<p><strong>ಹಾವೇರಿ</strong>: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ₹5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಸಂತೋಷ ವಿಜಯಕುಮಾರ ತಿಳಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ವ್ಯಾಪಾರಿಗಳಾದ ಚಿತ್ರಗಿ ಪ್ಲಾಟ್ ಭದ್ರಾಪುರ ಗ್ರಾಮದ ಉಮರ್ ಫಾರೂಕ್ ಮತ್ತು ಪಾಳಾ ಗ್ರಾಮದ ಮಹಮದ್ ಜಾಫರ್ ಖಾನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಹಾವೇರಿ ನಗರದಲ್ಲಿ ಜನವರಿ 29ರಂದು ಶ್ರೀಕಂಠೇಶ್ವರ ಗೃಹೋಪಯೋಗಿ ಮಳಿಗೆಯ ಕಿಟಕಿ ಮುರಿದು ಒಟ್ಟು ₹4.59 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಮತ್ತು ನಗದನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.</p>.<p>ಆರೋಪಿಗಳಿಂದ ಎರಡು ಟಿ.ವಿ., 8 ಮೊಬೈಲ್ ಫೋನ್, 1 ಮೈಕ್ರೋವೇವ್ ಮತ್ತು ಇತರೆ ಗೃಹೋಪಯೋಗಿ ಸಾಮಾನುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಾನಗಲ್ ನಗರದಲ್ಲಿ ಕಳ್ಳತನ ಮಾಡಿದ್ದ ಬೈಕ್ ಅನ್ನೂ ಜಪ್ತಿ ಮಾಡಲಾಗಿದೆ. ಇನ್ನೂ ಎರಡು ಟಿ.ವಿ, 5 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡುವ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.</p>.<p>ಸಿಪಿಐ ಪ್ರಭಾವತಿ ಸಿ.ಶೇತಸನದಿ, ಎಸ್ಐ ಪಿ.ಜಿ.ನಂದಿ, ಪ್ರೊಬೇಷನರಿ ಎಸ್ಐ ಚಂದನ್, ಎಎಸ್ಐ ಎಸ್.ಡಿ. ಸಾಗರ ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ₹5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಸಂತೋಷ ವಿಜಯಕುಮಾರ ತಿಳಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ ವ್ಯಾಪಾರಿಗಳಾದ ಚಿತ್ರಗಿ ಪ್ಲಾಟ್ ಭದ್ರಾಪುರ ಗ್ರಾಮದ ಉಮರ್ ಫಾರೂಕ್ ಮತ್ತು ಪಾಳಾ ಗ್ರಾಮದ ಮಹಮದ್ ಜಾಫರ್ ಖಾನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಹಾವೇರಿ ನಗರದಲ್ಲಿ ಜನವರಿ 29ರಂದು ಶ್ರೀಕಂಠೇಶ್ವರ ಗೃಹೋಪಯೋಗಿ ಮಳಿಗೆಯ ಕಿಟಕಿ ಮುರಿದು ಒಟ್ಟು ₹4.59 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಮತ್ತು ನಗದನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.</p>.<p>ಆರೋಪಿಗಳಿಂದ ಎರಡು ಟಿ.ವಿ., 8 ಮೊಬೈಲ್ ಫೋನ್, 1 ಮೈಕ್ರೋವೇವ್ ಮತ್ತು ಇತರೆ ಗೃಹೋಪಯೋಗಿ ಸಾಮಾನುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಾನಗಲ್ ನಗರದಲ್ಲಿ ಕಳ್ಳತನ ಮಾಡಿದ್ದ ಬೈಕ್ ಅನ್ನೂ ಜಪ್ತಿ ಮಾಡಲಾಗಿದೆ. ಇನ್ನೂ ಎರಡು ಟಿ.ವಿ, 5 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡುವ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.</p>.<p>ಸಿಪಿಐ ಪ್ರಭಾವತಿ ಸಿ.ಶೇತಸನದಿ, ಎಸ್ಐ ಪಿ.ಜಿ.ನಂದಿ, ಪ್ರೊಬೇಷನರಿ ಎಸ್ಐ ಚಂದನ್, ಎಎಸ್ಐ ಎಸ್.ಡಿ. ಸಾಗರ ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>