ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನದ ಜತೆ ಜೀವನ ಮೌಲ್ಯ ಕಲಿಸಿ: ಬಸವರಾಜ ಹೊರಟ್ಟಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
Last Updated 30 ಆಗಸ್ಟ್ 2021, 14:20 IST
ಅಕ್ಷರ ಗಾತ್ರ

ಹಾವೇರಿ: ವಿದ್ಯಾರ್ಥಿಗಳಿಗೆ ಜ್ಞಾನದ ಜತೆಗೆ ಜೀವನ ಮೌಲ್ಯಗಳನ್ನು ಬೆಳೆಸಲು ಉತ್ತಮ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಶ್ರಮಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲ್ಲೂಕು ಘಟಕ ಸಹಯೋಗದಲ್ಲಿ ನಗರದ ಗೆಳೆಯರ ಬಳಗ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು, ಶಿಕ್ಷಣ ಇಲಾಖೆ, ಶಿಕ್ಷಕರು ಒಂದು ಕುಟುಂಬದಂತೆ ಕೆಲಸ ಮಾಡಬೇಕು.ಸರ್ಕಾರದಿಂದ ವೇತನ ಪಡೆಯುವ ಪ್ರತಿಯೊಬ್ಬ ಶಿಕ್ಷಕನ ಮೇಲೂ ಸಮಾಜದ ಋಣವಿದೆ. ಆ ಋಣವನ್ನು ತೀರಿಸಲು ಮಕ್ಕಳಿಗೆ ಉತ್ತಮವಾದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಂಸ್ಕಾರ ಹಾಗೂ ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಸಂಸ್ಕಾರವನ್ನು ಕಲಿಯಬೇಕು. ತಂದೆ-ತಾಯಿಗಳ ಶ್ರಮವನ್ನು ನೆನಪಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು. ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದರು.

ಡಿಡಿಪಿಐ ಅಂದಾನಪ್ಪ ವಡಗೇರಿ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲೂ ಶಿಕ್ಷಕರ ಪರಿಶ್ರಮದಿಂದ ಜಿಲ್ಲೆಯ 15 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಹಾವೇರಿ ತಾಲ್ಲೂಕಿನಲ್ಲಿ ಪರಿಚಯಿಸಲಾದ ‘ವರದಾ ಜ್ಞಾನವಾಹಿನಿ’ ಯೂಟ್ಯೂಬ್‌ ಚಾನಲ್ ಅನ್ನು ಜಿಲ್ಲೆಯಾದ್ಯಂತ ವಿಸ್ತರಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಮಾತನಾಡಿ, ‘ಶಿಕ್ಷಕರು ಇನ್ನೂ ಹೆಚ್ಚು ಶ್ರಮ ವಹಿಸಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಬೇಕು’ ಎಂದು ತಿಳಿಸಿದರು.

ಡಿಡಿಪಿಯು ಉಮೇಶ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಬಿ.ರಮೇಶ, ಎಚ್.ಪಿ. ಬಣಕಾರ, ಅಭಿವೃದ್ಧಿ ಉಪನಿರ್ದೇಶಕ ಝಡ್.ಎಂ.ಖಾಜಿ, ಜಿ.ಆರ್.ಭಟ್, ಎನ್.ಐ.ಇಚ್ಚಂಗಿ, ಎಂ.ಎಸ್. ಕೆಂಚನಗೌಡ್ರ, ಸುರೇಶ ಮೂಡಲದವರ, ಎಂ.ಎಸ್. ಮರಿಗೌಡ್ರ, ಎನ್.ಎನ್ ಕುಂದೂರ, ಸಾಹಿತಿ ಸತೀಶ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT