<p><strong>ಹಾವೇರಿ: </strong>ಕುರಿ ಕಳ್ಳತನಕ್ಕೆ ಬಂದ ಖದೀಮರು ಕುರಿಗಾಹಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ರಾಣೆಬೆನ್ನೂರು ತಾಲ್ಲೂಕು ಗಂಗಾಪುರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.</p>.<p>ಕುರಿಗಾಹಿ ವೆಂಕಟೇಶ ಮತ್ತೂರು (50) ಮೃತಪಟ್ಟವರು. ಗ್ರಾಮದ ಸಮೀಪವಿರುವ ತನ್ನ ಜಮೀನಿನ ಕುರಿದೊಡ್ಡಿಯಲ್ಲಿ ಕುರಿಗಳ ರಕ್ಷಣೆಗಾಗಿ ನಿತ್ಯ ರಾತ್ರಿ ವೆಂಕಟೇಶ್ ಒಬ್ಬರೇ ಮಲಗುತ್ತಿದ್ದರು.</p>.<p>ಮಂಗಳವಾರ ರಾತ್ರಿ ಕುರಿಗಳನ್ನು ಕದಿಯಲು ಬಂದ ಖದೀಮರು ವೆಂಕಟೇಶ್ ಅವರನ್ನು ಹಗ್ಗದಿಂದ ಕಟ್ಟಿಹಾಕಿ ಥಳಿಸಿದ್ದಾರೆ. ಬಲವಾದ ಹೊಡೆತದಿಂದ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ 40 ಕುರಿಗಳನ್ನು ಕದ್ದುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ.</p>.<p>ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಶಾಸಕ ಅರುಣಕುಮಾರ ಪೂಜಾರ ಪೊಲೀಸರಿಗೆ ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆಎಸ್ಪಿ ಹನುಮಂತರಾಯ, ಸಿಪಿಐ ಶ್ರೀಶೈಲ ಚೌಗಲ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಾಕೋಳ ತಾಂಡಾದಲ್ಲಿ 15 ದಿನಗಳ ಹಿಂದೆ ಕುರಿಗಾಹಿಯನ್ನು ಬೆದರಿಸಿ,ಕುರಿದೊಡ್ಡಿಯಲ್ಲಿದ್ದ 30 ಕುರಿಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಕುರಿ ಕಳ್ಳತನಕ್ಕೆ ಬಂದ ಖದೀಮರು ಕುರಿಗಾಹಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ರಾಣೆಬೆನ್ನೂರು ತಾಲ್ಲೂಕು ಗಂಗಾಪುರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.</p>.<p>ಕುರಿಗಾಹಿ ವೆಂಕಟೇಶ ಮತ್ತೂರು (50) ಮೃತಪಟ್ಟವರು. ಗ್ರಾಮದ ಸಮೀಪವಿರುವ ತನ್ನ ಜಮೀನಿನ ಕುರಿದೊಡ್ಡಿಯಲ್ಲಿ ಕುರಿಗಳ ರಕ್ಷಣೆಗಾಗಿ ನಿತ್ಯ ರಾತ್ರಿ ವೆಂಕಟೇಶ್ ಒಬ್ಬರೇ ಮಲಗುತ್ತಿದ್ದರು.</p>.<p>ಮಂಗಳವಾರ ರಾತ್ರಿ ಕುರಿಗಳನ್ನು ಕದಿಯಲು ಬಂದ ಖದೀಮರು ವೆಂಕಟೇಶ್ ಅವರನ್ನು ಹಗ್ಗದಿಂದ ಕಟ್ಟಿಹಾಕಿ ಥಳಿಸಿದ್ದಾರೆ. ಬಲವಾದ ಹೊಡೆತದಿಂದ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ 40 ಕುರಿಗಳನ್ನು ಕದ್ದುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ.</p>.<p>ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಶಾಸಕ ಅರುಣಕುಮಾರ ಪೂಜಾರ ಪೊಲೀಸರಿಗೆ ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆಎಸ್ಪಿ ಹನುಮಂತರಾಯ, ಸಿಪಿಐ ಶ್ರೀಶೈಲ ಚೌಗಲ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕಾಕೋಳ ತಾಂಡಾದಲ್ಲಿ 15 ದಿನಗಳ ಹಿಂದೆ ಕುರಿಗಾಹಿಯನ್ನು ಬೆದರಿಸಿ,ಕುರಿದೊಡ್ಡಿಯಲ್ಲಿದ್ದ 30 ಕುರಿಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>