<p><strong>ಹಾವೇರಿ: </strong>ಜಿಲ್ಲೆಯಲ್ಲಿ ಬಸವ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ತಡೆಹಿಡಿದ (ಬ್ಲಾಕ್ಡ್) ಮನೆಗಳನ್ನು ವಿಶೇಷ ಮನವಿಯ ಮೇರೆಗೆ ತೆರವುಗೊಳಿಸಲಾಗಿದೆ. ಮಾರ್ಚ್ 14ರೊಳಗಾಗಿ ತಳಪಾಯ ಹಾಕಿ ಜಿ.ಪಿ.ಎಸ್. ಮಾಡಿಸಿಕೊಳ್ಳಲು ಫಲಾನುಭವಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ 2013-14 ರಿಂದ 2017-18ರವರೆಗೆ ಬಸವತಿ ಯೋಜನೆಯಡಿ 5,728, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ 3,831 ಮನೆಗಳು ಸೇರಿ 9559 ಮನೆಗಳನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಫಲಾನುಭವಿಗಳು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿಈ ಅವಕಾಶ ಕಲ್ಪಿಸಿದ್ದಾರೆ ಎಂದರು.</p>.<p>ಮಾರ್ಚ್ 15ರ ನಂತರ ಜಿಪಿಎಸ್ಗೆ ಅಳವಡಿಸಲು ಅವಕಾಶವಿರುವುದಿಲ್ಲ. ಮಂಜೂರಾದ ಸದರಿ ಮನೆಗಳನ್ನು ಶಾಶ್ವತವಾಗಿ ಬ್ಲಾಕ್ ಮಾಡಲಾಗುತ್ತದೆ. ನಂತರದ ದಿನಗಳಲ್ಲಿ ಫಲಾನುಭವಿಗಳ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹1.20 ಲಕ್ಷ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವಸತಿ ಯೋಜನೆಯಡಿ ₹ 1.50 ಲಕ್ಷ ಸರ್ಕಾರದ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಮನರೇಗಾ ಯೋಜನೆಯಡಿ ಒಂದು ನೂರು ಮಾನವ ದಿನಗಳನ್ನು ಮನೆ ನಿರ್ಮಾಣದ ಕಾರ್ಯಕ್ಕಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಜಿಲ್ಲೆಯಲ್ಲಿ ಬಸವ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ತಡೆಹಿಡಿದ (ಬ್ಲಾಕ್ಡ್) ಮನೆಗಳನ್ನು ವಿಶೇಷ ಮನವಿಯ ಮೇರೆಗೆ ತೆರವುಗೊಳಿಸಲಾಗಿದೆ. ಮಾರ್ಚ್ 14ರೊಳಗಾಗಿ ತಳಪಾಯ ಹಾಕಿ ಜಿ.ಪಿ.ಎಸ್. ಮಾಡಿಸಿಕೊಳ್ಳಲು ಫಲಾನುಭವಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ 2013-14 ರಿಂದ 2017-18ರವರೆಗೆ ಬಸವತಿ ಯೋಜನೆಯಡಿ 5,728, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ 3,831 ಮನೆಗಳು ಸೇರಿ 9559 ಮನೆಗಳನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಫಲಾನುಭವಿಗಳು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿಈ ಅವಕಾಶ ಕಲ್ಪಿಸಿದ್ದಾರೆ ಎಂದರು.</p>.<p>ಮಾರ್ಚ್ 15ರ ನಂತರ ಜಿಪಿಎಸ್ಗೆ ಅಳವಡಿಸಲು ಅವಕಾಶವಿರುವುದಿಲ್ಲ. ಮಂಜೂರಾದ ಸದರಿ ಮನೆಗಳನ್ನು ಶಾಶ್ವತವಾಗಿ ಬ್ಲಾಕ್ ಮಾಡಲಾಗುತ್ತದೆ. ನಂತರದ ದಿನಗಳಲ್ಲಿ ಫಲಾನುಭವಿಗಳ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹1.20 ಲಕ್ಷ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವಸತಿ ಯೋಜನೆಯಡಿ ₹ 1.50 ಲಕ್ಷ ಸರ್ಕಾರದ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಮನರೇಗಾ ಯೋಜನೆಯಡಿ ಒಂದು ನೂರು ಮಾನವ ದಿನಗಳನ್ನು ಮನೆ ನಿರ್ಮಾಣದ ಕಾರ್ಯಕ್ಕಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>