<p><strong>ಹಾವೇರಿ:</strong> ‘ವಾಹನ ಚಲಾಯಿಸುವಾಗ ನಾನು ಸುರಕ್ಷಿತವಾಗಿದ್ದರೆ ನನ್ನ ಕುಟುಂಬ ಸುರಕ್ಷಿತ’ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ತಿಳಿಸಿದ್ದಾರೆ.</p>.<p>ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಘಟಕದಲ್ಲಿ ಬುಧವಾರ ಫೆ.17ರವರೆಗೆ ಆಯೋಜಿಸಲಾದ 32ನೇ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ’ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಾಹನ ಚಲಾಯಿಸುವಾಗ ಬೇಜವಾಬ್ದಾರಿ, ನಿರ್ಲಕ್ಷ್ಯತನದಿಂದ ಚಾಲನೆ ಹಾಗೂ ಅನಧಿಕೃತವಾಗಿ ಪಾರ್ಕಿಂಗ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ. ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ರಸ್ತೆ ಅಪಘಾತಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಮಾತನಾಡಿ, ‘ಒತ್ತಡದಲ್ಲಿ ವಾಹನ ಚಾಲನೆ ಮಾಡುವುದರಿಂದ ರಸ್ತೆ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ವಾಹನ ಚಾಲಕರು ಸಂಯಮದಿಂದ ಸಮಚಿತ್ತದಿಂದ ವಾಹನ ಚಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್.ಜಗದೀಶ ಮಾತನಾಡಿ, ‘ಪರಿಸರ ಸಂರಕ್ಷಣೆಯತ್ತ ಎಲ್ಲರೂ ಗಮನಹರಿಸುವುದು ಅತ್ಯವಶ್ಯವಾಗಿದೆ. ಮಾನವ ಪರಿಸರ ನಾಶ ಮಾಡುತ್ತಿದ್ದರೆ ಮುಂದಿನ ಪೀಳಿಗೆಗ ಆಮ್ಲಜನಕದ ಕೊರತೆ ಉಂಟಾಗುವ ಸಂಭವವಿದೆ. ಕೂಡಲೇ ಎಲ್ಲರೂ ಜಾಗೃತರಾಗೋಣ’ ಎಂದು ಹೇಳಿದರು.</p>.<p>ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಕಾಳೆಸಿಂಗೆ, ವಿಭಾಗೀಯ ಸಾರಿಗೆ ಅಧಿಕಾರಿ ಎಸ್.ಎಸ್. ಮುಜುಮದಾರ, ತಾಂತ್ರಿಕ ಶಿಲ್ಪಿ ಸಿ.ವಿ.ಇಟಗಿ ಮಾತನಾಡಿ, ಇಂಧನ ಉಳಿತಾಯ ಹಾಗೂ ರಸ್ತೆ ನಿಯಮಗಳ ಪಾಲನೆ ಬಗ್ಗೆ ವಾಹನ ಚಾಲಕರು ಗಮನಹರಿಸುವಂತೆ ಸಲಹೆ ನೀಡಿದರು.</p>.<p>ಘಟಕ ವ್ಯವಸ್ಥಾಪಕ ವ್ಯವಸ್ಥಾಪಕ ಎಚ್.ಡಿ.ಪೂಜಾರ, ಸ್ವಾಗತಿಸಿದರು. ಜಿ.ಬಿ.ಇಟಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ವಾಹನ ಚಲಾಯಿಸುವಾಗ ನಾನು ಸುರಕ್ಷಿತವಾಗಿದ್ದರೆ ನನ್ನ ಕುಟುಂಬ ಸುರಕ್ಷಿತ’ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ತಿಳಿಸಿದ್ದಾರೆ.</p>.<p>ನಗರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಘಟಕದಲ್ಲಿ ಬುಧವಾರ ಫೆ.17ರವರೆಗೆ ಆಯೋಜಿಸಲಾದ 32ನೇ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ’ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಾಹನ ಚಲಾಯಿಸುವಾಗ ಬೇಜವಾಬ್ದಾರಿ, ನಿರ್ಲಕ್ಷ್ಯತನದಿಂದ ಚಾಲನೆ ಹಾಗೂ ಅನಧಿಕೃತವಾಗಿ ಪಾರ್ಕಿಂಗ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ. ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ರಸ್ತೆ ಅಪಘಾತಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಮಾತನಾಡಿ, ‘ಒತ್ತಡದಲ್ಲಿ ವಾಹನ ಚಾಲನೆ ಮಾಡುವುದರಿಂದ ರಸ್ತೆ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ವಾಹನ ಚಾಲಕರು ಸಂಯಮದಿಂದ ಸಮಚಿತ್ತದಿಂದ ವಾಹನ ಚಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್.ಜಗದೀಶ ಮಾತನಾಡಿ, ‘ಪರಿಸರ ಸಂರಕ್ಷಣೆಯತ್ತ ಎಲ್ಲರೂ ಗಮನಹರಿಸುವುದು ಅತ್ಯವಶ್ಯವಾಗಿದೆ. ಮಾನವ ಪರಿಸರ ನಾಶ ಮಾಡುತ್ತಿದ್ದರೆ ಮುಂದಿನ ಪೀಳಿಗೆಗ ಆಮ್ಲಜನಕದ ಕೊರತೆ ಉಂಟಾಗುವ ಸಂಭವವಿದೆ. ಕೂಡಲೇ ಎಲ್ಲರೂ ಜಾಗೃತರಾಗೋಣ’ ಎಂದು ಹೇಳಿದರು.</p>.<p>ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಕಾಳೆಸಿಂಗೆ, ವಿಭಾಗೀಯ ಸಾರಿಗೆ ಅಧಿಕಾರಿ ಎಸ್.ಎಸ್. ಮುಜುಮದಾರ, ತಾಂತ್ರಿಕ ಶಿಲ್ಪಿ ಸಿ.ವಿ.ಇಟಗಿ ಮಾತನಾಡಿ, ಇಂಧನ ಉಳಿತಾಯ ಹಾಗೂ ರಸ್ತೆ ನಿಯಮಗಳ ಪಾಲನೆ ಬಗ್ಗೆ ವಾಹನ ಚಾಲಕರು ಗಮನಹರಿಸುವಂತೆ ಸಲಹೆ ನೀಡಿದರು.</p>.<p>ಘಟಕ ವ್ಯವಸ್ಥಾಪಕ ವ್ಯವಸ್ಥಾಪಕ ಎಚ್.ಡಿ.ಪೂಜಾರ, ಸ್ವಾಗತಿಸಿದರು. ಜಿ.ಬಿ.ಇಟಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>