<p><strong>ಹಿರೇಕೆರೂರ:</strong> ನಿವೇಶನದ ಹಕ್ಕು ಪತ್ರ ನೀಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ತಾವರಗಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡರು.</p>.<p>ಗ್ರಾಮದ ಹೊಂಡದ ಸಮೀಪದ ಜನತಾ ಪ್ಲಾಟ್ ಹಾಗೂ ಕಡೆಕೇರಿಯ ಜನವಸತಿ ಪ್ರದೇಶಗಳಲ್ಲಿ ಸುಮಾರು 45 ವರ್ಷಗಳಿಂದ 65 ಕುಟುಂಬಗಳು ವಾಸವಾಗಿವೆ. ಹಿಂದುಳಿದ ಜನಾಂಗಕ್ಕೆ ಸೇರಿರುವ ಈ ಕುಟುಂಬಗಳು ಗ್ರಾಮ ಪಂಚಾಯ್ತಿಯಿಂದ ಹಂಚಿಕೆಯಾದ ನಿವೇಶನಗಳಲ್ಲಿ ವಾಸಿಸಿತ್ತ ಬಂದಿದ್ದರೂ ಇಲ್ಲಿಯವರೆಗೆ ಹಕ್ಕು ಪತ್ರಗಳನ್ನು ನೀಡಿಲ್ಲ. ಪಂಚಾಯ್ತಿ ದಾಖಲೆಗಳಲ್ಲಿ ಹೆಸರಿದ್ದರೂ ಇ-ಸ್ವತ್ತು ಮಾಡಲು ಬರುವುದಿಲ್ಲ ಎಂದು ಪಿಡಿಒ ಸಬೂಬು ಹೇಳುತ್ತಿದ್ದಾರೆ. ಪಿಡಿಒ ಜನರಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಕ್ಕುಪತ್ರ ನೀಡದೇ ಹೋದರೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತ ಚಲಾಯಿಸದೇ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ:</strong> ನಿವೇಶನದ ಹಕ್ಕು ಪತ್ರ ನೀಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ತಾವರಗಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡರು.</p>.<p>ಗ್ರಾಮದ ಹೊಂಡದ ಸಮೀಪದ ಜನತಾ ಪ್ಲಾಟ್ ಹಾಗೂ ಕಡೆಕೇರಿಯ ಜನವಸತಿ ಪ್ರದೇಶಗಳಲ್ಲಿ ಸುಮಾರು 45 ವರ್ಷಗಳಿಂದ 65 ಕುಟುಂಬಗಳು ವಾಸವಾಗಿವೆ. ಹಿಂದುಳಿದ ಜನಾಂಗಕ್ಕೆ ಸೇರಿರುವ ಈ ಕುಟುಂಬಗಳು ಗ್ರಾಮ ಪಂಚಾಯ್ತಿಯಿಂದ ಹಂಚಿಕೆಯಾದ ನಿವೇಶನಗಳಲ್ಲಿ ವಾಸಿಸಿತ್ತ ಬಂದಿದ್ದರೂ ಇಲ್ಲಿಯವರೆಗೆ ಹಕ್ಕು ಪತ್ರಗಳನ್ನು ನೀಡಿಲ್ಲ. ಪಂಚಾಯ್ತಿ ದಾಖಲೆಗಳಲ್ಲಿ ಹೆಸರಿದ್ದರೂ ಇ-ಸ್ವತ್ತು ಮಾಡಲು ಬರುವುದಿಲ್ಲ ಎಂದು ಪಿಡಿಒ ಸಬೂಬು ಹೇಳುತ್ತಿದ್ದಾರೆ. ಪಿಡಿಒ ಜನರಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಕ್ಕುಪತ್ರ ನೀಡದೇ ಹೋದರೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತ ಚಲಾಯಿಸದೇ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>