<p><strong>ರಾಣೆಬೆನ್ನೂರು:</strong> ‘ರಾಜ್ಯ ಸರ್ಕಾರವು ಆರ್ಥಿಕತೆ ಸೇರಿದಂತೆ ಎಲ್ಲ ಹಂತದಲ್ಲೂ ಸಂಪೂರ್ಣ ದಿವಾಳಿಯಾಗಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು, ಬಾಯಿ ಏನೂ ಇಲ್ಲ. ಏನಿದ್ದರೂ ಅವರ ಕಣ್ಣಿಗೆ ಗ್ಯಾರಂಟಿಗಳೆ ಕಾಣುತ್ತಿವೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಳೆ ಕೊರತೆಯಿಂದ ರಾಜ್ಯದಾದ್ಯಂತ ಬರಗಾಲ ಸಾರಿದ್ದಾರೆ. ರೈತರು ಸಾಲ ಭಾರದಿಂದ, ಬಳಲಿ ಬೆಂಡಾಗಿದ್ದಾರೆ. ಮಳೆಬಾರದೆ ಬೆಳೆ ಕಾಣದೆ, ಇಂತಹ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಒಂದು ಪೈಸೆಯು ಬಿಡುಗಡೆ ಮಾಡಿಲ್ಲ‘ ಎಂದು ಆರೋಪಿಸಿದರು.</p>.<p>‘ರೈತ ವಿರೋಧಿ ಸರ್ಕಾರ ಇದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿಟ್ಟಿದ್ದ ₹11 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ. ಇದು ಯಾವ ನ್ಯಾಯ, ರಾಜ್ಯದಲ್ಲಿ ಅಭಿವೃದ್ಧಿ ಇಲ್ಲವಾದರೆ ಇಂತಹ ಸರ್ಕಾರ ಏಕೆ ಇರಬೇಕು‘ ಎಂದರು.</p>.<p>‘ನಮ್ಮ ಸರ್ಕಾರದಲ್ಲಿ ಅತಿವೃಷ್ಟಿಯ ಸಮಯದಲ್ಲಿ ರಾಜ್ಯದಾದ್ಯಂತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಾವಿರಾರು ಕೋಟಿ ಹಣ ಮಂಜೂರು ಮಾಡುವ ಮೂಲಕ ಪರಿಹಾರ ನೀಡಿದ್ದೇವೆ. ಈ ಸರ್ಕಾರ ಕೇಂದ್ರದ ಗರಿಬ್ ಕಲ್ಯಾಣ ಯೋಜನೆ ಅಕ್ಕಿ ಮಾತ್ರ ನೀಡುತ್ತಿದೆ. ಬರೀ ಸುಳ್ಳು ಘೋಷಣೆ ಮಾಡುತ್ತಿದ್ದಾರೆ’ ಎಂದರು.</p>.<p>‘ರಾಜ್ಯದ ಶೇ 60ರಷ್ಟು ಮಹಿಳೆಯರಿಗೆ ಇನ್ನೂ ಗೃಹಲಕ್ಷ್ಮಿ ಹಣ ನೀಡಿಲ್ಲ. ಅಸಮರ್ಪಕ ವಿದ್ಯುತ್ ಪೂರೈಸುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ನಾಮ ಹಾಕಿ ಬರೀ ಗುಂಪುಗಾರಿಕೆ ಮಾಡುತ್ತಾ, ಅಭಿವೃದ್ಧಿಗೆ ಅನುದಾನ ನೀಡದೇ ಜನರನ್ನು ಸತಾಯಿಸುತ್ತಿದೆ‘ ಎಂದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅರಣ್ಯ ಕಾಯ್ದೆ ಜಾರಿಗೆ ಬಂದು 52 ವರ್ಷ ಗತಿಸಿದೆ. ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ, ಹುಲಿ ಉಗುರು ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ನಾಟಕವಾಡುತ್ತಿದೆ. ಅರಣ್ಯ ಇಲಾಖೆ ಇಲ್ಲಿಯವರೆಗೂ ಕಣ್ಣು ಮುಚ್ಚಿ ಕುಳಿತ್ತಿತ್ತಾ‘ ಎಂದು ಆರೋಪಿಸಿದರು.</p>.<p>‘ಸರ್ಕಾರವು ಜನರ ಭಾವನೆಗಳನ್ನು ಬೇರೆಡೆಗೆ ಹೋಗಲು ಇಂತಹ ಆಟವಾಡುತ್ತಿದೆ. 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಬೀಳಿಸಲ್ಲ. ದೊಡ್ಡ ಸಂಖ್ಯೆಯ ಈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪರದಾಡುತ್ತಿದೆ. