<p><strong>ಹಾವೇರಿ</strong>: ಹನುಮನಮಟ್ಟಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರಾಣೆಬೆನ್ನೂರ ತಾಲ್ಲೂಕಿನ ಕಮದೋಡ ಗ್ರಾಮದಲ್ಲಿ ಗುಚ್ಛ ಕ್ಷೇತ್ರ ಪ್ರಾತ್ಯಕ್ಷಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಾದ ಗಣೇಶ ಆರ್. ಕುಂಟೇರ್ ಮತ್ತು ಹನುಮಂತಪ್ಪ ಬಣಕಾರ ಅವರ ತೊಗರಿ ಕ್ಷೇತ್ರಕ್ಕೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭೇಟಿ ನೀಡಿ ತಾಂತ್ರಿಕ ಸಲಹೆ ನೀಡಿದರು.</p>.<p>ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ.ಅಶೋಕ ಪಿ. ಮಾತನಾಡಿ, ‘ಈ ವರ್ಷ ಜಿಲ್ಲೆಯಲ್ಲಿ ಏಕ ಬೆಳೆಯಾಗಿ ಹಾಗೂ ಅಂತರ ಬೆಳೆಗಳಾಗಿ ತೊಗರಿ ಬೆಳೆಯನ್ನು ರೈತರು ಬೆಳೆದಿದ್ದು, ಈ ಬೆಳೆಯು ಕೈಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ. ತೊಗರಿ ಸದ್ಯ ಹೂ ಬಿಡುವ ಹಂತದಲ್ಲಿದೆ. ಉತ್ತಮ ಮಳೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕೀಟ ಬಾಧೆ ಇಲ್ಲ. ಆದ್ದರಿಂದ ರೈತರು ಉತ್ತಮ ಇಳುವರಿ ಬರಬಹುದು’ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಎಂದರು.</p>.<p>ಈ ತೊಗರಿ ಬೆಳೆಯ ಎಲೆಗಳು ಕಟಾವಿನ ಹಂತದಲ್ಲಿ ಒಣಗಿ ಉದುರುವುದರಿಂದ ಭೂಮಿಯ ಭೌತಿಕ ಜೈವಿಕ ಚಟುವಟಿಕೆಗಳಿಗೆ ಚಾಲನೆ ದೊರೆತು ಮಣ್ಣಿನ ಫಲವತ್ತತೆಯಲ್ಲಿ ಸ್ಥಿರತೆಯನ್ನು ಕಾಪಾಡುತ್ತದೆ. ತೊಗರಿ ಬೆಳೆ ಹೊಂದಿರುವ ಪ್ರತಿಯೊಬ್ಬ ರೈತರು ಆರಂಭಿಕವಾಗಿ ಬೇವಿನೆಣ್ಣೆ 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕು. ಎರಡು ಹಾಗೂ ಮೂರನೇ ಹಂತದ ಕೀಡೆಗಳು ಕಂಡು ಬಂದಿದ್ದರೆ ಪ್ರತಿ ಲೀಟರ್ ನೀರಿಗೆ 2 ಮಿ.