<p><strong>ಶಿಗ್ಗಾವಿ:</strong> ತಂಬಾಕು ಸೇವನೆ ಸಮಾಜಕ್ಕೆ ಮಾರಕವಾಗಿದ್ದು, ಅದರಿಂದ ದೂರವಾಗುವುದರ ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿ.ಪಂ.ಸಿಇಒ ಅಕ್ಷಯ ಶ್ರೀಧರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ಗ್ರಾಮೀಣ ಆರೋಗ್ಯ ಅರಿವು ಮೂಡಿಸುವ ವಿಭಾಗ, ಜಿಲ್ಲಾ ಪಂಚಾಯ್ತಿ, ತಾ.ಪಂ. ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆದ ತಂಬಾಕು ಸೇವನೆ ತಡೆ ಆರೋಗ್ಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸದೃಢ ಸಮಾಜ ನಿರ್ಮಾಣಕ್ಕಾಗಿ ಯುವಕರು ದುಶ್ಚಟಗಳನ್ನು ಬಿಡಬೇಕು. ತಂಬಾಕು ಸೇವನೆ ಒಂದು ಚಟವಾಗಿ ಬೆಳೆಯುತ್ತಿದೆ. ಅದರಿಂದಾಗಿ ಇಡೀ ಕುಟುಂಬ ಬೀದಿಗೆ ಬೀಳುವಂತಾಗುತ್ತಿದೆ. ಕುಟುಂಬದ ಹಿತದೃಷ್ಟಿಯಿಂದ ಮತ್ತು ಆರೋಗ್ಯಕರ ಬದುಕು ಸಾಗಿಸಲು ಮುಂದಾಗಬೇಕು’ ಎಂದರು.</p>.<p>ತಾಪಂ.ಇಒ ಪಿ.ವಿಶ್ವನಾಥ, ಧಾರವಾಡ ಮಂಜುನಾಥೇಶ್ವರ ದಂತ ಕಾಲೇಜಿನ ಡಾ.ಹೇಮಾ, ಡಾ.ಕಲ್ಪನಾ, ಯೋಜನಾಧಿಕಾರಿ ಶಿವಾನಂದ ಸಣ್ಣಕ್ಕಿ, ಪ್ರಕಾಶ ಔದಕರ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ, ಡಾ.ವಿದ್ಯಾ ಸೇರಿದಂತೆ ತಾಲ್ಲೂಕು ಪಂಚಾಯ್ತಿ ಕಚೇರಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ತಂಬಾಕು ಸೇವನೆ ಸಮಾಜಕ್ಕೆ ಮಾರಕವಾಗಿದ್ದು, ಅದರಿಂದ ದೂರವಾಗುವುದರ ಜತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿ.ಪಂ.ಸಿಇಒ ಅಕ್ಷಯ ಶ್ರೀಧರ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ಗ್ರಾಮೀಣ ಆರೋಗ್ಯ ಅರಿವು ಮೂಡಿಸುವ ವಿಭಾಗ, ಜಿಲ್ಲಾ ಪಂಚಾಯ್ತಿ, ತಾ.ಪಂ. ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆದ ತಂಬಾಕು ಸೇವನೆ ತಡೆ ಆರೋಗ್ಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸದೃಢ ಸಮಾಜ ನಿರ್ಮಾಣಕ್ಕಾಗಿ ಯುವಕರು ದುಶ್ಚಟಗಳನ್ನು ಬಿಡಬೇಕು. ತಂಬಾಕು ಸೇವನೆ ಒಂದು ಚಟವಾಗಿ ಬೆಳೆಯುತ್ತಿದೆ. ಅದರಿಂದಾಗಿ ಇಡೀ ಕುಟುಂಬ ಬೀದಿಗೆ ಬೀಳುವಂತಾಗುತ್ತಿದೆ. ಕುಟುಂಬದ ಹಿತದೃಷ್ಟಿಯಿಂದ ಮತ್ತು ಆರೋಗ್ಯಕರ ಬದುಕು ಸಾಗಿಸಲು ಮುಂದಾಗಬೇಕು’ ಎಂದರು.</p>.<p>ತಾಪಂ.ಇಒ ಪಿ.ವಿಶ್ವನಾಥ, ಧಾರವಾಡ ಮಂಜುನಾಥೇಶ್ವರ ದಂತ ಕಾಲೇಜಿನ ಡಾ.ಹೇಮಾ, ಡಾ.ಕಲ್ಪನಾ, ಯೋಜನಾಧಿಕಾರಿ ಶಿವಾನಂದ ಸಣ್ಣಕ್ಕಿ, ಪ್ರಕಾಶ ಔದಕರ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ, ಡಾ.ವಿದ್ಯಾ ಸೇರಿದಂತೆ ತಾಲ್ಲೂಕು ಪಂಚಾಯ್ತಿ ಕಚೇರಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>