<p><strong>ಸವಣೂರ: </strong>ಮನೆಯಲ್ಲಿದ್ದ ಅನುಪಯುಕ್ತ ಮೊಬೈಲ್ನಲ್ಲಿ ಆಡವಾಡುತ್ತಿದ್ದ ವೇಳೆ, ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಕಾರ್ತಿಕ ರಮೇಶ ಕಲಾದಗಿ (10) ಗಾಯಗೊಂಡ ಬಾಲಕ. ಮೊಬೈಲ್ ಬ್ಯಾಟರಿ ಸ್ಫೋಟದ ರಭಸಕ್ಕೆ ಬಾಲಕನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದು, ಮುಖಕ್ಕೆ ಬಲವಾದ ಪೆಟ್ಟು ಬಿದ್ದು, ಬ್ಯಾಟರಿಯಲ್ಲಿನ ರಾಸಾಯಿನಿಕ ದ್ರವ ಸಿಡಿದು ಎರಡೂ ಕಣ್ಣುಗಳಿಗೆ ಹಾನಿಯಾಗಿದೆ.</p>.<p>ಆಟವಾಡುವ ವೇಳೆ ಅನುಪಯುಕ್ತ ಮೊಬೈಲ್ ಅನ್ನು ಚಾರ್ಜ್ಗೆ ಹಾಕಲು ಹೋದ ಕಾರಣ ಈ ಅವಘಢ ಸಂಭವಿಸಿದೆ. ಗಾಯಗೊಂಡ ಬಾಲಕನನ್ನು ಕುಟುಂಬಸ್ಥರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಬ್ಯಾಟರಿಯ ವಿಷಕಾರಕ ವಸ್ತು ಮಗುವಿನ ದೇಹಕ್ಕೆ ಹೋಗದಂತೆ ತಡೆಯಲು ಹಾಗೂ ತುಂಡರಿಸಿದ ಕೈಬೆರಳುಗಳ ಶಸ್ತ್ರಚಿಕಿತ್ಸೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಂಕರಗೌಡ ಹಿರೇಗೌಡ್ರ, ಡಾ.ನವೀನ, ಡಾ.ಆಜಿಖಾನ್ ತಂಡ ಕೈಗೊಂಡಿತು.</p>.<p>ಬಲಗಣ್ಣಿಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸವಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರ: </strong>ಮನೆಯಲ್ಲಿದ್ದ ಅನುಪಯುಕ್ತ ಮೊಬೈಲ್ನಲ್ಲಿ ಆಡವಾಡುತ್ತಿದ್ದ ವೇಳೆ, ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಕಾರ್ತಿಕ ರಮೇಶ ಕಲಾದಗಿ (10) ಗಾಯಗೊಂಡ ಬಾಲಕ. ಮೊಬೈಲ್ ಬ್ಯಾಟರಿ ಸ್ಫೋಟದ ರಭಸಕ್ಕೆ ಬಾಲಕನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದು, ಮುಖಕ್ಕೆ ಬಲವಾದ ಪೆಟ್ಟು ಬಿದ್ದು, ಬ್ಯಾಟರಿಯಲ್ಲಿನ ರಾಸಾಯಿನಿಕ ದ್ರವ ಸಿಡಿದು ಎರಡೂ ಕಣ್ಣುಗಳಿಗೆ ಹಾನಿಯಾಗಿದೆ.</p>.<p>ಆಟವಾಡುವ ವೇಳೆ ಅನುಪಯುಕ್ತ ಮೊಬೈಲ್ ಅನ್ನು ಚಾರ್ಜ್ಗೆ ಹಾಕಲು ಹೋದ ಕಾರಣ ಈ ಅವಘಢ ಸಂಭವಿಸಿದೆ. ಗಾಯಗೊಂಡ ಬಾಲಕನನ್ನು ಕುಟುಂಬಸ್ಥರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಬ್ಯಾಟರಿಯ ವಿಷಕಾರಕ ವಸ್ತು ಮಗುವಿನ ದೇಹಕ್ಕೆ ಹೋಗದಂತೆ ತಡೆಯಲು ಹಾಗೂ ತುಂಡರಿಸಿದ ಕೈಬೆರಳುಗಳ ಶಸ್ತ್ರಚಿಕಿತ್ಸೆಯನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಂಕರಗೌಡ ಹಿರೇಗೌಡ್ರ, ಡಾ.ನವೀನ, ಡಾ.ಆಜಿಖಾನ್ ತಂಡ ಕೈಗೊಂಡಿತು.</p>.<p>ಬಲಗಣ್ಣಿಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸವಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>