<p><strong>ಬ್ಯಾಡಗಿ:</strong> ತಾಲ್ಲೂಕಿನ ಕಾಗಿನೆಲೆ ಮತ್ತು ಕುಮ್ಮೂರು ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಅನಿರೀಕ್ಷಿತ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ನರೇಗಾ, ಜಲಜೀವನ ಮಿಷನ್ಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಮಾಹಿತಿ ಪಡೆದರು. ಅಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಉದ್ಯಾನದ ಕಾಮಗಾರಿ ಪರಿಶೀಲಿಸಿದರು.</p>.<p>ಬಳಿಕ ಕುಮ್ಮೂರು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ, ಸರ್ಕಾರಿ ಪ್ರೌಢಶಾಲೆಯ ಭೋಜನಾಲಯ, ಆಟದ ಮೈದಾನ, ಕೆರೆ ನಿರ್ಮಾಣ ಕಾಮಗಾರಿ, ಸಂಜೀವಿನಿ ಶೆಡ್ ಮುಂತಾದವುಗಳನ್ನು ಪರಿಶೀಲಿಸಿದರು. ಬಳಿಕ ನೆಲ್ಲಿಕೊಪ್ಪ ಗ್ರಾಮಕ್ಕೆ ತೆರಳಿದರು. ಅಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಸಂವಾದ ನಡೆಸಿದರು.</p>.<p>ಸಹಾಯಕ ನಿರ್ದೇಶಕ ಪರುಶುರಾಮ ಅಗಸನಹಳ್ಳಿ, ಎಡಿಪಿಸಿ ಮಹಾಂತೇಶ ನರೇಗಲ್, ತಾಂತ್ರಿಕ ಸಂಯೋಜಕ ಸಂತೋಷ ನಾಯ್ಕ, ಐಇಸಿ ಸಂಯೋಜಕ ಸಿ.ಜಿ.ಅಕ್ಷಯ ಹಾಗೂ ಅಭಿವೃದ್ಧಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ತಾಲ್ಲೂಕಿನ ಕಾಗಿನೆಲೆ ಮತ್ತು ಕುಮ್ಮೂರು ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಾಲ್ ಅನಿರೀಕ್ಷಿತ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.</p>.<p>ನರೇಗಾ, ಜಲಜೀವನ ಮಿಷನ್ಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಮಾಹಿತಿ ಪಡೆದರು. ಅಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಉದ್ಯಾನದ ಕಾಮಗಾರಿ ಪರಿಶೀಲಿಸಿದರು.</p>.<p>ಬಳಿಕ ಕುಮ್ಮೂರು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ, ಸರ್ಕಾರಿ ಪ್ರೌಢಶಾಲೆಯ ಭೋಜನಾಲಯ, ಆಟದ ಮೈದಾನ, ಕೆರೆ ನಿರ್ಮಾಣ ಕಾಮಗಾರಿ, ಸಂಜೀವಿನಿ ಶೆಡ್ ಮುಂತಾದವುಗಳನ್ನು ಪರಿಶೀಲಿಸಿದರು. ಬಳಿಕ ನೆಲ್ಲಿಕೊಪ್ಪ ಗ್ರಾಮಕ್ಕೆ ತೆರಳಿದರು. ಅಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಸಂವಾದ ನಡೆಸಿದರು.</p>.<p>ಸಹಾಯಕ ನಿರ್ದೇಶಕ ಪರುಶುರಾಮ ಅಗಸನಹಳ್ಳಿ, ಎಡಿಪಿಸಿ ಮಹಾಂತೇಶ ನರೇಗಲ್, ತಾಂತ್ರಿಕ ಸಂಯೋಜಕ ಸಂತೋಷ ನಾಯ್ಕ, ಐಇಸಿ ಸಂಯೋಜಕ ಸಿ.ಜಿ.ಅಕ್ಷಯ ಹಾಗೂ ಅಭಿವೃದ್ಧಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>