ಲೀ ಪ್ರೊಫೆನೊಫಾಸ್ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಣೆ ಮಾಡಬೇಕು. ಅಂದರೆ ಮಾತ್ರ ಉತ್ತಮ ಇಳುವರಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ನಂತರ ತೊಗರಿಯಲ್ಲಿ ಪಲ್ಸ್ ಮ್ಯಾಜಿಕ್ ಬಳಸಿ ಇಳುವರಿ ಹೆಚ್ಚಿಸಲು ಈ ‘ಪಲ್ಸ್ ಮ್ಯಾಜಿಕ್’ ಒಂದು ಪೋಷಕಾಂಶಗಳ ಮತ್ತು ಸಸ್ಯ ಪ್ರಚೋದಕಗಳ ಸಮ್ಮಿಶ್ರಣವಾಗಿದೆ. ಪಲ್ಸ್ ಮ್ಯಾಜಿಕ್ ಅನ್ನು ಬಳಸುವುದರಿಂದ ಕೇವಲ ಹೂ ಉದುರುವುದನ್ನು ತಡೆಗಟ್ಟುವುದಲ್ಲದೇ ಕಾಳುಗಳು ಗಾತ್ರ ಮತ್ತು ಗುಣಮಟ್ಟ ವೃದ್ಧಿಯಾಗುವುದರ ಜೊತೆಗೆ ಕಾಯಿಗಳ ಸಂಖ್ಯೆ ಹೆಚ್ಚಾಗುವುದು ಹಾಗೂ ಟೋಂಗೆಗಳಲ್ಲಿ ಕೊನೆಯವರೆಗೂ ಕಾಯಿ ಕಟ್ಟುತ್ತವೆ.</p>.<p>ಈ ಪಲ್ಸ್ ಮ್ಯಾಜಿಕ್ ಅನ್ನು 10 ಗ್ರಾಂ ಪುಡಿ 1 ಲೀಟರ್ ನೀರಿನಲ್ಲಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಸಿಂಪಡಿಸಬೇಕು. ಸಿಂಪಡಣೆಯನ್ನು ಬೆಳಿಗ್ಗೆ 8ರಿಂದ 10 ಹಾಗೂ ಸಂಜೆ 4ರಿಂದ 6 ಗಂಟೆಯವರೆಗೆ ಕೈಗೊಳ್ಳುವುದು ಸೂಕ್ತ. ಪಲ್ಸ್ ಮ್ಯಾಜಿಕಿನ ಮೊದಲನೇ ಸಿಂಪಡಣೆಯನ್ನು ಬೆಳೆಯ ಶೇ 50ರಷ್ಟು ಹೂವಾಡುವ ಹಂತದಲ್ಲಿ ಹಾಗೂ ಎರಡನೇ ಸಿಂಪಡಣೆಯನ್ನು 15 ದಿನಗಳ ನಂತರ ಕೈಗೊಳ್ಳಬೇಕು. ಪಲ್ಸ್ ಮ್ಯಾಜಿಕ್ ಅನ್ನು ಯಾವುದೇ ಕೀಟನಾಶಕ ಅಥವಾ ಶಿಲೀಂಧ್ರ ನಾಶಕ (ತಾಮ್ರಯುಕ್ತ ಹೊರತುಪಡಿಸಿ) ಗಳೊಂದಿಗೆ ಮಿಶ್ರಣ ಮಾಡಬಹುದು. ಪ್ರತಿ ಎಕರೆಗೆ 4 ಕಿ.ಗ್ರಾಂ. ಪಲ್ಸ್ ಮ್ಯಾಜಿಕ್ (2 ಬಾರಿ) ಬಳಸಿ ಹೆಚ್ಚಿನ ಇಳುವರಿ ಪಡೆಯಿರಿ ಎಂದು ಸಲಹೆ ನೀಡಿದರು.</p>.<p>ವಿಪರೀತ ಮಳೆ ಕಾರಣಕ್ಕೆ ಬಹುತೇಕ ಬೆಳೆಗಳು ಹಾಳಾಗಿದ್ದರೆ ತೊಗರಿ ಬೆಳೆಗೆ ಮಾತ್ರ ಮಳೆ ಪೂರಕವಾಗಿದ್ದು, ನಾಲ್ಕಾರು ವರ್ಷಗಳಲ್ಲಿ ಕಂಡರಿಯದ ರೀತಿಯಲ್ಲಿ ಈ ಬಾರಿ ತೊಗರಿ ಬೆಳೆ ಬೆಳೆದಿದೆ ಎಂದು ಪ್ರಗತಿ ಪರ ರೈತರಾದ ಗಣೇಶ ರಾಮಪ್ಪ ಕುಂಟೇರ್ ಹೇಳಿದರು. ಕೇಂದ್ರದ ವಿಜ್ಞಾನಿಗಳಾದ ಡಾ.ಶಾಂತವೀರಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಹನುಮನಮಟ್ಟಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರಾಣೆಬೆನ್ನೂರ ತಾಲ್ಲೂಕಿನ ಕಮದೋಡ ಗ್ರಾಮದಲ್ಲಿ ಗುಚ್ಛ ಕ್ಷೇತ್ರ ಪ್ರಾತ್ಯಕ್ಷಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಾದ ಗಣೇಶ ಆರ್. ಕುಂಟೇರ್ ಮತ್ತು ಹನುಮಂತಪ್ಪ ಬಣಕಾರ ಅವರ ತೊಗರಿ ಕ್ಷೇತ್ರಕ್ಕೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭೇಟಿ ನೀಡಿ ತಾಂತ್ರಿಕ ಸಲಹೆ ನೀಡಿದರು.</p>.<p>ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ.ಅಶೋಕ ಪಿ. ಮಾತನಾಡಿ, ‘ಈ ವರ್ಷ ಜಿಲ್ಲೆಯಲ್ಲಿ ಏಕ ಬೆಳೆಯಾಗಿ ಹಾಗೂ ಅಂತರ ಬೆಳೆಗಳಾಗಿ ತೊಗರಿ ಬೆಳೆಯನ್ನು ರೈತರು ಬೆಳೆದಿದ್ದು, ಈ ಬೆಳೆಯು ಕೈಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ. ತೊಗರಿ ಸದ್ಯ ಹೂ ಬಿಡುವ ಹಂತದಲ್ಲಿದೆ. ಉತ್ತಮ ಮಳೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕೀಟ ಬಾಧೆ ಇಲ್ಲ. ಆದ್ದರಿಂದ ರೈತರು ಉತ್ತಮ ಇಳುವರಿ ಬರಬಹುದು’ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಎಂದರು.</p>.<p>ಈ ತೊಗರಿ ಬೆಳೆಯ ಎಲೆಗಳು ಕಟಾವಿನ ಹಂತದಲ್ಲಿ ಒಣಗಿ ಉದುರುವುದರಿಂದ ಭೂಮಿಯ ಭೌತಿಕ ಜೈವಿಕ ಚಟುವಟಿಕೆಗಳಿಗೆ ಚಾಲನೆ ದೊರೆತು ಮಣ್ಣಿನ ಫಲವತ್ತತೆಯಲ್ಲಿ ಸ್ಥಿರತೆಯನ್ನು ಕಾಪಾಡುತ್ತದೆ. ತೊಗರಿ ಬೆಳೆ ಹೊಂದಿರುವ ಪ್ರತಿಯೊಬ್ಬ ರೈತರು ಆರಂಭಿಕವಾಗಿ ಬೇವಿನೆಣ್ಣೆ 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕು. ಎರಡು ಹಾಗೂ ಮೂರನೇ ಹಂತದ ಕೀಡೆಗಳು ಕಂಡು ಬಂದಿದ್ದರೆ ಪ್ರತಿ ಲೀಟರ್ ನೀರಿಗೆ 2 ಮಿ.