ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಗತಿ ಬಹಿಷ್ಕರಿಸಿ ಶಿಕ್ಷಕರ ಪ್ರತಿಭಟನೆ

Last Updated 9 ಜುಲೈ 2019, 9:51 IST
ಅಕ್ಷರ ಗಾತ್ರ

ಹಾವೇರಿ: ‘ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದಇಲ್ಲಿಗೆ ಸಮೀಪದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆನಡೆಸಿ ಮನವಿ ಸಲ್ಲಿಸಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಆರ್‌.ಅಣ್ಣಯ್ಯನವರ ಮಾತನಾಡಿ, ‘ಸರ್ಕಾರ ಶಿಕ್ಷಕರನ್ನು ಕಡೆಗಣಿಸುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ’ಎಂದು ಹೇಳಿದರು.

‘ಸರ್ಕಾರ ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ‘ವಿಧಾನಸೌಧ ಚಲೋ’ ಹಮ್ಮಿಕೊಳ್ಳುತ್ತವೆ’ಎಂದು ಎಚ್ಚರಿಕೆ ನೀಡಿದರು.

‘ಇಂದು ನಾವೆಲ್ಲಶಿಕ್ಷಕರು ಸಾಮೂಹಿಕ ರಜೆಯನ್ನು ಹಾಕಿ ಪ್ರತಿಭಟನೆ ಮಾಡುತ್ತಿದ್ದೇವೆ. ಪ್ರತಿಭಟನೆ ಅಂಗವಾಗಿ ಇಂದು ತೆಗೆದುಕೊಳ್ಳದೇ ಇರುವ ತರಗತಿಗಳನ್ನು ಭಾನುವಾರ ದಿನ ನಡೆಸುತ್ತೇವೆ ಎಂದು ತಿಳಿಸಿದರು.

‘ವರ್ಗಾವಣೆ, ಬಡ್ತಿ, ವೇತನ ತಾರತಮ್ಯ ನಿವಾರಣೆ ಸೇರಿದಂತೆ ಶಿಕ್ಷಕರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಮುಖ್ಯಮಂತ್ರಿ ಬಹಿರಂಗವಾಗಿ ಘೋಷಿಸಿದ್ದರು. ಆದರೆ, ಈಗ ಅವರು ಮಾತು ಮರೆತು ಶಿಕ್ಷಕರ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿಯನ್ನೇ ಮುಂದುವರಿಸಬೇಕು. ಅಕ್ಟೋಬರ್ ತಿಂಗಳಲ್ಲಿ ಶಿಕ್ಷಕರ ಕೋರಿಕೆ ವರ್ಗಾವಣೆ ನಡೆಸಬೇಕು, ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು, ಶಿಕ್ಷಕರನ್ನು ಶಿಕ್ಷಕೇತರ ಕೆಲಸಗಳಿಗೆ ಬಳಸಿಕೊಳ್ಳುವ ವ್ಯವಸ್ಥೆ ನಿಲ್ಲಬೇಕು, 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸಿನ ಪ್ರಕಾರವೇ ಮುಖ್ಯ ಗುರುಗಳಿಗೆ ಬಡ್ತಿ ನೀಡಬೇಕು’ ಈ ಪ್ರಮುಖ ಬೇಡಿಕೆಗಳು ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ನಗರದ ಜಿಲ್ಲಾ ಗುರುಭವನದಿಂದ ಶಿಕ್ಷಕರು ಬೈಕ್‌ ರ್ಯಾಲಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪುತ್ತಿದ್ದಂತೆಯೇಬೇಡಿಕೆಗಳ ಜೈಕಾರವನ್ನು ಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು. ಬೇಡಿಕೆಗಳನ್ನು ಗೀಗೀಪದದಲ್ಲಿ ಹೇಳುವ ಮೂಲಕ ಪ್ರತಿಭಟನೆ ನಡೆಸಿದರು. ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಇಲ್ಲದಿರುವುದು ಕಂಡು ಬಂದಿತು.

ಸಂಘದ ಉಪಾಧ್ಯಕ್ಷರಾದ ಸಿ.ಬಿ.ಪಾಟೀಲ, ಬಿ.ಅನುರಾಧ, ಸಹ ಕಾರ್ಯದರ್ಶಿಗಳಾದ ವೈ.ಜಿ.ಹರಕುಣಿ, ಸಿ.ಸಿ.ಶೇಬಣ್ಣವರ, ಸಿ.ಬಿ.ಬಂಗೇರ, ಜೆ.ಆರ್‌. ಯಲವದಹಳ್ಳಿ, ಎಸ್‌.ಎನ್‌.ಮುಗಳಿ, ಎಸ್‌.ಎಂ.ಕೌಸರ್‌, ಜಿ.ಎನ್‌.ಜಾವೂರ, ಎ.ಎಫ್‌.ಹೊಸಮನಿ, ಇಚ್ಚಂಗಿಮಠ, ಎನ್‌.ವಿ.ಕಲಕೋಟಿ ಮತ್ತಿತರ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT