ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾವೇರಿ | ಚಾಲನೆ ವೇಳೆ ಮೊಬೈಲ್ ಬಳಕೆ: ಜೀವಕ್ಕೆ ಕುತ್ತು

* ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳು * ಸಾವಿಗೆ ‘ಮಿಸ್ಡ್‌ ಕಾಲ್’ ಕೊಡುತ್ತಿರುವ ಚಾಲಕರು– ಸವಾರರು * ಮೌನವಾದ ಪೊಲೀಸರು
Published : 24 ಫೆಬ್ರುವರಿ 2025, 6:19 IST
Last Updated : 24 ಫೆಬ್ರುವರಿ 2025, 6:19 IST
ಫಾಲೋ ಮಾಡಿ
Comments
ಹಾವೇರಿ ನಗರದ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರು 
ಹಾವೇರಿ ನಗರದ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರು 
ಹಾವೇರಿ ನಗರದ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರು – ಪ್ರಜಾವಾಣಿ ಚಿತ್ರಗಳು/ ಮಾಲತೇಶ ಇಚ್ಚಂಗಿ 
ಹಾವೇರಿ ನಗರದ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ಸವಾರರು – ಪ್ರಜಾವಾಣಿ ಚಿತ್ರಗಳು/ ಮಾಲತೇಶ ಇಚ್ಚಂಗಿ 
‘ಶಾಲಾ ಮಕ್ಕಳಿಗೆ ಅಪಾಯ’
‘ಹಾವೇರಿ ಹಾಗೂ ರಾಣೆಬೆನ್ನೂರು ನಗರದಲ್ಲಿ ನಿತ್ಯವೂ ಬಹುತೇಕ ಮಕ್ಕಳು ಬೆಳಿಗ್ಗೆ ಹಾಗೂ ಸಂಜೆ ನಡೆದುಕೊಂಡು ಶಾಲೆಗೆ ಹೋಗಿ ಬರುತ್ತಿದ್ದಾರೆ. ಇವರು ಹೋಗುವ ರಸ್ತೆಯಲ್ಲಿಯೇ ಹಲವರು ಮೊಬೈಲ್‌ನಲ್ಲಿ ಮಾತನಾಡುತ್ತ ಚಾಲನೆ ಮಾಡುತ್ತಿದ್ದಾರೆ. ಇವರ ವರ್ತನೆಯಿಂದಾಗಿ ಶಾಲಾ ಮಕ್ಕಳಿಗೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚಿದೆ’ ಎಂದು ಜನರು ಆತಂಕ ವ್ಯಕ್ತಪಡಿಸಿದರು. ‘ಶಾಲೆ ಮಕ್ಕಳು ರಸ್ತೆಯಲ್ಲಿ ಹೊರಟಿರುವುದು ಗೊತ್ತಿದ್ದರೂ ಸವಾರರು ತಮ್ಮ ವರ್ತನೆಯನ್ನು ಮುಂದುವರಿಸಿದ್ದಾರೆ. ಇಂಥ ಸವಾರರು ಹಾಗೂ ಚಾಲಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರ ವಾಹನವನ್ನು ಜಪ್ತಿ ಮಾಡಿ ಚಾಲನಾ ಪರವಾನಗಿಯನ್ನು ರದ್ದುಪಡಿಸಬೇಕು’ ಎಂದು ಅವರು ಒತ್ತಾಯಿಸಿದರು.
ಕರ್ಕಶ ಸೈಲೆನ್ಸರ್ ದೋಷಪೂರಿತ ಫಲಕ
‘ಜಿಲ್ಲೆಯ ಹಲವು ಬೈಕ್ ಹಾಗೂ ವಾಹನಗಳ ಮಾಲೀಕರು ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿದ್ದಾರೆ. ಕೆಲವರು ನೋಂದಣಿ ಸಂಖ್ಯೆ ಫಲಕದಲ್ಲಿ ನಂಬರ್ ಬದಲು ತಮ್ಮಿಷ್ಟದಂತೆ ಬರೆದುಕೊಂಡಿದ್ದಾರೆ. ಇಂಥ ಬೈಕ್ ಹಾಗೂ ವಾಹನಗಳು ಕಂಡರೂ ಪೊಲೀಸರು ಕ್ರಮ ಜರುಗಿಸುತ್ತಿಲ್ಲ’ ಎಂದು ಜನರು ಬೇಸರ ವ್ಯಕ್ತಪಡಿಸಿದರು.
ಕಣ್ಣಿದ್ದು ಕುರುಡಾದ ಸಂಚಾರ ಪೊಲೀಸರು
‘ಹಳೇ ಪಿ.ಬಿ.ರಸ್ತೆಯಲ್ಲಿ ನಿತ್ಯವೂ ಹಲವರು ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ಸಂಚಾರ ಪೊಲೀಸ್ ಠಾಣೆಯಿದೆ. ಜೊತೆಗೆ ಹಲವು ವೃತ್ತಗಳಲ್ಲಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಾಲನೆ ಮಾಡುವವರು ಕಣ್ಣಿಗೆ ಬಿದ್ದರೂ ಕುರುಡರಂತೆ ವರ್ತಿಸುತ್ತಿದ್ದಾರೆ’ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ‘ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಾಲನೆ ಮಾಡಿದರೆ ಅವರಿಗಷ್ಟೇ ತೊಂದರೆಯಾದರೆ ಪರವಾಗಿಲ್ಲ. ಆದರೆ ಅವರಿಂದ ರಸ್ತೆಯಲ್ಲಿ ಹೋಗುವ ಅಮಾಯಕರಿಗೆ ತೊಂದರೆ ಆಗುವುದು ಬೇಡ. ಇನ್ನಾದರೂ ಪೊಲೀಸರು ಎಚ್ಚೆತ್ತುಕೊಂಡು ಪ್ರತಿ ರಸ್ತೆಯಲ್ಲೂ ತಪಾಸಣೆ ಬಿಗಿಗೊಳಿಸಬೇಕು. ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡುವವರು ಹಾಗೂ ಹೆಲ್ಮೆಟ್ ಧರಿಸದವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಮೊಬೈಲ್ ಬಳಸುವ ಕೆಎಸ್‌ಆರ್‌ಟಿಸಿ ಚಾಲಕರು
ಜಿಲ್ಲೆಯಲ್ಲಿ ಸಂಚಸಿರುವ ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಸಹ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುತ್ತಿದ್ದು ಇವರ ವರ್ತನೆಯಿಂದಾಗಿ ಬಸ್‌ ಪ್ರಯಾಣಿಕರು ಭಯದಲ್ಲಿ ಸಂಚರಿಸುತ್ತಿದ್ದಾರೆ. ಹಾವೇರಿ ರಾಣೆಬೆನ್ನೂರು ಬ್ಯಾಡಗಿ ಹಾನಗಲ್ ರಟ್ಟೀಹಳ್ಳಿ ಹಿರೇಕೆರೂರು ಶಿಗ್ಗಾವಿ ಹಾಗೂ ಸವಣೂರಿನಲ್ಲಿ ಬಸ್ ಚಾಲನೆ ಮಾಡುವ ಹಲವು ಚಾಲಕರ ಬಳಿ ಮೊಬೈಲ್ ಇದೆ. ಬಸ್ ಚಾಲನೆ ಸಂದರ್ಭದಲ್ಲಿ ಅವರು ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ. ಮೊಬೈಲ್‌ನಲ್ಲಿ ಮಾತನಾಡುತ್ತಲೇ ಬಸ್‌ ಚಾಲನೆ ಮಾಡುತ್ತಿದ್ದಾರೆ. ಇಂಥ ಚಾಲಕರ ವರ್ತನೆಗಳನ್ನು ಪ್ರಯಾಣಿಕರು ಚಿತ್ರೀಕರಣ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುತ್ತಿದ್ದಾರೆ. ‘ಚಾಲನೆ ವೇಳೆ ಮೊಬೈಲ್ ಬಳಸಬೇಡಿ’ ಎಂದು ಪ್ರಯಾಣಿಕರು ಆಗಾಗ ಚಾಲಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಪ್ರಯಾಣಿಕರ ಮೇಲೆಯೇ ಹರಿಹಾಯುತ್ತಿರುವ ಚಾಲಕರು ‘ನಾನು ಮೊಬೈಲ್ ಬಳಕೆ ಮಾಡುತ್ತೇವೆ. ಯಾರಿಗೆ ಬೇಕಾದರೂ ದೂರು ಕೊಡು’ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ. ಚಾಲಕರು ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ‘ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಪ್ರಯಾಣಿಕರಿಗೆ ಹೆಚ್ಚು ಸುರಕ್ಷತೆ ಒದಗಿಸುವುದು ಸಂಸ್ಥೆಯ ಕರ್ತವ್ಯ. ಆದರೆ ಚಾಲಕರು ಚಾಲನೆ ವೇಳೆ ಮೊಬೈಲ್ ಬಳಸಿ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುತ್ತಿದ್ದಾರೆ. ಇಂಥವರ ವಿರುದ್ಧ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಹೊಣೆಯಾಗಬೇಕಾಗುತ್ತದೆ’ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT