ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ, ಜನತಂತ್ರ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಕೊಳಕು ಮನಸ್ಸಿನವರು ಬಿಜೆಪಿಯವರು. ಜನಪ್ರತಿನಿಧಿಗಳನ್ನೇ ಖರೀದಿ ಮಾಡಿ ಕೆಟ್ಟ ಸಂಪ್ರದಾಯವನ್ನು ರಾಜ್ಯದಲ್ಲಿ ಹುಟ್ಟು ಹಾಕಿದರು. ಅನೈತಿಕ ಸಂಬಂಧ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.