ಭತ್ತದ ಬೆಳೆ ನಾಶ: ‘ಭತ್ತದ ಪಸಲು ಕಟಾವಿಗೆ ಬಂದಿತ್ತು. ಕಟಾವಿಗೆ ಕೆಲವು ದಿನಗಳ ಕಾಲಾವಕಾಶ ಕೊಡಿ ಎಂದು ಕೇಳಿದರೂ ಅವಕಾಶ ನೀಡದೆ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಪೊಲೀಸರು ಒಟ್ಟಾಗಿ ಜೆಸಿಬಿಯಿಂದ ಕಾಲುವೆ ತೆಗೆದು ಒಂದು ಎಕರೆ ಭತ್ತ ನಷ್ಟವಾಗುವಂತೆ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಈ ಜಾಗದಲ್ಲಿ ನಾವು ಕೃಷಿ ಚಟುವಟಿಕೆ ನಡೆಸುತ್ತಿದ್ದೇವೆ’ ಎಂದು ಒತ್ತುವರಿದಾರರು ಎನ್ನಲಾದ ಸಿದ್ದರಾಮಪ್ಪ ಹೊಸಮನಿ ದೂರಿದ್ದಾರೆ.