ಲೀ ಪ್ರೊಫೆನೊಫಾಸ್ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಣೆ ಮಾಡಬೇಕು. ಅಂದರೆ ಮಾತ್ರ ಉತ್ತಮ ಇಳುವರಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ನಂತರ ತೊಗರಿಯಲ್ಲಿ ಪಲ್ಸ್ ಮ್ಯಾಜಿಕ್ ಬಳಸಿ ಇಳುವರಿ ಹೆಚ್ಚಿಸಲು ಈ ‘ಪಲ್ಸ್ ಮ್ಯಾಜಿಕ್’ ಒಂದು ಪೋಷಕಾಂಶಗಳ ಮತ್ತು ಸಸ್ಯ ಪ್ರಚೋದಕಗಳ ಸಮ್ಮಿಶ್ರಣವಾಗಿದೆ. ಪಲ್ಸ್ ಮ್ಯಾಜಿಕ್ ಅನ್ನು ಬಳಸುವುದರಿಂದ ಕೇವಲ ಹೂ ಉದುರುವುದನ್ನು ತಡೆಗಟ್ಟುವುದಲ್ಲದೇ ಕಾಳುಗಳು ಗಾತ್ರ ಮತ್ತು ಗುಣಮಟ್ಟ ವೃದ್ಧಿಯಾಗುವುದರ ಜೊತೆಗೆ ಕಾಯಿಗಳ ಸಂಖ್ಯೆ ಹೆಚ್ಚಾಗುವುದು ಹಾಗೂ ಟೋಂಗೆಗಳಲ್ಲಿ ಕೊನೆಯವರೆಗೂ ಕಾಯಿ ಕಟ್ಟುತ್ತವೆ.</p>.<p>ಈ ಪಲ್ಸ್ ಮ್ಯಾಜಿಕ್ ಅನ್ನು 10 ಗ್ರಾಂ ಪುಡಿ 1 ಲೀಟರ್ ನೀರಿನಲ್ಲಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಸಿಂಪಡಿಸಬೇಕು. ಸಿಂಪಡಣೆಯನ್ನು ಬೆಳಿಗ್ಗೆ 8ರಿಂದ 10 ಹಾಗೂ ಸಂಜೆ 4ರಿಂದ 6 ಗಂಟೆಯವರೆಗೆ ಕೈಗೊಳ್ಳುವುದು ಸೂಕ್ತ. ಪಲ್ಸ್ ಮ್ಯಾಜಿಕಿನ ಮೊದಲನೇ ಸಿಂಪಡಣೆಯನ್ನು ಬೆಳೆಯ ಶೇ 50ರಷ್ಟು ಹೂವಾಡುವ ಹಂತದಲ್ಲಿ ಹಾಗೂ ಎರಡನೇ ಸಿಂಪಡಣೆಯನ್ನು 15 ದಿನಗಳ ನಂತರ ಕೈಗೊಳ್ಳಬೇಕು. ಪಲ್ಸ್ ಮ್ಯಾಜಿಕ್ ಅನ್ನು ಯಾವುದೇ ಕೀಟನಾಶಕ ಅಥವಾ ಶಿಲೀಂಧ್ರ ನಾಶಕ (ತಾಮ್ರಯುಕ್ತ ಹೊರತುಪಡಿಸಿ) ಗಳೊಂದಿಗೆ ಮಿಶ್ರಣ ಮಾಡಬಹುದು. ಪ್ರತಿ ಎಕರೆಗೆ 4 ಕಿ.ಗ್ರಾಂ. ಪಲ್ಸ್ ಮ್ಯಾಜಿಕ್ (2 ಬಾರಿ) ಬಳಸಿ ಹೆಚ್ಚಿನ ಇಳುವರಿ ಪಡೆಯಿರಿ ಎಂದು ಸಲಹೆ ನೀಡಿದರು.</p>.<p>ವಿಪರೀತ ಮಳೆ ಕಾರಣಕ್ಕೆ ಬಹುತೇಕ ಬೆಳೆಗಳು ಹಾಳಾಗಿದ್ದರೆ ತೊಗರಿ ಬೆಳೆಗೆ ಮಾತ್ರ ಮಳೆ ಪೂರಕವಾಗಿದ್ದು, ನಾಲ್ಕಾರು ವರ್ಷಗಳಲ್ಲಿ ಕಂಡರಿಯದ ರೀತಿಯಲ್ಲಿ ಈ ಬಾರಿ ತೊಗರಿ ಬೆಳೆ ಬೆಳೆದಿದೆ ಎಂದು ಪ್ರಗತಿ ಪರ ರೈತರಾದ ಗಣೇಶ ರಾಮಪ್ಪ ಕುಂಟೇರ್ ಹೇಳಿದರು. ಕೇಂದ್ರದ ವಿಜ್ಞಾನಿಗಳಾದ ಡಾ.ಶಾಂತವೀರಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>