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಗದಗ ಅಥವಾ ಹಾವೇರಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಯನ್ನೇ ಬಿಜೆಪಿಯಿಂದ ಕಣಕ್ಕಿಳಿಸಬೇಕು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ‘ರಾಜ್ಯ ಸರ್ಕಾರವು ಆರ್ಥಿಕತೆ ಸೇರಿದಂತೆ ಎಲ್ಲ ಹಂತದಲ್ಲೂ ಸಂಪೂರ್ಣ ದಿವಾಳಿಯಾಗಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು, ಬಾಯಿ ಏನೂ ಇಲ್ಲ. ಏನಿದ್ದರೂ ಅವರ ಕಣ್ಣಿಗೆ ಗ್ಯಾರಂಟಿಗಳೆ ಕಾಣುತ್ತಿವೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಳೆ ಕೊರತೆಯಿಂದ ರಾಜ್ಯದಾದ್ಯಂತ ಬರಗಾಲ ಸಾರಿದ್ದಾರೆ. ರೈತರು ಸಾಲ ಭಾರದಿಂದ, ಬಳಲಿ ಬೆಂಡಾಗಿದ್ದಾರೆ. ಮಳೆಬಾರದೆ ಬೆಳೆ ಕಾಣದೆ, ಇಂತಹ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಒಂದು ಪೈಸೆಯು ಬಿಡುಗಡೆ ಮಾಡಿಲ್ಲ‘ ಎಂದು ಆರೋಪಿಸಿದರು.</p>.<p>‘ರೈತ ವಿರೋಧಿ ಸರ್ಕಾರ ಇದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿಟ್ಟಿದ್ದ ₹11 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ. ಇದು ಯಾವ ನ್ಯಾಯ, ರಾಜ್ಯದಲ್ಲಿ ಅಭಿವೃದ್ಧಿ ಇಲ್ಲವಾದರೆ ಇಂತಹ ಸರ್ಕಾರ ಏಕೆ ಇರಬೇಕು‘ ಎಂದರು.</p>.<p>‘ನಮ್ಮ ಸರ್ಕಾರದಲ್ಲಿ ಅತಿವೃಷ್ಟಿಯ ಸಮಯದಲ್ಲಿ ರಾಜ್ಯದಾದ್ಯಂತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಾವಿರಾರು ಕೋಟಿ ಹಣ ಮಂಜೂರು ಮಾಡುವ ಮೂಲಕ ಪರಿಹಾರ ನೀಡಿದ್ದೇವೆ. ಈ ಸರ್ಕಾರ ಕೇಂದ್ರದ ಗರಿಬ್ ಕಲ್ಯಾಣ ಯೋಜನೆ ಅಕ್ಕಿ ಮಾತ್ರ ನೀಡುತ್ತಿದೆ. ಬರೀ ಸುಳ್ಳು ಘೋಷಣೆ ಮಾಡುತ್ತಿದ್ದಾರೆ’ ಎಂದರು.</p>.<p>‘ರಾಜ್ಯದ ಶೇ 60ರಷ್ಟು ಮಹಿಳೆಯರಿಗೆ ಇನ್ನೂ ಗೃಹಲಕ್ಷ್ಮಿ ಹಣ ನೀಡಿಲ್ಲ. ಅಸಮರ್ಪಕ ವಿದ್ಯುತ್ ಪೂರೈಸುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ನಾಮ ಹಾಕಿ ಬರೀ ಗುಂಪುಗಾರಿಕೆ ಮಾಡುತ್ತಾ, ಅಭಿವೃದ್ಧಿಗೆ ಅನುದಾನ ನೀಡದೇ ಜನರನ್ನು ಸತಾಯಿಸುತ್ತಿದೆ‘ ಎಂದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅರಣ್ಯ ಕಾಯ್ದೆ ಜಾರಿಗೆ ಬಂದು 52 ವರ್ಷ ಗತಿಸಿದೆ. ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ, ಹುಲಿ ಉಗುರು ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ನಾಟಕವಾಡುತ್ತಿದೆ. ಅರಣ್ಯ ಇಲಾಖೆ ಇಲ್ಲಿಯವರೆಗೂ ಕಣ್ಣು ಮುಚ್ಚಿ ಕುಳಿತ್ತಿತ್ತಾ‘ ಎಂದು ಆರೋಪಿಸಿದರು.</p>.<p>‘ಸರ್ಕಾರವು ಜನರ ಭಾವನೆಗಳನ್ನು ಬೇರೆಡೆಗೆ ಹೋಗಲು ಇಂತಹ ಆಟವಾಡುತ್ತಿದೆ. 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಬೀಳಿಸಲ್ಲ. ದೊಡ್ಡ ಸಂಖ್ಯೆಯ ಈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪರದಾಡುತ್ತಿದೆ. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಗದಗ ಅಥವಾ ಹಾವೇರಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಯನ್ನೇ ಬಿಜೆಪಿಯಿಂದ ಕಣಕ್ಕಿಳಿಸಬೇಕು‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>