಟುಂಬ ಹಾಗೂ ಸಂಬಂಧಿಕರೊಡನೆ ಸಮೃದ್ಧವಾಗಿ ಬೆಳೆದಿರುವ ಉತ್ತರ ಕನ್ನಡ ದಟ್ಟ ಅರಣ್ಯದಲ್ಲಿ ಪರಿಸರದ ಮಧ್ಯೆ ಊಟವನ್ನು ಸವಿದ ಭಕ್ತರು.</p>.<p>ದೇವಸ್ಥಾನದಲ್ಲಿ ತೊಟ್ಟಿಲನ್ನು ಕಟ್ಟಿ ಹರಕೆ ತೀರಿಸಲು ಭಕ್ತಿ ಸಮರ್ಪಣೆ ಜೊತೆಗೆ ಹರೇಕೆಗಾಗಿ ಬೀಗ ಹಾಕಿ ಉಡಿ ತುಂಬುವ ದೀರ್ಘ ದಂಡ ನಮಸ್ಕಾರ ಹಲವಾರು ಭಕ್ತರು ಕಾಲ್ನಡಿಗೆ ಮುಖಾಂತರ ಬಂದು ತಾಯಿಯ ದರ್ಶನಕ್ಕೆ ಪಾತ್ರರಾದರು.</p>.<p>ಹುಬ್ಬಳ್ಳಿ ಶಿರಿಸಿ ಮಾರ್ಗ ಬದಲಾಯಿಸಿ ಸಂಚರಿಸಿದ ವಾಹನಗಳು: ಹುಬ್ಬಳ್ಳಿ–ಶಿರಸಿ ಮಾರ್ಗವಾಗಿ ರಾಜ್ಯ ಹೆದ್ದಾರಿಗೆ ಓಡಾಡುವ ವಾಹನಗಳು ಇಂದು ಮಾರ್ಗ ಬದಲಾಯಿಸಿ ತಡಸ ಗ್ರಾಮದಿಂದ ಅಡವಿಸೋಮಪುರ, ಕುನ್ನೂರು ಮಮದಾಪುರ, ತರ್ಲಗಟ್ಟ , ಜೇನಮುರಿ ಮಾರ್ಗವಾಗಿ ಮುಂಡಗೋಡ ಸುಮಾರು 3 ಗಂಟೆಗಳ ಕಾಲ ಈ ಮಾರ್ಗದಲ್ಲಿ ಸಂಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>