<p>ಪ್ರಜಾವಾಣಿ ವಾರ್ತೆ</p>.<p><strong>ಬ್ಯಾಡಗಿ: ಕ್ಷ</strong>ಯರೋಗ ಎಂಬುದು ಗಂಭೀರ ಮತ್ತು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಪ್ರಸ್ತುತ ಸೂಕ್ತ ಚಿಕಿತ್ಸೆಯ ಮೂಲಕ ನಿಯಂತ್ರಿಸಲು ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಕ್ಷಯರೋಗ ಮುಕ್ತ ಭಾರತ, ಏಡ್ಸ್, ರೇಬಿಸ್ ಚುಚ್ಚುಮದ್ದು ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಸಕ್ರೀಯ ಕ್ಷಯ ರೋಗಿಗಳು ಕೆಮ್ಮಿದಾಗ, ಸೀನಿದಾಗ ಸಣ್ಣ ಹನಿಗಳ ರೂಪದಲ್ಲಿ ಬ್ಯಾಕ್ಟೀರಿಯಾ ಗಾಳಿಯ ಮೂಲಕ ಇತರರಿಗೆ ಹರಡುತ್ತದೆ. ಈ ಕುರಿತು ಜಾಗೃತಿ ಅಗತ್ಯ. ಕಳೆದ ವರ್ಷ 25 ಲಕ್ಷ ಜನರಿಗೆ ಕ್ಷಯ ರೋಗವಿರುವುದನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಲಾಗಿದೆ’ ಎಂದರು.</p>.<p>ಡಾ.ಬಿ.ಎನ್.ದೇವೆಂದ್ರ ಮಾತನಾಡಿ, ‘ಪೋಲಿಯೊ ಮುಕ್ತಗೊಳಿಸಿದ ಮದರಿಯಲ್ಲಿ ಕ್ಷಯರೋಗವನ್ನು ಮುಕ್ತಗೊಳಿಸಲು ಸರ್ಕಾರ ಹಾಕಿಕೊಂಡಿರುವ ಕಾರ್ಯಕ್ರಮಕ್ಕೆ ಜನರ ಸಹಕಾರ ಅಗತ್ಯ’ ಎಂದರು.</p>.<p>ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕು. ಕ್ಷಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸರ್ಕಾರಿ ಅಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಮಲ್ಲಿಕಾರ್ಜುನ ಕಡ್ಡಿಪುಡಿ, ಡಾ.ಎಂ.ವಿ. ಕಮ್ಮಾರ, ಡಾ.ಸತೀಶ, ಸಿಬ್ಬಂದಿ ಜೆ.ಪಿ.ವಿನಾಯಕ, ಡಿ.ಎನ್.ಚಂದ್ರಶೇಖರ, ವಿ.ಮಮತಾ, ವಿ.ರೇಶ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬ್ಯಾಡಗಿ: ಕ್ಷ</strong>ಯರೋಗ ಎಂಬುದು ಗಂಭೀರ ಮತ್ತು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಪ್ರಸ್ತುತ ಸೂಕ್ತ ಚಿಕಿತ್ಸೆಯ ಮೂಲಕ ನಿಯಂತ್ರಿಸಲು ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಕ್ಷಯರೋಗ ಮುಕ್ತ ಭಾರತ, ಏಡ್ಸ್, ರೇಬಿಸ್ ಚುಚ್ಚುಮದ್ದು ಕುರಿತ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಸಕ್ರೀಯ ಕ್ಷಯ ರೋಗಿಗಳು ಕೆಮ್ಮಿದಾಗ, ಸೀನಿದಾಗ ಸಣ್ಣ ಹನಿಗಳ ರೂಪದಲ್ಲಿ ಬ್ಯಾಕ್ಟೀರಿಯಾ ಗಾಳಿಯ ಮೂಲಕ ಇತರರಿಗೆ ಹರಡುತ್ತದೆ. ಈ ಕುರಿತು ಜಾಗೃತಿ ಅಗತ್ಯ. ಕಳೆದ ವರ್ಷ 25 ಲಕ್ಷ ಜನರಿಗೆ ಕ್ಷಯ ರೋಗವಿರುವುದನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಲಾಗಿದೆ’ ಎಂದರು.</p>.<p>ಡಾ.ಬಿ.ಎನ್.ದೇವೆಂದ್ರ ಮಾತನಾಡಿ, ‘ಪೋಲಿಯೊ ಮುಕ್ತಗೊಳಿಸಿದ ಮದರಿಯಲ್ಲಿ ಕ್ಷಯರೋಗವನ್ನು ಮುಕ್ತಗೊಳಿಸಲು ಸರ್ಕಾರ ಹಾಕಿಕೊಂಡಿರುವ ಕಾರ್ಯಕ್ರಮಕ್ಕೆ ಜನರ ಸಹಕಾರ ಅಗತ್ಯ’ ಎಂದರು.</p>.<p>ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕು. ಕ್ಷಯ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸರ್ಕಾರಿ ಅಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಮಲ್ಲಿಕಾರ್ಜುನ ಕಡ್ಡಿಪುಡಿ, ಡಾ.ಎಂ.ವಿ. ಕಮ್ಮಾರ, ಡಾ.ಸತೀಶ, ಸಿಬ್ಬಂದಿ ಜೆ.ಪಿ.ವಿನಾಯಕ, ಡಿ.ಎನ್.ಚಂದ್ರಶೇಖರ, ವಿ.ಮಮತಾ, ವಿ.ರೇಶ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>