ಗ್ರಾಮದ ಮುಖಂಡ ಎಚ್.ಪಿ. ರಾಮನಾಥ್, ಈ ಹಿಂದೆ ಉಲ್ಲೋಡು ಗ್ರಾಮ ಪಂಚಾಯಿತಿ ವತಿಯಿಂದ ಬಡವರಿಗೆ ನಿವೇಶನ ನೀಡಿದ್ದಾರೆ. ಆದರೆ ಫಲಾನುಭವಿಗಳು ನಿವೇಶನದ ಜೊತೆಗೆ ಗ್ರಾಮದ ಮುಖ್ಯರಸ್ತೆಯನ್ನೂ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ. ಈ ಹಿಂದೆ ರಸ್ತೆ ಪಕ್ಕದಲ್ಲಿ ಖಾಸಗಿ ವ್ಯಕ್ತಿಯ ಜಮೀನು ಇತ್ತು. ಅದರಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರು. ಈಗ ಅವರು ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದು, ದಾರಿಯನ್ನು ಮುಚ್ಚಲಾಗಿದೆ ಎಂದು ಹೇಳಿದರು.