<p><strong>ಹಾವೇರಿ: </strong>ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದ ಕಾರಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಹಿನ್ನೆಡೆಯಾಗಬಾರದು ಎಂಬ ಕಾರಣದಿಂದ ಮನೆಯಲ್ಲಿ ವ್ಯಾಸಂಗ ಮಾಡಲು ಸರ್ಕಾರದ ನಿರ್ಧಾರದಂತೆ ಶಾಸಕ ನೆಹರು ಓಲೇಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಪಠ್ಯಪುಸ್ತಕಗಳನ್ನು ಪಡೆದರು. ಐದೈದು ಮಕ್ಕಳು ಶಾಲೆಗೆ ಬಂದು ಅಂತರ ಕಾಯ್ದುಕೊಂಡು ಪಠ್ಯಪುಸ್ತಕ ಪಡೆಯಲು ಶಿಕ್ಷಣ ಇಲಾಖೆ ಕೈಮ ಕೈಗೊಂಡಿತ್ತು.</p>.<p>‘ಕೊರೊನಾ ವೈರಾಣುವಿನ ಸಂಕಷ್ಟ ಸಂದರ್ಭದಲ್ಲಿ ಮಕ್ಕಳ ಆರೋಗ್ಯ ಸುರಕ್ಷತೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಭ್ಯಾಸ ಮಾಡಿ, ಸಮಯ ವ್ಯರ್ಥ ಮಾಡಬೇಡಿ. ಶಾಲೆ ಆರಂಭವಾಗುವವರೆಗೂ ಕಲಿಕೆ ನಿರಂತರವಾಗಿರಲಿ’ ಎಂದು ಶಾಸಕರು ಮಕ್ಕಳಿಗೆ ಸಲಹೆ ನೀಡಿದರು.</p>.<p>ಹಾವೇರಿ ತಾಲೂಕಿನ ಯತ್ತಿನಹಳ್ಳಿ, ಅಗಡಿ, ಹಳೇರಿತ್ತಿ, ಹೊಸರಿತ್ತಿ ಗ್ರಾಮಗಳ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಕೊರೊನಾ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕುರಿತಂತೆ ಮಕ್ಕಳಿಗೆ ಹಾಗೂ ಪಾಲಕರಿಗೆ ಅರಿವು ಮೂಡಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಿಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ತಾಲೂಕಾ ದೈಹಿಕ ಶಿಕ್ಷಣ ಅಧಿಕಾರಿ ನಾಗರಾಜ ಎನ್. ಇಚ್ಚಂಗಿ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್. ಭಗವಂತಗೌಡ್ರ, ವಲಯದ ಶಿಕ್ಷಣ ಸಂಯೋಜಕರು, ಸಿ.ಆರ್.ಪಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದ ಕಾರಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಹಿನ್ನೆಡೆಯಾಗಬಾರದು ಎಂಬ ಕಾರಣದಿಂದ ಮನೆಯಲ್ಲಿ ವ್ಯಾಸಂಗ ಮಾಡಲು ಸರ್ಕಾರದ ನಿರ್ಧಾರದಂತೆ ಶಾಸಕ ನೆಹರು ಓಲೇಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಪಠ್ಯಪುಸ್ತಕಗಳನ್ನು ಪಡೆದರು. ಐದೈದು ಮಕ್ಕಳು ಶಾಲೆಗೆ ಬಂದು ಅಂತರ ಕಾಯ್ದುಕೊಂಡು ಪಠ್ಯಪುಸ್ತಕ ಪಡೆಯಲು ಶಿಕ್ಷಣ ಇಲಾಖೆ ಕೈಮ ಕೈಗೊಂಡಿತ್ತು.</p>.<p>‘ಕೊರೊನಾ ವೈರಾಣುವಿನ ಸಂಕಷ್ಟ ಸಂದರ್ಭದಲ್ಲಿ ಮಕ್ಕಳ ಆರೋಗ್ಯ ಸುರಕ್ಷತೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಭ್ಯಾಸ ಮಾಡಿ, ಸಮಯ ವ್ಯರ್ಥ ಮಾಡಬೇಡಿ. ಶಾಲೆ ಆರಂಭವಾಗುವವರೆಗೂ ಕಲಿಕೆ ನಿರಂತರವಾಗಿರಲಿ’ ಎಂದು ಶಾಸಕರು ಮಕ್ಕಳಿಗೆ ಸಲಹೆ ನೀಡಿದರು.</p>.<p>ಹಾವೇರಿ ತಾಲೂಕಿನ ಯತ್ತಿನಹಳ್ಳಿ, ಅಗಡಿ, ಹಳೇರಿತ್ತಿ, ಹೊಸರಿತ್ತಿ ಗ್ರಾಮಗಳ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಕೊರೊನಾ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕುರಿತಂತೆ ಮಕ್ಕಳಿಗೆ ಹಾಗೂ ಪಾಲಕರಿಗೆ ಅರಿವು ಮೂಡಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಿಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ತಾಲೂಕಾ ದೈಹಿಕ ಶಿಕ್ಷಣ ಅಧಿಕಾರಿ ನಾಗರಾಜ ಎನ್. ಇಚ್ಚಂಗಿ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್. ಭಗವಂತಗೌಡ್ರ, ವಲಯದ ಶಿಕ್ಷಣ ಸಂಯೋಜಕರು, ಸಿ.ಆರ್.ಪಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>