ಘಟನೆ ನಡೆದ ಎರಡು ದಿನಗಳ ಬಳಿಕ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರು. ಆದರೆ ದೂರು ಪತ್ರದ ಜೊತೆಗೆ ಉತಾರ ಪ್ರತಿ ಸಲ್ಲಿಸುವಂತೆ ಸೂಚಿಸಿದ ಕಾರಣ ಇನ್ನೂ ದೂರು ದಾಖಲಾಗಿಲ್ಲ. ಈ ಮೊದಲು ಶ್ರೀಗಂಧದ ಮರ ಕಳವಾಗಿರುವ ಬಗ್ಗೆ ಮೌಖಿಕವಾಗಿ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಮೊದಲು ಪೊಲೀಸ್ ಠಾಣೆಗೆ ದೂರು ಸಲ್ಲಿಸುವಂತೆ ಸೂಚಿಸಿದ್ದರು ಎಂದು ಲೋಕೋಪಯೋಗಿ ಇಲಾಖೆಯ ಎಇಇ ಉಮೇಶ ನಾಯ್ಕ ತಿಳಿಸಿದ್ದಾರೆ.